Parliament: ಭದ್ರತಾ ಲೋಪ ತನಿಖೆಗೆ ಸಮಿತಿ- ಸಂಸದರಿಗೆ ಬರೆದ ಪತ್ರದಲ್ಲಿ ಸ್ಪೀಕರ್‌ ಘೋಷಣೆ

ಸಲಹೆ ನೀಡಲು ಮುಖಂಡರಿಗೆ ಮನವಿ

Team Udayavani, Dec 17, 2023, 12:38 AM IST

om birla

ಹೊಸದಿಲ್ಲಿ: ಸಂಸತ್‌ ಭವನ ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಲಾಗಿದೆ. ಈ ಬಗ್ಗೆ ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಶನಿವಾರ ಸಂಸದರಿಗೆ ಬರೆದ ಪತ್ರದಲ್ಲಿ ಈ ಅಂಶ ಸ್ಪಷ್ಟಪಡಿಸಿದ್ದಾರೆ. ಡಿ.13ರಂದು ನಡೆದ ಘಟನೆ ಒಟ್ಟಾರೆ ಕಳವಳಕಾರಿಯಾಗಿದೆ ಎಂದು ಹೇಳಿದ್ದು, ಉದ್ದೇಶಿತ ತನಿಖಾ ಸಮಿತಿ ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ. ಶೀಘ್ರವೇ ಲೋಕಸಭೆಗೆ ವರದಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.

ಈ ಸಮಿತಿ ಸಂಸತ್‌ನ ಭದ್ರತೆಗೆ ಸಂಬಂಧಿಸಿದಂತೆ ಇರುವ ಎಲ್ಲ ಅಂಶಗಳ ಬಗ್ಗೆ ಪರಿಶೀಲನೆ ನಡೆಸಲಿದೆ. ಡಿ.13ರಂದು ನಡೆದ ಘಟನೆ ಮತ್ತೆ ಪುನರಾವರ್ತನೆಯಾಗದಂತೆ ಮಾರ್ಗಸೂಚಿಯನ್ನು ನೀಡಲಿದೆ ಎಂದಿದ್ದಾರೆ. ಇದರ ಜತೆಗೆ ಸಂಸದರು ಕೂಡ ಸಂಸತ್‌ ಭವನದ ಭದ್ರತಾ ವ್ಯವಸ್ಥೆಗಳನ್ನು ಮೇಲ್ದರ್ಜೆಗೆ ಏರಿಸುವುದರ ಬಗ್ಗೆ ಸಲಹೆಗಳನ್ನು ನೀಡಬಹುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮತ್ತೂಬ್ಬ ಆರೋಪಿ ಮಹೇಶ್‌ ಬಂಧನ: ಪ್ರಕರಣದ ಮಾಸ್ಟರ್‌ವೆುçಂಡ್‌ ಲಲಿತ್‌ಗೆ ದಿಲ್ಲಿಯಿಂದ ಪರಾರಿಯಾಗಲು ಸಹಾಯ ಮಾಡಿದ ಮಹೇಶ್‌ ಕುಮಾವತ್‌ನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಆತನನ್ನು 7 ದಿನಗಳ ಪೊಲೀಸ್‌ ವಶಕ್ಕೊಪಿಸಿ ಹೊಸದಿಲ್ಲಿಯ ಸ್ಥಳೀಯ ಕೋರ್ಟ್‌ ಆದೇಶ ನೀಡಿದೆ.

ಕೋರ್ಟ್‌ಗೆ ಅರ್ಜಿ: ಆರೋಪಿ ನೀಲಂ ದೇವಿ ವಿರುದ್ಧ ದಾಖ ಲಾದ ಎಫ್ಐಆರ್‌ನ ಪ್ರತಿಯನ್ನು ಒದಗಿಸುವಂತೆ ಕೋರಿ ಆಕೆಯ ಹೆತ್ತವರು ಶುಕ್ರವಾರ ದಿಲ್ಲಿಯ ಪಟಿಯಾಲ ಹೌಸ್‌ ಕೋರ್ಟ್‌ನ ಮೊರೆ ಹೋಗಿದ್ದಾರೆ. ಜತೆಗೆ ಪೊಲೀಸ್‌ ವಶದಲ್ಲಿರುವ ತಮ್ಮ ಪುತ್ರಿಯನ್ನು ಭೇಟಿಯಾಗಲು ಅವಕಾಶ ನೀಡುವಂತೆಯೂ ಅವರು ಮನವಿ ಮಾಡಿದ್ದಾರೆ.

