Election Expenses: ಕೈನ “ದೇಶಕ್ಕಾಗಿ ದೇಣಿಗೆ” ನಾಳೆ ಶುರು
ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಖರ್ಗೆ ಉದ್ಘಾಟನೆ
Team Udayavani, Dec 16, 2023, 9:08 PM IST
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಕಾಂಗ್ರೆಸ್ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ, “ಕ್ರೌಡ್ ಫಂಡಿಂಗ್’ ಕಾರ್ಯಕ್ರಮ ಆರಂಭಿಸಲು ಮುಂದಾಗಿದೆ. “ದೇಶಕ್ಕಾಗಿ ದೇಣಿಗೆ ನೀಡಿ’ ಧ್ಯೇಯ ವಾಕ್ಯದ ಅನ್ವಯ ಅದನ್ನು ಕೈಗೊಳ್ಳಲಾಗುತ್ತಿದೆ.
ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವವರು ಸೋಮವಾರ (ಡಿ.18)ರಂದು ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅಜಯ್ ಮಕೇನ್ ಮತ್ತು ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರು 1920-21ನೇ ಸಾಲಿನಲ್ಲಿ ಕೈಗೊಂಡಿದ್ದ “ತಿಲಕ್ ಸ್ವರಾಜ್ ಫಂಡ್’ ಅಭಿಯಾನದಿಂದ ಸ್ಫೂರ್ತಿ ಪಡೆದು ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು. ಇದರ ಜತೆಗೆ ಕಾಂಗ್ರೆಸ್ ಸ್ಥಾಪನೆಯಾಗಿ 138 ವರ್ಷಗಳು ಪೂರ್ತಿಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ 138 ರೂ., 1,380 ರೂ., 13,800 ರೂ. ನೀಡುವ ಉದ್ದೇಶ ಹೊಂದಿದೆ ಎಂದು ಮಕೇನ್, ವೇಣುಗೋಪಾಲ್ ಹೇಳಿದ್ದಾರೆ.
ಪ್ರದೇಶ ಕಾಂಗ್ರಸ್ ಸಮಿತಿ ಪದಾಧಿಕಾರಿಗಳು, ಚುನಾಯಿತ ಸದಸ್ಯರು, ಜಿಲ್ಲಾ ಮುಖಂಡರು 1,380 ರೂ. ದೇಣಿಗೆ ನೀಡಬೇಕು ಎಂದು ಮಕೇನ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
MUST WATCH
ಹೊಸ ಸೇರ್ಪಡೆ
Ajekar Case: ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು
Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.