D. K. Shivakumar ಜತೆ ಎಸ್‌ಟಿಎಸ್‌, ಡಾ.ಕೆ.ಸುಧಾಕರ್‌! ಕುತೂಹಲಕ್ಕೆ ಕಾರಣವಾದ ನಾಯಕರ ನಡೆ

ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ

Team Udayavani, Dec 18, 2023, 8:37 PM IST

ಡಿಕೆಶಿ ಜತೆ ಎಸ್‌ಟಿಎಸ್‌, ಡಾ.ಕೆ.ಸುಧಾಕರ್‌! ಕುತೂಹಲಕ್ಕೆ ಕಾರಣವಾದ ನಾಯಕರ ನಡೆ

ಬೆಂಗಳೂರು: ಈಚೆಗೆ ಬೆಳಗಾವಿ ಅಧಿವೇಶನದ ವೇಳೆ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸದಸ್ಯರ ಔತಣಕೂಟದಲ್ಲಿ ಕಾಣಿಸಿಕೊಂಡು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಶಾಸಕರು, ಮೂರ್‍ನಾಲ್ಕು ದಿನಗಳ ಅಂತರದಲ್ಲಿ ಕಾರ್ಯಕ್ರಮವೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜತೆ ಕಾಣಿಸಿಕೊಳ್ಳುವ ಮೂಲಕ ಮತ್ತೆ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಈ ಬಾರಿ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಎಸ್‌.ರವಿ ಅವರ ಪುತ್ರಿಯ ಮದುವೆ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಮತ್ತು ಮಾಜಿ ಸಚಿವ ಡಾ.ಕೆ. ಸುಧಾಕರ್‌ ಕಾಣಿಸಿಕೊಂಡಿದ್ದಾರೆ. ಮೂವರೂ ಕೆಲಹೊತ್ತು ಹರಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಶೇರ್‌ ಆಗುವುದರ ಜತೆಗೆ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ ಅಧಿವೇಶನದ ವೇಳೆ ಪ್ರತಿಪಕ್ಷ ಬಿಜೆಪಿ ಸಭಾತ್ಯಾಗ ಮಾಡಿದಾಗ, ನಾಯಕರನ್ನು ಶಾಸಕ ಎಸ್‌.ಟಿ. ಸೋಮಶೇಖರ್‌ ಹಿಂಬಾಲಿಸದೆ, ಕಲಾಪದಲ್ಲಿ ಕುಳಿತುಕೊಳ್ಳುವ ಮೂಲಕ ಸ್ಪಷ್ಟ ಸಂದೇಶ ರವಾನಿಸಿದ್ದರು. ಈ ಮಧ್ಯೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೋಮಶೇಖರ್‌ ಮತ್ತು ಶಾಸಕ ಶಿವರಾಮ್‌ ಹೆಬ್ಬಾರ್‌ ಕಾಣಿಸಿಕೊಂಡಿದ್ದರು ಎಂಬ ವದಂತಿ ಕೇಳಿಬಂದಿತ್ತು. ನಂತರದಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಶಾಸಕರಿಗೆ ಏರ್ಪಡಿಸಿದ್ದ ಔತಣಕೂಟಕ್ಕೆ ಮಾತ್ರ ಹಾಜರಾಗಿದ್ದರು ಎಂದು ಸ್ವತಃ ನಾಯಕರು ಸ್ಪಷ್ಟಪಡಿಸಿದ್ದರು.

ಮತ್ತೊಂದೆಡೆ ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರಂಭದಿಂದ ಅಂತ್ಯದವರೆಗೂ ಮೇಲ್ಮನೆಯ ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌ ಹಾಜರಾಗಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಡಿ.ಕೆ. ಶಿವಕುಮಾರ್‌ ಜತೆ ಡಾ.ಕೆ. ಸುಧಾಕರ್‌ ಮತ್ತು ಎಸ್‌.ಟಿ. ಸೋಮಶೇಖರ್‌ ಕಾಣಿಸಿಕೊಂಡಿರುವುದು ಕುತೂಹಲ ಕೆರಳಿಸುವಂತೆ ಮಾಡಿದೆ. “ಆದರೆ, ಇದೊಂದು ಆಕಸ್ಮಿಕ ಭೇಟಿ ಅಷ್ಟೇ ಆಗಿತ್ತು. ಈ ಭೇಟಿ ವೇಳೆ ಉಭಯ ಕುಶಲೋಪರಿ, ರಾಜಕೀಯ ಬೆಳವಣಿಗೆಗಳು ಮತ್ತಿತರ ವಿಷಯಗಳು ಚರ್ಚೆಗೆ ಬಂದಿವೆ. ಯಾವುದೇ ಪಕ್ಷಾಂತರದ ಬಗ್ಗೆ ಗಂಭೀರ ಚರ್ಚೆಗಳೇನೂ ಈ ಸಂದರ್ಭದಲ್ಲಿ ನಡೆದಿಲ್ಲ’ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.