ಮೊದಲು ರಾಷ್ಟ್ರಧರ್ಮ, ಆಮೇಲೆ ಜಾತಿ-ಧರ್ಮ: ನಿಜಗುಣಾನಂದ

ವೈದ್ಯರ ಸಮಸ್ಯೆಗಳ ಬಗ್ಗೆ ವಿಧಾನಸಭೆ, ಲೋಕಸಭೆಯಲ್ಲಿ ಚರ್ಚೆಗಳಾಗಬೇಕು

Team Udayavani, Dec 18, 2023, 5:12 PM IST

ಮೊದಲು ರಾಷ್ಟ್ರಧರ್ಮ, ಆಮೇಲೆ ಜಾತಿ-ಧರ್ಮ: ನಿಜಗುಣಾನಂದ

ಹುಬ್ಬಳ್ಳಿ: ದೇವರು ನೀಡಿರುವ ಈ ಮನುಷ್ಯ ಜನ್ಮಕ್ಕೆ ಇಂದು ಔಷಧವೇ ಆಹಾರವಾಗಿದ್ದು ಇದೆಲ್ಲವೂ ಹೋಗಬೇಕಾಗಿದೆ ಎಂದು ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ನವನಗರ ಎಪಿಎಂಸಿ ಎದುರಿನ ಈಶ್ವರನಗರದಲ್ಲಿ ರವಿವಾರ ಶ್ರೀ ಗಂಗಾ ಆರೋಗ್ಯ ಮಹಾಮನೆ ಮತ್ತು ಭಾರತೀಯ ಪಾರಂಪರಿಕ ವೈದ್ಯ ಪರಿಷತ್‌ ಸಂಸ್ಥಾಪನೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಲೋಪಥಿಕ್‌ ಬರುವ ಮುನ್ನ ಯೋಗ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ಸಹ ಕಲುಷಿತವಾಗಿದೆ. ಇದರಿಂದ ಮನುಷ್ಯ ಆಹಾರವನ್ನು ಆಹಾರವಾಗಿ ತಿನ್ನದೇ, ಔಷಧವನ್ನು ಆಹಾರವನ್ನಾಗಿ ತಿನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಭಾರತವನ್ನು ಉಳಿಸಿಕೊಂಡರೆ ಜಗತ್ತಿಗೆ ಎಲ್ಲವೂ ಸಿಗುತ್ತದೆ. ಭಾರತ ಹಾಳಾದರೆ ಎಲ್ಲವೂ ಪರಿತಪಿಸಬೇಕಾಗುತ್ತದೆ. ಮೊದಲು ರಾಷ್ಟ್ರ ಧರ್ಮ. ನಿಮ್ಮ ಜಾತಿ, ಧರ್ಮ ಆಮೇಲೆ. ಅನ್ನ, ನೀರು, ಶಿಕ್ಷಣ ಇದನ್ನು ಹಾಳು ಮಾಡಿಕೊಂಡರೆ ಈ ಜಗತ್ತೇ ಹಾಳಾಗಲಿದೆ. ಬದುಕಿಗಾಗಿ ಹೋರಾಟ ಮಾಡುವ ಏಕೈಕ ಪ್ರಾಣಿ ಎಂದರೆ ಅದು ಈ ಮನುಷ್ಯ. ಮನುಷ್ಯ ಶರೀರ ಬೆಳೆಸುತ್ತಿದ್ದಾನೆ, ಮನಸ್ಸು-ಆತ್ಮವನ್ನು ಸಾಯಿಸುತ್ತಿದ್ದಾನೆ ಎಂದು ಹೇಳಿದರು.

ಶಾಸಕ ಮಹೇಶ ಟೆಂಗಿನಕಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಾರಂಪರಿಕ ವೈದ್ಯಕಿಯ ಎನ್ನುವುದು ಅತ್ಯಂತ ಹಳೆಯ ಪದ್ಧತಿಯಾಗಿದೆ. ದೇಶದ ಜನಸಾಮಾನ್ಯರಿಗೆ ಅತ್ಯಂತ ಉಪಯುಕ್ತವಾಗಿದೆ. ಈ ಪದ್ಧತಿ ಹೆಚ್ಚಿನ ಪ್ರಮಾಣದಲ್ಲಿ ಜನರಿಗೆ ತಲುಪುವಂತೆ ಮಾಡಬೇಕು ಎಂದರು.

