ಇಂದು ಅವಳಿಗಳ ದಿನ: ಉಳ್ಳಾಲ-ಕೈರಂಗಳದ ಈ ಶಾಲೆಯಲ್ಲಿದ್ದಾರೆ 17 ಜೋಡಿ ಅವಳಿ ವಿದ್ಯಾರ್ಥಿಗಳು!


Team Udayavani, Dec 18, 2023, 1:08 AM IST

ganapathi school

ಉಳ್ಳಾಲ: ಒಂದು ಮನೆಯಲ್ಲಿ, ಒಂದೂರಿನಲ್ಲಿ ಒಂದೆರಡು ಅವಳಿ- ಜವಳಿ ಮಕ್ಕಳಿದ್ದರೆ ಕುತೂಹಲದಿಂದ ಗಮನಿಸುತ್ತೇವೆ. ಆದರೆ ಇಲ್ಲೊಂದು ಶಾಲೆಯಲ್ಲಿ 17
ಜೋಡಿ ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಡಿಸೆಂಬರ್‌ 18ರ ಅವಳಿಗಳ ದಿನಾಚರಣೆಗೆ ಈ 34 ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹೊಸ ಮೆರುಗು ನೀಡಲಿದ್ದಾರೆ.
ಉಳ್ಳಾಲ ತಾಲೂಕಿನ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದಲ್ಲಿರುವ ಶಾರದಾ ಗಣಪತಿ ವಿದ್ಯಾ ಕೇಂದ್ರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 17 ಜೋಡಿ ಅವಳಿ ವಿದ್ಯಾರ್ಥಿಗಳಿದ್ದಾರೆ. ಎಲ್‌ಕೆಜಿಯಿಂದ ಪಿಯುಸಿ ವರೆಗೆ ಶಿಕ್ಷಣ ನೀಡುತ್ತಿರುವ ಈ ಶಾಲೆಯಲ್ಲಿ ಒಟ್ಟು 914 ವಿದ್ಯಾರ್ಥಿಗಳಿದ್ದಾರೆ. 2021ರ ಶೈಕ್ಷಣಿಕ ವರ್ಷದಲ್ಲಿ ಎಲ್‌ಕೆಜಿಯಿಂದ ಪಿಯುಸಿವರೆಗಿನ ತರಗತಿಗಳಲ್ಲಿ 11 ಅವಳಿ ಜೋಡಿ ವಿದ್ಯಾರ್ಥಿಗಳಿದ್ದರು.

2022ರಲ್ಲಿ ಅವರಲ್ಲಿ ಮೂರು ಜೋಡಿ ಶಿಕ್ಷಣ ಪೂರೈಸಿ ಉನ್ನತ ಶಿಕ್ಷಣಕ್ಕೆ ಬೇರೆ ಶಿಕ್ಷಣ ಸಂಸ್ಥೆಗಳಿಗೆ ತೆರಳಿದ್ದರಿಂದ ಇಲ್ಲಿ ಅವಳಿ ವಿದ್ಯಾರ್ಥಿಗಳ ಸಂಖ್ಯೆ 8ಕ್ಕೆ ಇಳಿದಿತ್ತು.

ಮತ್ತೆ 6+3 ಹೊಸ ಜೋಡಿ ಸೇರ್ಪಡೆ
ಕಳೆದ ಶೈಕ್ಷಣಿಕ ವರ್ಷದಲ್ಲಿ 3 ಮತ್ತು ಈ ಶೈಕ್ಷಣಿಕ ವರ್ಷದಲ್ಲಿ 6 ಜೋಡಿ ಹೊಸ ಅವಳಿಗಳು ಈ ಶಿಕ್ಷಣ ಸಂಸ್ಥೆಗೆ ದಾಖಲಾತಿ ಪಡೆಯುವ ಮೂಲಕ ಅವಳಿ ಜೋಡಿಗಳ ಸಂಖ್ಯೆ 17ಕ್ಕೆ ಏರಿತು. ಈ ಎಲ್ಲ ವಿದ್ಯಾರ್ಥಿಗಳು ಉಳ್ಳಾಲ ತಾಲೂಕು ವ್ಯಾಪ್ತಿಯ ಕೈರಂಗಳದ ಸುತ್ತಮುತ್ತಲಿನ ಗ್ರಾಮದ ಮತ್ತು ಕೇರಳ ಗಡಿಭಾಗದ ಮಂಜೇಶ್ವರ ವ್ಯಾಪ್ತಿಯವರಾಗಿದ್ದಾರೆ. ಎಲ್ಲರೂ ಶಾರದಾ ಗಣಪತಿ ವಿದ್ಯಾಕೇಂದ್ರದ ಸುತ್ತಮುತ್ತ 16 ಕಿ.ಮೀ. ವ್ಯಾಪ್ತಿಯೊಳಗಿನ ಮಕ್ಕಳು ಎನ್ನುವುದು ವಿಶೇಷವಾಗಿದೆ. ಒಂದೇ ವಿದ್ಯಾಸಂಸ್ಥೆಯಲ್ಲಿ ಇಷ್ಟು ಜೋಡಿ ಅವಳಿಗಳಿರುವುದು ವಿಶೇಷವಾದರೆ, ಇಷ್ಟು ಸಣ್ಣ ಭೌಗೋಳಿಕ ಪ್ರದೇಶದಲ್ಲಿ ಇಷ್ಟು ಸಂಖ್ಯೆಯ ಅವಳಿ ಮಕ್ಕಳಿರುವುದೂ ಕುತೂಹಲಕಾರಿ.

