Neravu: ಸ್ತ್ರೀಯರೇ…ನಿಮ್ಮ ಸುರಕ್ಷತೆಗೆ ಇದೆ ನೆರವು

ಕ್ಯಾಬಿನ್‌ ರೀತಿ ಕೇಂದ್ರಗಳ ತೆರೆದು ಪೊಲೀಸ್‌ ಔಟ್‌ಪೋಸ್ಟ್‌ ಮಾದರಿಯಲ್ಲಿ ಕಾರ್ಯನಿರ್ವಹಣೆ

Team Udayavani, Dec 20, 2023, 8:40 AM IST

2-neravu-bng

ಬೆಂಗಳೂರು: ಮಹಿಳೆಯರಿಗೆ ಭದ್ರತೆ ನೀಡುವ ಉದ್ದೇಶದಿಂದ “ಸುರಕ್ಷಿತ ನಗರ’ ಯೋಜನೆಯಡಿ ಸ್ಥಾಪಿಸಿರುವ ಪೊಲೀಸ್‌ ಸಹಾಯ ಕೇಂದ್ರ “ನೆರವು’ ಬಹುಪಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕುರಿತು ಮಹಿಳೆಯರಲ್ಲಿ ಇನ್ನೂ ಜಾಗೃತಿ ಮೂಡಬೇಕಿದೆ.

ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಯಾವುದೇ ರೀತಿ ತೊಂದರೆಯಾದ ಸಂದರ್ಭದಲ್ಲಿ ತುರ್ತು ಸ್ಪಂದನೆ ನೀಡುವ ಉದ್ದೇಶದಿಂದಾಗಿ ಕಾಲೇಜು, ಕಂಪನಿಗಳು ಇರುವ ಸ್ಥಳ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಓಡಾಡುವ ಪ್ರದೇಶಗಳಲ್ಲಿ ಹಾಗೂ ಅಗತ್ಯ ಸೌಲಭ್ಯಗಳಿಂದ ದೂರವಿರುವ ಪ್ರದೇಶಗಳಲ್ಲಿ ಕ್ಯಾಬಿನ್‌ ರೂಪದಲ್ಲಿ ನಿರ್ಮಿಸಿರುವ “ನೆರವು’ ಪೊಲೀಸ್‌ ಔಟ್‌ ಪೋಸ್ಟ್‌ಗಳಾಗಿ ಕಾರ್ಯ ನಿರ್ವಹಿಸುತ್ತವೆ.

60 ಕೇಂದ್ರ ಸ್ಥಾಪನೆ: ಈಗಾಗಲೇ ಮೆಜೆಸ್ಟಿಕ್‌, ಕಾರ್ಪೋರೆಷನ್‌, ಫ್ರೀಡಂ ಪಾರ್ಕ್‌, ಮೌರ್ಯ ವೃತ್ತ, ರೇಸ್‌ಕೋರ್ಸ್‌ ರಸ್ತೆ, ಮಲ್ಲೇಶ್ವರ, ಟೌನ್‌ಹಾಲ್‌, ಮೈಸೂರು ರಸ್ತೆ ಸೇರಿದಂತೆ ನಗರಾದ್ಯಂತ 60 ಕೇಂದ್ರಗಳನ್ನು ನಿರ್ಮಿಸಲಾಗಿದೆ. 20 ಅಡಿ ಉದ್ದ ಹಾಗೂ 10 ಅಡಿ ಅಗಲ ವಿಸ್ತೀರ್ಣ ಹೊಂದಿರುವ ಈ ಕೇಂದ್ರಗಳು ತಲಾ 5 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಇದರಲ್ಲಿ ಓರ್ವ ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನೂ ನೇಮಿಸಿದ್ದು, ಶೇ. 99ರಷ್ಟು ಕಾರ್ಯನಿರ್ವಹಿಸುತ್ತಿವೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾದ ರಮಣ ಗುಪ್ತ ಮಾಹಿತಿ ನೀಡಿದರು.

ಯಾರೆಲ್ಲಾ “ನೆರವುಪಡೆಯಬಹುದು?: “ನೆರವು’ ಹೆಸರೇ ಹೇಳುವಂತೆ ಸಮಸ್ಯೆಗೆ ಒಳಗಾದವರಿಗೆ ನೆರವು ನೀಡಲು ಇದನ್ನು ಸ್ಥಾಪಿಸಲಾಗಿದೆ. ಮುಖ್ಯವಾಗಿ ಮಹಿಳೆಯರು ಅಥವಾ ಕಾಲೇಜು ವಿದ್ಯಾರ್ಥಿನಿಯರು ರಸ್ತೆಯಲ್ಲಿ ಅಥವಾ ಇನ್ನಿತರ ಸ್ಥಳಗಳಲ್ಲಿ ಏನಾದರೂ ಸಮಸ್ಯೆಗೆ ಒಳಗಾದರೆ, ಹತ್ತಿರದ ನೆರವು ಕೇಂದ್ರವನ್ನು ಸಂಪರ್ಕಿಸಬಹುದು. “ನೆರವು’ ಪಡೆಯುವವರು ತಮ್ಮ ಹೆಸರನ್ನು ನೋಂದಾಯಿಸಿ, ಇದರ ಸದುಪಯೋಗ ಪಡೆಯಬಹುದು.

