Bagalkot: ಆತ್ಮಹತ್ಯೆಗೆ ಯತ್ನಿಸಿದವ ಜನರನ್ನು ಕಂಡು ಪರಾರಿ !
Team Udayavani, Dec 19, 2023, 6:04 PM IST
ರಬಕವಿ-ಬನಹಟ್ಟಿ: ಜೀವನದಲ್ಲಿ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಜನರನ್ನು ಕಂಡು ಗಿಡಕ್ಕೆ ಹಾಕಿದ ಹಗ್ಗ ಹಾಗೂ ಬಂದಿದ್ದ ಬೈಕ್ ಅನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾದ ವಿಚಿತ್ರ ಘಟನೆಯೊಂದು ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಡೆದಿದೆ.
ಬನಹಟ್ಟಿಯ ಸೋಮವಾರ ಪೇಟೆ ಸಮಸ್ತ ದೈವ ಮಂಡಳಿಯ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕ್ ಸವಾರನೋರ್ವ ಹಗ್ಗದ ಸಮೇತ ಒಳಗೆ ನುಗ್ಗಿದ್ದಾನೆ. ಅಂತ್ಯಸಂಸ್ಕಾರ ಸಂದರ್ಭ ನಿರ್ಮಿಸಲಾದ ವಿಶ್ರಾಂತಿ ಜಾಗೆಯ ಕಬ್ಬಿನ ಸಲಾಕೆಗೆ ಹಗ್ಗ ಬಿಗಿದು ಅದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ದೂರದಿಂದ ಮೂರ್ನಾಲ್ಕು ಜನರು ಅದನ್ನು ವೀಕ್ಷಿಸಿದ್ದಾರೆ. ಅಲ್ಲಿಂದಲೇ ವ್ಯಕ್ತಿಯ ವಿಚಾರಣೆಗೆಂದು ದೊಡ್ಡ ಧ್ವನಿಯಲ್ಲಿ ಮಾತನಾಡಿಸುತ್ತಾ ಆತನಿದ್ದ ಜಾಗೆಯತ್ತ ತೆರಳುತ್ತಿದ್ದಂತೆ ವ್ಯಕ್ತಿ ತನ್ನ ಬೈಕ್, ಹೆಲ್ಮೇಟ್ ಹಾಗು ಬಟ್ಟೆ ತುಂಬಿದ ಚೀಲವನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳದಲ್ಲಿದ್ದ ಬೈಕ್ ವಶಪಡಿಸಿಕೊಂಡಿದ್ಧಾರೆ. ಬೈಕ್ ಬನಹಟ್ಟಿಯ ನೀರಿನ ಟಾಂಕಿ ಹತ್ತಿರದ ಗಣೇಶ ಲಾಳಿ ಎಂಬುವರಿಗೆ ಸೇರಿದ್ದಾಗಿದ್ದು, ವ್ಯಕ್ತಿ ಯಾರೆಂಬುದು ಸ್ಪಷ್ಟವಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: Hinduism ರಕ್ಷಣೆ ಮಾಡುವುದು ಅಗತ್ಯವಾಗಿದೆ: ಶಾಸಕ ಸಿದ್ದು ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.