Raghu Thatha: ಕೀರ್ತಿ ಸುರೇಶ್ ʼರಘು ತಾತʼನ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ಹೊಂಬಾಳೆ
Team Udayavani, Dec 19, 2023, 6:23 PM IST
ಚೆನ್ನೈ: ಭಾರತೀಯ ಸಿನಿರಂಗದಲ್ಲಿ ʼಹೊಂಬಾಳೆ ಫಿಲ್ಮ್ಸ್ʼ ನಿರ್ಮಾಣ ಮಾಡಿದ ಸಿನಿಮಾಗಳೆಲ್ಲಾ ಮುಟ್ಟಿದೆಲ್ಲಾ ಚಿನ್ನವಾಗುತ್ತಿದೆ. ʼಸಲಾರ್ʼ ಸಿನಿಮಾದ ಮೂಲಕ ಮತ್ತೊಂದು ದೊಡ್ಡ ಹಿಟ್ ಕೊಡುವ ನಿರೀಕ್ಷೆಯಲ್ಲಿರುವ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾವೊಂದರ ಬಗ್ಗೆ ಅಪ್ಡೇಟ್ ನೀಡಿದೆ.
ಸಾಲು ಸಾಲು ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಕನ್ನಡ, ತೆಲುಗು ಬಳಿಕ ಇದೀಗ ಕಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದೆ. ಕಳೆದ ಕೆಲ ಸಮಯದ ಹಿಂದೆ ಈ ಬಗ್ಗೆ ಹೊಂಬಾಳೆ ಅನೌನ್ಸ್ ಮಾಡಿತ್ತು. ಕೀರ್ತಿ ಸುರೇಶ್ ಪ್ರಧಾನ ಪಾತ್ರದಲ್ಲಿರುವ ʼರಘು ತಾತʼ ಸಿನಿಮಾವನ್ನು ನಿರ್ಮಾಣ ಮಾಡುವ ಬಗ್ಗೆ ಹೊಂಬಾಳೆ ಹೇಳಿತ್ತು. ಇದೀಗ ಈ ಸಿನಿಮಾದ ಬಗ್ಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದೆ.
ಸುಮನ್ ಕುಮಾರ್ ನಿರ್ದೇಶನದ ʼರಘು ತಾತʼ ಮಹಿಳಾ ಹಾಗೂ ಹಾಸ್ಯ ಪ್ರಧಾನ ಕಥೆಯನ್ನೊಳಗೊಂಡಿದೆ. ಕಾಲಿವುಡ್ ನ ʼಮಹಾನಟಿʼ ಕೀರ್ತಿ ಸುರೇಶ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತರಕಾರಿ ಮಾರುಕಟ್ಟೆಯಲ್ಲಿ ಸಿನಿಮಾದ ಬ್ಯಾನರ್ ನ್ನು ಎತ್ತಿಕೊಂಡು ಹೋಗುವ ದೃಶ್ಯವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಶೀಘ್ರದಲ್ಲಿ ತೆರೆಗೆ ಬರಲಿದೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹೇಳಿದೆ.
ʼದಸರಾʼ ಬಳಿಕ ಕೀರ್ತಿ ಸುರೇಶ್ ʼರಘು ತಾತʼದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ಯಾನ್ ಇಂಡಿಯಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ ಎನ್ನಲಾಗಿದೆ.
#RaghuThatha, a rollicking, hilarious adventure is coming soon to a cinema near you.
வேடிக்கையும் வினோதமும் நிறைந்த நகைச்சுவை திரைப்படம், ரகு தாத்தா. விரைவில் உங்கள் அருகிலுள்ள திரையரங்குகளில்…
▶️ https://t.co/kTXp5FY4jV@KeerthyOfficial @hombalefilms @VKiragandur @sumank… pic.twitter.com/x3XXVCtl0U
— Hombale Films (@hombalefilms) December 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.