![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 20, 2023, 11:05 AM IST
ಬೆಂಗಳೂರು: ಹಾಡಹಗಲೇ ಪೇಯಿಂಗ್ ಗೆಸ್ಟ್ ಹಾಗೂ ವಸತಿ ನಿಲಯಗಳಿಗೆ ನುಗ್ಗಿ ಲ್ಯಾಪ್ಟಾಪ್ ಹಾಗೂ ಮೊಬೈಲ್ಗಳನ್ನು ಕಳವು ಮಾಡುತ್ತಿದ್ದ ಮೂವರು ಅಂತಾರಾಜ್ಯ ಕಳ್ಳರನ್ನು ಯಶವಂತಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಯುವರಾಜ್ (34), ಪ್ರಭು (32) ಹಾಗೂ ತಮಿಳುನಾಡಿನ ಸೆಲ್ವರಾಜ್(36) ಬಂಧಿತರು. ಬಂಧಿತರಿಂದ 16 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 50 ಲ್ಯಾಪ್ ಟಾಪ್ಗ್ಳು ಹಾಗೂ 7 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪೇಯಿಂಗ್ ಗೆಸ್ಟ್, ಹಾಸ್ಟೆಲ್ ಮತ್ತು ಲಾಡ್ಜ್ಗಳಲ್ಲಿ ಲ್ಯಾಪ್ಟಾಪ್ಗ್ಳು ಮತ್ತು ಮೊಬೈಲ್ ಕಳವು ಹೆಚ್ಚಾಗಿತ್ತು. ಈ ಬಗ್ಗೆ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಈ ಮಧ್ಯೆ ಬಂಧಿತರು ಇತ್ತೀಚಿಗೆ ಠಾಣೆ ವ್ಯಾಪ್ತಿಯ ಎಂ.ಎಸ್.ರಾಮಯ್ಯ ಕಾಲೇಜು ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಇದೇ ವೇಳೆ ಅಪರಾಧ ವಿಭಾಗ ಸಿಬ್ಬಂದಿ ಗಸ್ತು ತಿರುಗುತ್ತಿದ್ದು, ಅನುಮಾನಗೊಂಡು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.