Manki ಎಂಡೋಸಲ್ಫಾನ್ ಫಲಾನುಭವಿಗಳಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಮಂಕಾಳ ವೈದ್ಯ


Team Udayavani, Dec 19, 2023, 8:06 PM IST

Manki ಎಂಡೋಸಲ್ಫಾನ್ ಫಲಾನುಭವಿಗಳಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಮಂಕಾಳ ವೈದ್ಯ

ಭಟ್ಕಳ: ಎಂಡೋಸಲ್ಫಾನ್ ಫಲಾನುಭವಿಗಳಿಗಾಗಿ ಭಟ್ಕಳ ಹೊನ್ನಾವರ ಮಧ್ಯವರ್ತಿ ಪ್ರದೇಶವಾದ ಮಂಕಿಯಲ್ಲಿ ಸರಕಾರದಿಂದ 15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ತಾಲೂಕು ಆಸ್ಪತ್ರೆಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಎಂಡೋಸಲ್ಫಾನ್ ಪೀಡಿತರ ಗುರುತಿಸುವಿಕೆ ಮತ್ತು ಅವರಿಗೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಹಿಂದೆ ಶಾಸಕನಿದ್ದಾಗ ಎಂಡೋಸಲ್ಫಾನ್ ಪೀಡಿತರ ಸಮೀಕ್ಷೆ ಮಾಡಲಾಗಿತ್ತು. ಜಿಲ್ಲೆಯಲ್ಲಿ 1452 ಜನರನ್ನು ಅಂದು ಗುರುತಿಸಲಾಗಿದ್ದು ಅವರಲ್ಲಿ 768 ಜನರು ಭಟ್ಕಳ ತಾಲೂಕಿನಲ್ಲಿಯೇ ಇದ್ದರು. ಎಂಡೋಸಲ್ಫಾನ್ ಪೀಡಿತರಿಗೆ ಮಾಸಿಕ ರೂ.1200 ಹಾಗೂ ರೂ.4000 ಪರಿಹಾರ, ಜೊತೆಗೆ ಉಚಿತ ಔಷಧಿ, ವಿಕಲಚೇತನರು ಜೊತೆಗೆ ಓರ್ವರಿಗೆ ಉಚಿತ ಪ್ರಯಾಣ ಎಲ್ಲಾ ಸೌಲಭ್ಯ ನೀಡುವುದರೊಂದಿಗೆ ಬೆಳಕೆಯಲ್ಲಿ ಹಗಲು ಆರೈಕೆ ಕೇಂದ್ರವನ್ನು ತೆರೆಯುವುದಕ್ಕೆ ಕೂಡಾ ಯೋಜಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಮತ್ತೆ ಅವರ ಯೋಗಕ್ಷೇಮ ವಿಚಾರಿಸಲು ನಾನೇ ಬರಬೇಕಾಯಿತು ಎಂದು ಎಂಡೋಸಲ್ಫಾನ್ ಪೀಡಿತರನ್ನು ನಿರ್ಲಕ್ಷ್ಯ ಮಾಡಿದ್ದು ಸರಿಯಲ್ಲ ಎಂದರು.

ಅವರ ಕಷ್ಟ, ಅವರ ತಂದೆ ತಾಯಿಯವರ ಕಷ್ಟವನ್ನು ಅರಿತೇ ಮಂಕಿಯಲ್ಲಿ ಸುಸಜ್ಜಿತ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿರುವುದಾಗಿಯೂ ತಿಳಿಸಿದರು.

ತಾಲೂಕು, ಜಿಲ್ಲೆ, ರಾಜ್ಯದ ಎಂಡೋಸಲ್ಫಾನ್ ಫಲಾನುಭವಿಗಳಿಗೆ ಸರಕಾರದಿಂದ ಸೂಕ್ತ ಸೌಲಭ್ಯ, ಶಿಕ್ಷಣ ಮತ್ತು ಚಿಕಿತ್ಸೆ ದೊರಕಿಸಿಕೊಡಲು ಎಲ್ಲ ಪ್ರಯತ್ನ ಮಾಡಲಾಗುವುದು ಎಂದೂ ಭರವಸೆ ನೀಡಿದರು.

ಎಂಡೋಸಲ್ಫಾನ್ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದ ಅವರು ಎಂಡೋಸಲ್ಫಾನ್ ಫಲಾನುಭವಿಗಳನ್ನು ಪಾಲಕರು ಚೆನ್ನಾಗಿ ನೋಡಿಕೊಳ್ಳುವಂತೆ ಕರೆ ನೀಡಿದರು.

ಎಂಡೋಸಲ್ಫಾನ್ ಜಿಲ್ಲಾ ಮೇಲ್ವಿಚಾರಣಾ ಅಧಿಕಾರಿ ಡಾ. ಸತೀಶ ಶೇಟ್ ಎಂಡೋ ಸಲ್ಫಾನ್ ಸಿಂಪರಣೆ, ಕಾಯಿಲೆ, ಸಮೀಕ್ಷೆ, ಪರಿಹಾರೋಪಾಯಗಳ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ. ಸವಿತಾ ಕಾಮತ್, ತಹಸೀಲ್ದಾರ ತಿಪ್ಪೇಸ್ವಾಮಿ, ಕ್ಷೇತ್ರಶಿಕ್ಷಣಾಧಿಕಾರಿ ವಿ.ಡಿ. ಮೊಗೇರ ಉಪಸ್ಥಿತರಿದ್ದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ ಎಂಡೋಸಲ್ಫಾನ್ ಫಲಾನುಭವಿಗಳಿಗೆ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ನೀಡಲಾಯಿತು.

ಡಾ. ಸವಿತಾ ಕಾಮತ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ನಿರ್ವಹಿಸಿದರು. ಶ್ರೀನಿವಾಸ ವಂದನಾರ್ಪಣೆಗೈದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.