ಕಾಂಬೋಡಿಯಾಗೆ ಹೋಗಿ ಬಂದಿದ್ದ ಮನೋರಂಜನ್‌
ಸಂಸತ್‌ ಭದ್ರತಾ ಲೋಪ ಪ್ರಕರಣದ ಆರೋಪಿ, ಮೈಸೂರಿನ ಮನೋರಂಜನ್‌ ಒಂದು ಬಾರಿ ವಿದೇಶ ಪ್ರವಾಸ ಮಾಡಿದ್ದ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಎಂಜಿನಿಯರಿಂಗ್‌ ಕೋರ್ಸ್‌ ಅನ್ನು ಅರ್ಧಕ್ಕೇ ನಿಲ್ಲಿಸಿದ ಬಳಿಕ 2014ರಲ್ಲಿ ಮನೋರಂಜನ್‌ ಯಾವುದೇ ಪರಿಹಾರ ಕಾರ್ಯಾಚರಣೆಯಲ್ಲಿ ಸ್ವಯಂಸೇವಕನಾಗಿ ಕೆಲಸ ಮಾಡಲೆಂದು ಕಾಂಬೋಡಿಯಾಗೆ ಹೋಗಿ ಬಂದಿದ್ದ. ಅವನ ಅಂತಾರಾಷ್ಟ್ರೀಯ ಪ್ರಯಾಣದ ದಾಖಲೆ ಪರಿಶೀಲನೆ ವೇಳೆ ಈ ವಿಚಾರ ತಿಳಿದುಬಂದಿದೆ. ಮೈಸೂರಿನಲ್ಲಿರುವ ಆತನ ಹೆತ್ತವರು ಕೂಡ ಈ ವಿಚಾರವನ್ನು ಒಪ್ಪಿಕೊಂಡಿದ್ದು, ವಿಶ್ವಸಂಸ್ಥೆಯಂಥ ಸಂಸ್ಥೆಯೊಂದರಲ್ಲಿ ಸ್ವಯಂಸೇವಕನಾಗಿ ದುಡಿಯಲೆಂದು ಕಾಂಬೋಡಿಯಾಗೆ ಹೋಗಿ ಬಂದಿದ್ದ ಎಂದಿದ್ದಾರೆ. ಜತೆಗೆ ಮತ್ತೂಬ್ಬ ಆರೋಪಿ ಸಾಗರ್‌ ಶರ್ಮಾ ಒಮ್ಮೆಯೂ ಮೈಸೂರಿನ ನಮ್ಮ ಮನೆಗೂ ಭೇಟಿ ನೀಡಿಲ್ಲ ಎಂದೂ ಅವರು ವಿಚಾರಣಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸಂಸದ ಪ್ರತಾಪ್‌ ಸಿಂಹ ಹೇಳಿಕೆ ದಾಖಲಿಗೆ ಚಿಂತನೆ?
ಪಾಸ್‌ ನೀಡಿದ್ದ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆ ದಾಖಲಿಸಲು ದಿಲ್ಲಿ ಪೊಲೀಸರ ವಿಶೇಷ ಘಟಕ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಕಳೆದ ಬುಧವಾರ ನಡೆದ ಘಟನೆಯ ಮರುಸೃಷ್ಟಿಗಾಗಿ ಎಲ್ಲ ಆರೋಪಿಗಳನ್ನೂ ಸಂಸತ್‌ ಭವನದ ಒಳಗೆ ಕರೆದೊಯ್ಯಲು ಕೂಡ ತನಿಖಾಧಿಕಾರಿಗಳು ಚಿಂತನೆ ನಡೆಸಿದ್ದು, ಇದಕ್ಕಾಗಿ ಸಂಸತ್‌ನ ಅನುಮತಿ ಕೇಳುವ ಸಾಧ್ಯತೆಯಿದೆ. ಇದರೊಂದಿಗೆ ಲಲಿತ್‌ ಝಾನನ್ನು ರಾಜಸ್ಥಾನಕ್ಕೆ ಕರೆದೊಯ್ದು, ಆತ ಎಲ್ಲಿ ತಂಗಿದ್ದ ಮತ್ತು ಮೊಬೈಲ್‌ ಫೋನ್‌ಗಳನ್ನು ಸುಟ್ಟುಹಾಕಿದ್ದಾನೆ ಎನ್ನಲಾದ ಸ್ಥಳವನ್ನೂ ಪರಿಶೀಲನೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸತ್‌ ಘಟನೆಗೆ ನಿರುದ್ಯೋಗ ಕಾರಣ: ರಾಹುಲ್‌ ಗಾಂಧಿ
ಭದ್ರತಾ ವೈಫ‌ಲ್ಯ ಘಟನೆ ಸಂಬಂಧ ಕೇಂದ್ರ ವಿರುದ್ಧ ವಾಗ್ಧಾಳಿ ನಡೆಸಿರುವ ಸಂಸದ ರಾಹುಲ್‌ ಗಾಂಧಿ, “ಘಟನೆಗೆ ನಿರುದ್ಯೋಗ ಮತ್ತು ಹಣದುಬ್ಬರವೇ ಕಾರಣ’ ಎಂದು ಆರೋಪಿಸಿದ್ದಾರೆ. “ಲೋಕಸಭೆಯಲ್ಲಿ ಗಂಭೀರ ವಾದ ಭದ್ರತಾ ಲೋಪ ಆಗಿದೆ. ಆದರೆ ಇದಕ್ಕೆ ಕಾರಣ, ಪ್ರಧಾನಿ ಮೋದಿಯವರ ನೀತಿಯಿಂದ ಹೆಚ್ಚಾಗಿರುವ ನಿರುದ್ಯೋಗ ಮತ್ತು ಹಣದುಬ್ಬರ. ಎಲ್ಲಿದೆ ಉದ್ಯೋಗಾವಕಾಶ? ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಬೇಕು’ ಎಂದಿದ್ದಾರೆ..

