Dunki;ಶಾರುಖ್-ರಾಜು ಯಾವ ಮ್ಯಾಜಿಕ್ ಮಾಡಿದ್ದಾರೆನ್ನುವ ಕುತೂಹಲ:ಆಮಿರ್ ಖಾನ್
ನಿರ್ದೇಶಕ -ನಿರ್ಮಾಪಕಗೆ ಶುಭ ಹಾರೈಸಿದ ಬಾಲಿವುಡ್ ತಾರೆಯರು...
Team Udayavani, Dec 20, 2023, 5:47 PM IST
ಮುಂಬಯಿ :ಬಹುನಿರೀಕ್ಷಿತ ‘ಡಂಕಿ’ ಚಿತ್ರದ ಕುರಿತು ಪ್ರತಿಕ್ರಿಯೆ ನೀಡಿರುವ ಆಮಿರ್ ಖಾನ್ ”ರಾಜ್ ಕುಮಾರ್ ಹಿರಾನಿ ಮತ್ತು ಶಾರುಖ್ ಖಾನ್ ಏನು ಮ್ಯಾಜಿಕ್ ಮಾಡಿದ್ದಾರೆ ಎಂದು ನೋಡಲು ನಾವೆಲ್ಲರೂ ಬಹಳಷ್ಟು ಉತ್ಸುಕರಾಗಿದ್ದೇವೆ” ಎಂದು ಹೇಳಿದ್ದಾರೆ.
ಖ್ಯಾತ ನಿರ್ದೇಶಕ-ನಿರ್ಮಾಪಕ ರಾಜ್ಕುಮಾರ್ ಹಿರಾನಿ ಚಿತ್ರರಂಗದಲ್ಲಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದ ವೇಳೆ ಶುಭಕೋರಿರುವ ಆಮಿರ್ ಖಾನ್, ”ಹಿರಾನಿ ನನ್ನ ಮೆಚ್ಚಿನ ನಿರ್ದೇಶಕರಲ್ಲಿ ಒಬ್ಬರು. ಅಭಿನಂದನೆಗಳು, ರಾಜು, 20 ವರ್ಷಗಳನ್ನು ಪೂರೈಸಿದ ನಿಮ್ಮ ಮುಂದಿನ ಚಿತ್ರ ‘ಡಂಕಿ’. ನೀವು ಮತ್ತು ಶಾರುಖ್ ಏನು ಮ್ಯಾಜಿಕ್ ಮಾಡಿದ್ದೀರಿ ಎಂದು ನೋಡಲು ನಾವೆಲ್ಲರೂ ತುಂಬಾ ಉತ್ಸುಕರಾಗಿದ್ದೇವೆ. ನಿಮಗೆ ಶುಭವಾಗಲಿ ಎಂದು ಹಾರೈಸುತ್ತೇನೆ.ನಿರಂತರ ಯಶಸ್ಸು ನಿಮಗೆ ಸಿಗಲಿ” ಎಂದು ಪ್ರೀತಿಯಿಂದ ಹಾರೈಸಿದ್ದಾರೆ.
ಹಿರಾನಿ ಅವರು ಸಂಜಯ್ ದತ್, ಅರ್ಷದ್ ವಾರ್ಸಿ ಮತ್ತು ಬೊಮನ್ ಇರಾನಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮುನ್ನಾ ಭಾಯಿ ಎಂಬಿಬಿಎಸ್” ಮೂಲಕ ಗಮನ ಸೆಳೆದಿದ್ದರು. 2003, ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು.
ಅಕ್ರಮ ವಲಸೆ ತಂತ್ರ ‘ಡಾಂಕಿ ಫ್ಲೈಟ್’ ಆಧಾರಿತ ಹಾಸ್ಯ ಚಿತ್ರ “ಡಂಕಿ” ಗುರುವಾರ(ಡಿ.21) ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಿರಾನಿ ಅವರಿಗೆ ಶಾರುಖ್ ಖಾನ್ , ವಿದ್ಯಾ ಬಾಲನ್, ರಣಬೀರ್ ಕಪೂರ್, ವಿಕ್ಕಿ ಕೌಶಲ್, ಆರ್. ಮಾಧವನ್ ಸೇರಿ ಖ್ಯಾತ ನಟ ನಟಿಯರು ಶುಭ ಹಾರೈಸಿದ್ದಾರೆ.
ಹಿರಾನಿ ನಿರ್ದೇಶಿಸಿರುವ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿರುವ ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರದಲ್ಲಿ ಶಾರುಖ್ ಅವರೊಂದಿಗೆ ತಾಪ್ಸಿ ಪನ್ನು, ಬೊಮನ್ ಇರಾನಿ, ವಿಶೇಷ ಪಾತ್ರದಲ್ಲಿ ವಿಕ್ಕಿ ಕೌಶಲ್ ಸೇರಿ ಇತರರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.