ಶ್ರೀಗಂಗಾ ಆರೋಗ್ಯ ಮಹಾಮನೆ ಸಂಸ್ಥಾಪಕ ವೈದ್ಯಶ್ರೀ ಚನ್ನಬಸವಣ್ಣ ಪ್ರಾಸ್ತಾವಿಕ ಮಾತನಾಡಿ, ಭಾರತವು ಪಾರಂಪರಿಕ ವೈದ್ಯ ಪದ್ಧತಿಯನ್ನು ಕೇವಲ ವ್ಯಾಸಂಗ ಮಾಡಿ ಗುರುತಿಸಿಕೊಂಡಿಲ್ಲ. ಯುದ್ಧದಂತಹ ಸನ್ನಿವೇಶದಲ್ಲೂ ಕ್ಷಣಾರ್ಧದಲ್ಲಿ ವ್ಯಕ್ತಿಯನ್ನು ಆರಾಮ ಮಾಡುವ ಶಕ್ತಿ ಈ ಪದ್ಧತಿಗಿತ್ತು. ಇಂದು ಪಾರಂಪರಿಕ ವೈದ್ಯರು ತಮ್ಮ ಹಕ್ಕಿಗಾಗಿ ಹೋರಾಟ ಮಾಡಬೇಕಾದ ದಯನೀಯ ಸ್ಥಿತಿ ಬಂದಿದೆ. ಚೀನಾದಂತಹ ಜಗತ್ತಿನ ಅನೇಕ ಮುಂದುವರಿದ ದೇಶಗಳಲ್ಲಿ ಅಲ್ಲಿನ ಪಾರಂಪರಿಕ ವೈದ್ಯ ಪದ್ಧತಿ ಬಳಸಲಾಗುತ್ತದೆ. ಪಾರಂಪರಿಕ ವೈದ್ಯರ ಸಮಸ್ಯೆಗಳ ಬಗ್ಗೆ ವಿಧಾನಸಭೆ, ಲೋಕಸಭೆಯಲ್ಲಿ ಚರ್ಚೆಗಳಾಗಬೇಕು ಎಂದು
ಆಗ್ರಹಿಸಿದರು.

ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪಾರಂಪರಿಕ ವೈದ್ಯರಿಗೆ ಇರುವ ಜ್ಞಾನ ಅಪಾರವಾದುದು. ಕ್ಯಾನ್ಸರ್‌ ಕೂಡ ಗುಣಪಡಿಸುವ ಶಕ್ತಿ ಅವರಲ್ಲಿದೆ. ಭಾರತೀಯ ಯೋಗ, ಔಷಧ ಪದ್ಧತಿ ವಿಶಿಷ್ಟವಾದದ್ದು. ಇದನ್ನು ಉಳಿಸಿಕೊಂಡು ಹೋಗಬೇಕು ಎಂದರು. ಬಸವ ಕಲ್ಯಾಣದ ನೀಲಾಂಬಿಕ ಬಸವ ಯೋಗ
ಕೇಂದ್ರದ ಶ್ರೀ ಸಿದ್ದರಾಮೇಶ್ವರ ಶರಣರು, ರೋಣದ ಜಮಾತೆ ಇಸ್ಲಾಮಿ ಹಿಂದ್‌ನ ಮೌಲಾನ ರಿಯಾಜ್‌ ಅಹ್ಮದ್‌, ಧಾರವಾಡ ಸೇಂಟ್‌ ಜೋಸ್‌ ಹೈಸ್ಕೂಲ್‌ ಪ್ರಾಂಶುಪಾಲ ಫಾದರ್‌ ಡಾ| ಮೈಕಲ್‌ ಡಿಸೋಜಾ ಇನ್ನಿತರರು ಮಾತನಾಡಿದರು.

ಭಾರತ ಸೇವಾ ಟ್ರಸ್ಟ್‌ ನ ಶ್ರೀಕಾಂತ ದುಂಡಿಗೌಡ್ರ, ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಪಂಚಾಕ್ಷರಿ ಪಂಚಯ್ಯನವರ ಮಠ, ಡಾ| ಚಂದ್ರಮೌಳಿ ನಾಯ್ಕರ, ಭಾರತೀಯ ಪಾರಂಪರಿಕ ವೈದ್ಯ ಪರಿಷತ್‌ ಸಂಸ್ಥಾಪಕಿ ವೈದ್ಯಶ್ರೀ ಜ್ಯೋತಿ ಚನ್ನಬಸವಣ್ಣ ಇನ್ನಿತರರಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.