ಅವಳಿಗಳ ಕೇಂದ್ರ ಬಿಂದು ಈ ಶಾಲೆ
ಈ ಬಾರಿ 17 ಜೋಡಿ ಅವಳಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಮೂಲಕ ಈ ಶಿಕ್ಷಣ ಸಂಸ್ಥೆ ಅವಳಿ ವಿದ್ಯಾರ್ಥಿಗಳ ಕೇಂದ್ರವಾಗಿ ಗಮನ ಸೆಳೆದಿದೆ. ಈ ವಿದ್ಯಾರ್ಥಿಗಳಲ್ಲಿ 6 ಗಂಡು ಅವಳಿಗಳು, 6 ಹೆಣ್ಣು ಅವಳಿಗಳಿದ್ದರೆ, 5 ವಿದ್ಯಾರ್ಥಿಗಳು ಗಂಡು ಮತ್ತು ಹೆಣ್ಣು ಮಿಶ್ರ ಅವಳಿಗಳಾಗಿದ್ದಾರೆ. ಎಲ್‌ಕೆಜಿ, ಒಂದನೇ ತರಗತಿ, 8 ಮತ್ತು 10ನೇ ತರಗತಿಗಳಲ್ಲಿ ತಲಾ ಒಂದು ಜತೆ ಅವಳಿಗಳಿದ್ದರೆ, 2ನೇ ಮತ್ತು 7ನೇ ತರಗತಿಗಳಲ್ಲಿ ತಲಾ ಎರಡು ಅವಳಿ ಜೋಡಿಗಳಿದ್ದಾರೆ. ಯುಕೆಜಿ, 6ನೇ ಮತ್ತು 9ನೇ ತರಗತಿಗಳಲ್ಲಿ ತಲಾ ಮೂರು ಜೋಡಿ ಇದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ರಮಣಿ ಭಂಡಾರಿ ತಿಳಿಸಿದ್ದಾರೆ.

ಕೈರಂಗಳ ಪುಣ್ಯಕೋಟಿ ನಗರದಲ್ಲಿ 17 ವರ್ಷಗಳಿಂದ ಕಾರ್ಯನಿರ್ವ ಹಿಸುತ್ತಿರುವ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಠ್ಯದೊಂದಿಗೆ ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದ್ದು, ಅವಳಿ ವಿದ್ಯಾರ್ಥಿಗಳಲ್ಲಿ ಒಂದು ಮಗುವಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.
-ಟಿ.ಜಿ. ರಾಜಾರಾಮ ಭಟ್‌, ಶಾಲಾ ಸಂಚಾಲಕರು, ಶಾರದಾ ಗಣಪತಿ ವಿದ್ಯಾಕೇಂದ್ರ

 ವಸಂತ ಕೊಣಾಜೆ

ಟಾಪ್ ನ್ಯೂಸ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಬಜಪೆ: ಮಂಗಳೂರು ನಗರದಲ್ಲಿ ಪ್ರತಿದಿನ 300 ಟನ್‌ ಕಸ ಉತ್ಪತ್ತಿ

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

4-punjalkatte

Ajilamogaru: ನೀರು ಪಾಲಾದ ಮೈಕಲ್ ರ ಮೃತದೇಹ ಪತ್ತೆ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

ಕೋಟ: ಹೆದ್ದಾರಿಯಲ್ಲಿ ಮರಣಗುಂಡಿ- ವಾಹನ ಸವಾರರಿಗೆ ಜೀವ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.