Suspension; ಕೇಂದ್ರ ಸರಕಾರ ಸರ್ವಾಧಿಕಾರದ ತೀವ್ರ ಮಟ್ಟವನ್ನು ತಲುಪಿದೆ: ಖರ್ಗೆ ಆಕ್ರೋಶ
Team Udayavani, Dec 18, 2023, 7:01 PM IST
ಹೊಸದಿಲ್ಲಿ: ಸಂಸತ್ತಿನಲ್ಲಿ ವಿಪಕ್ಷಗಳ ಸಂಸದರ ಅಮಾನತಿಗೆ ಕಾಂಗ್ರೆಸ್ ಸೋಮವಾರ ಖಾರವಾಗಿ ಪ್ರತಿಕ್ರಿಯಿಸಿದ್ದು ಸರಕಾರವು ಸರ್ವಾಧಿಕಾರದ ತೀವ್ರ ಮಟ್ಟವನ್ನು ತಲುಪಿದೆ, ಯಾವುದೇ ಚರ್ಚೆಯಿಲ್ಲದೆ ಪ್ರಮುಖ ಶಾಸನಗಳನ್ನು “ಬುಲ್ಡೋಜ್” ಮಾಡಲು ಬಯಸುತ್ತಿರುವುದರಿಂದ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Suspended; ರಾಜ್ಯಸಭೆಯಿಂದ 45, ಲೋಕಸಭೆಯ 33 ವಿಪಕ್ಷ ಸಂಸದರು ಅಮಾನತು
ಲೋಕಸಭೆ ಮತ್ತು ರಾಜ್ಯಸಭೆಯಿಂದ ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿ, ಈ ನಿರಂಕುಶ ಸರಕಾರವು ಎಲ್ಲಾ ಪ್ರಜಾಪ್ರಭುತ್ವದ ಮಾನದಂಡಗಳನ್ನು ಕಸದ ಬುಟ್ಟಿಗೆ ಎಸೆಯುತ್ತಿದೆ ಮತ್ತು ಸಂಸತ್ತಿಗೆ ಶೂನ್ಯ ಹೊಣೆಗಾರಿಕೆಯನ್ನು ತೋರಿಸಿದೆ ಎಂದು ಬರೆದಿದ್ದಾರೆ.
ಹದಿಮೂರು ಸದಸ್ಯರನ್ನು ಈಗಾಗಲೇ ಅಮಾನತುಗೊಳಿಸಲಾಗಿತ್ತು, ನಮ್ಮ ಎರಡು ಸರಳ ಮತ್ತು ನಿಜವಾದ ಬೇಡಿಕೆಗಳಿದ್ದವು. ಸಂಸತ್ತಿನ ಭದ್ರತೆಯಲ್ಲಿ ಅಕ್ಷಮ್ಯ ಉಲ್ಲಂಘನೆಯ ಬಗ್ಗೆ ಕೇಂದ್ರ ಗೃಹ ಸಚಿವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಬೇಕು ಮತ್ತು ಅದರ ಬಗ್ಗೆ ವಿವರವಾದ ಚರ್ಚೆ ನಡೆಸಬೇಕು” ಎಂದು ಖರ್ಗೆ ಹೇಳಿದ್ದಾರೆ.
ಪ್ರಧಾನಿಯವರು ಪತ್ರಿಕೆಗಳಿಗೆ ಸಂದರ್ಶನ ನೀಡಬಹುದು ಮತ್ತು ಗೃಹ ಸಚಿವರು ಟಿವಿ ಚಾನೆಲ್ಗಳಿಗೆ ಸಂದರ್ಶನ ನೀಡಬಹುದು ”ಆದರೆ ಅವರು ಭಾರತದ ಜನರನ್ನು ಪ್ರತಿನಿಧಿಸುವ ಸಂಸತ್ತಿಗೆ ಶೂನ್ಯ ಹೊಣೆಗಾರಿಕೆಯನ್ನು ಹೊಂದಿದ್ದಾರೆ.
“ಪ್ರತಿಪಕ್ಷಗಳ ಕಡಿಮೆ ಉಪಸ್ಥಿತಿಯಲ್ಲಿ ಮೋದಿ ಸರಕಾರವು ಪ್ರಮುಖ ಬಾಕಿ ಇರುವ ಶಾಸನಗಳನ್ನು ಬುಲ್ಡೋಜ್ ಮಾಡಬಹುದು, ಯಾವುದೇ ಭಿನ್ನಾಭಿಪ್ರಾಯವನ್ನು ಯಾವುದೇ ಚರ್ಚೆಯಿಲ್ಲದೆ ಹತ್ತಿಕ್ಕಬಹುದು” ಎಂದು ರಾಜ್ಯಸಭೆಯ ವಿಪಕ್ಷದ ನಾಯಕರೂ ಆಗಿರುವ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.