  1. ಮಹಿಳೆ/ಯುವತಿಯರು ಮನೆಯಿಂದ ಹೊರಬಂದಂತಹ ಸಂದರ್ಭದಲ್ಲಿ ಮುಟ್ಟಾದರೆ (ಪೀರಿಯಡ್ಸ್‌) ನೆರವು ಕೇಂದ್ರಕ್ಕೆ ಹೋಗಿ ಶೌಚಾಲಯ ಬಳಸಬಹುದು. ಜತೆಗೆ ಹೊಟ್ಟೆ ನೋವಿನಿಂದ ಬಳಲಿದರೆ, ಒಂದೆರಡು ಗಂಟೆ ಬೆಡ್‌ ರೆಸ್ಟ್‌ ಮಾಡಲು ಅವಕಾಶ ಇದೆ.
  2. ನಗರದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆ ಬಂದಂತಹ ಸಂದರ್ಭದಲ್ಲಿ ಮಹಿಳೆಯರು ನೆರವು ಕೇಂದ್ರದಲ್ಲಿ ಆಶ್ರಯ ಪಡೆಯಬಹುದು.
  3. ಬೇರೆ ಪ್ರದೇಶಗಳಿಂದ ಯಾರಾದರೂ ಮಹಿಳೆ ತಡರಾತ್ರಿ ಬೆಂಗಳೂರಿಗೆ ಬಂದಂತಹ ಸಂದರ್ಭದಲ್ಲಿ ಇಲ್ಲಿ ಬೆಳಗ್ಗೆಯವರೆಗೆ ಆಶ್ರಯ ಪಡೆಯಬಹುದು.
  4. ಕಾಲೇಜು ವಿದ್ಯಾರ್ಥಿನಿಯರಿಗೆ ಪುರುಷರಿಂದ ಏನಾದರೂ ತೊಂದರೆ ಆದಂತಹ ಸಂದರ್ಭದಲ್ಲಿ ಈ ಕೇಂದ್ರದಲ್ಲಿರುವ ಮಹಿಳಾ ಸಿಬ್ಬಂದಿ ಸಂಪರ್ಕಿಸಬಹುದು.
  5. ರಸ್ತೆಯಲ್ಲಿ ಸಾರ್ವಜನಿಕರಿಗೆ ಯಾವುದಾದರೂ ತೊಂದರೆಗೆ ಸಿಲುಕಿದಾಗ ಪೊಲೀಸ್‌ ಠಾಣೆ ಹುಡುಕುವ ಬದಲು, ನೆರವಿನಲ್ಲಿ ಇರುವ ಪೊಲೀಸ್‌ ಸಂಪರ್ಕಿಸಬಹುದು.
  6. ಮಹಿಳಾ ಪೊಲೀಸ್‌ ಸಿಬ್ಬಂದಿಯೂ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ತೊಂದರೆಗೆ ಒಳಗಾದರೆ ಅಥವಾ ಅನಾರೋಗ್ಯಕ್ಕೆ ತುತ್ತಾದರೆ ಇದರ ನೆರವು ಪಡೆಯಬಹುದು.

ಏನೆಲ್ಲಾ ಸೌಲಭ್ಯಗಳಿವೆ?

 ನಾಲ್ಕು ಬಂಕ್‌ ಹಾಸಿಗೆಯ ಕಾಟ್‌ಗಳು

 ಒಂದು ಸ್ನಾನ ಮತ್ತು ಶೌಚಾಲಯ ಕೊಠಡಿ

 ಎಲ್‌ಇಡಿ ದೀಪ

 ಎರಡು ಸೀಲಿಂಗ್‌ ಫ್ಯಾನ್‌

 ವಿದ್ಯುತ್‌ ಸಾಕೆಟ್‌ಗಳು

 300-ಲೀಟರ್‌ವುಳ್ಳ ನೀರಿನ ಟ್ಯಾಂಕ್‌

 ತುರ್ತು ಚಿಕಿತ್ಸೆ ಪೆಟ್ಟಿಗೆ

ಮಹಿಳೆಯರಿಗೆ ಸುರಕ್ಷತೆ ನೀಡುವ ನಿಟ್ಟಿನಲ್ಲಿ “ನೆರವು’ ಸ್ಥಾಪನೆಗೊಂಡಿದೆ. 2ತಿಂಗಳ ಹಿಂದೆ ಇದನ್ನು ಅಭಿವೃದ್ಧಿಪಡಿಸಲಾಗಿದ್ದು, ಮಹಿಳೆಯರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಪ್ರಸ್ತುತ 60 ನೆರವು ಕ್ಯಾಬಿನ್‌ಗಳನ್ನು ನಿರ್ಮಿಸಲಾಗಿದ್ದು, ಬೇರೆಡೆಗೂ ಹೆಚ್ಚಿನ ಬೇಡಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಅವಶ್ಯಕ ಸ್ಥಳಗಳನ್ನು ಗುರುತಿಸಿ ಸ್ಥಾಪಿಸಲಾಗುವುದು. ● ರಮಣ ಗುಪ್ತ, ಹೆಚ್ಚುವರಿ ಪೊಲೀಸ್‌ ಆಯುಕ್ತರು, ಪೂರ್ವ ವಿಭಾಗ.

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.