ಬಹಿರಂಗಪಡಿಸಿ: ರಾಹುಲ್‌ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್‌ ಮಾಳವೀಯ “ರಾಹುಲ್‌ ಗಾಂಧಿ ಯಾವತ್ತೂ ನಿರಾಸೆ ಮೂಡಿಸುವುದಿಲ್ಲ; ಸದಾ ವ್ಯರ್ಥ ಮಾತುಗಳನ್ನೇ ಆಡುತ್ತಾರೆ. ಭಾರತದಲ್ಲಿ ಈಗ ನಿರು ದ್ಯೋಗವು ಶೇ.3.2ರಷ್ಟಿದೆ. ಇದು ಕಳೆದ 6 ವರ್ಷಗಳಲ್ಲೇ ಅತೀ ಕನಿಷ್ಠ. ಇಂಥ ಹೇಳಿಕೆಗಳನ್ನು ನೀಡುವ ಬದಲು ರಾಹುಲ್‌ ಅವರು, ಸಂಸತ್‌ನ ಭದ್ರತೆ ಉಲ್ಲಂಘಿಸಿದ ಆರೋಪಿಗಳಿಗೆ ಕಾಂಗ್ರೆಸ್‌, ಟಿಎಂಸಿ ಮತ್ತು ಸಿಪಿಎಂನೊಂದಿಗಿನ ನಂಟೇನು ಎಂಬ ಬಗ್ಗೆ ವಿವರಣೆ ನೀಡಲಿ’ ಎಂದಿದ್ದಾರೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.