![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 20, 2023, 10:04 PM IST
ಬಾಗಲಕೋಟೆ : ದೆಹಲಿಯ ಸಂಸತ್ ಭವನದಲ್ಲಿ ಹೊಗೆ ಬಾಂಬ್ ಸ್ಪೋಟ ಪ್ರಕರಣಕ್ಕೂ ಬಾಗಲಕೋಟೆಗೂ ನಂಟಿದೆಯಾ ? ಎಂಬ ಚರ್ಚೆ ಇದೀಗ ಶುರುವಾಗಿದೆ.ಹೌದು, ಬುಧವಾರ ಸಂಜೆ ದೆಹಲಿಯ ವಿಶೇಷ ರಾಷ್ಟ್ರೀಯ ತನಿಖಾ ದಳದ ನಾಲ್ವರು ಹಿರಿಯ ಅಧಿಕಾರಿಗಳ ತಂಡ, ಬಾಗಲಕೋಟೆ ನಗರಕ್ಕೆ ಆಗಮಿಸಿದ್ದು, ಇಲ್ಲಿನ ವಿದ್ಯಾಗಿರಿಯಲ್ಲಿ ವಾಸವಿರುವ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ದೆಹಲಿಯ ಸಂಸತ್ ಭವನದೊಳಗೆ ಹೊಗೆ ಬಾಂಬ್ ಸ್ಪೋಟದ ಪ್ರಮುಖ ಆರೋಪಿ, ಮೈಸೂರಿನ ಮನೋರಂಜನ್ ಜತೆಗೆ 2008-09ರಲ್ಲಿ ಬೆಂಗಳೂರಿನ ಬಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗದ ವೇಳೆ ಒಂದೇ ಕೊಠಡಿಯಲ್ಲಿ ಇಬ್ಬರು ವಾಸವಾಗಿದ್ದರು. ಹೀಗಾಗಿ ಇಬ್ಬರಿಗೂ ಬಹು ದಿನಗಳಿಂದ ಸ್ನೆಃಹವಿತ್ತು.ನಿರಂತರ ಸಂಪರ್ಕದಲ್ಲಿದ್ದ ಸ್ನೇಹಿತ ಬಾಗಲಕೋಟೆಯ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಮತ್ತು ಸಾಯಿಕೃಷ್ಣ ಅವರು ಎಷ್ಟು ವರ್ಷಗಳಿಂದ ಸ್ನೇಹಿತರು, ಸಂಸತ್ ಭವನದ ದಾಳಿಯ ವಿಷಯ, ಸಾಯಿಕೃಷ್ಣನಿಗೆ ಗೊತ್ತಿತ್ತಾ ? ಎಂಬ ವಿಷಯಗಳ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಸುಮಾರು ಎರಡು ಗಂಟೆಗಳ ಕಾಲ ಬಾಗಲಕೋಟೆಯ ನವನಗರ ಪೊಲೀಸ್ ಠಾಣೆಗೆ ಕರೆತಂದು ವಿಚಾಚರಣೆ ನಡೆಸಿ, ತಡರಾತ್ರಿ ಸಾಯಿಕೃಷ್ಣ ಜಗಲಿಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. ಸಾಯಿಕೃಷ್ಣ ಕ್ರಾಂತಿಕಾರಿ ವಿಚಾರ ಹೊಂದಿದ್ದ ಎನ್ನಲಾಗಿದ್ದು, ಮನೋರಂಜನ ಜತೆಗೆ ನಿರಂತರ ಸಂಪರ್ಕವೂ ಹೊಂದಿದ್ದ ಎನ್ನಲಾಗಿದೆ.
ದೆಹಲಿಯ ಪೊಲೀಸರು ಬಾಗಲಕೋಟೆಗೆ ಬಂದಿದ್ದಾರೆ. ಸಂಸತ್ ಭವನದೊಳಗೆ ನುಗ್ಗಿದ ಮೈಸೂರಿನ ಮನೋರಂಜನೆ ಅವರೊಂದಿಗೆ ಎಂಜಿನಿಯರಿಂಗ್ ಬ್ಯಾಚ್ಮೇಟ್ ಆಗಿದ್ದ ