Session ನಿರೀಕ್ಷೆ ಹುಸಿಗೊಳಿಸಿದ ಅಧಿವೇಶನ: ಸಿಎಂಗೆ ಮಾಜಿ ಸಿಎಂ ಬೊಮ್ಮಾಯಿ ಪತ್ರ
Team Udayavani, Dec 18, 2023, 9:05 PM IST
ಬೆಂಗಳೂರು: ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸಿದ ಹೊಸ ಸರ್ಕಾರದ ಮೇಲೆ ಉತ್ತರ ಕರ್ನಾಟಕದ ಜನ ನಿರೀಕ್ಷೆ ಇಟ್ಟಿದ್ದರು. ಆದರೆ, ಯಾವುದೇ ವಿಶೇಷ ಅಭಿವೃದ್ಧಿ ಪರ ನಿರ್ಣಯ ಘೋಷಿಸದೇ ಜನರ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ಪುಟಗಳ ಪತ್ರ ಬರೆದಿರುವ ಅವರು, ಇಡೀ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವ ಕಟು ಸತ್ಯದ ಅನುಭವ ಜನರಿಗೆ ಆಗಿದೆ ಎಂದು ಹೇಳಿದ್ದಾರೆ.
ಕೃಷ್ಣಾ ಮೇಲ್ದಂಡೆ ಹಂತ 3 ರ 130 ಟಿಎಂಸಿ ನೀರು ಬಳಕೆ ಮಾಡಲು ನಮ್ಮ ಸರ್ಕಾರ ಪ್ರಾರಂಭ ಮಾಡಿರುವ ಪುನರ್ವಸತಿ ಮತ್ತು ಪುನರ್ನಿರ್ಮಾಣನಕ್ಕೆ ಈ ವರ್ಷ ಒಂದು ರೂ.ಅನ್ನೂ ಬಿಡುಗಡೆ ಮಾಡದಿರುವುದು ಉತ್ತರ ಕರ್ನಾಟಕದ ಬಗ್ಗೆ ತಮ್ಮ ಸರ್ಕಾರಕ್ಕೆ ಇರುವ ಅಸಡ್ಡೆ ಭಾವನೆ ಗೊತ್ತಾಗುತ್ತದೆ ಎಂದು ಟೀಕಿಸಿದ್ದಾರೆ.
ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ ಏಳು ವಿವಿಗಳ ಸ್ಥಾಪನೆ ಮಾಡಲಾಗಿದೆ. ಆದರೆ ಈಗಿನ ಸರ್ಕಾರ ಅನುದಾನದ ಕೊರತೆ ನೆಪ ಹೇಳಿ ವಿವಿಗಳನ್ನು ಮುಚ್ಚಲು ಮುಂದಾಗಿದೆ. ಈ ಪ್ರಸ್ತಾಪ ಕೈಬಿಡುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.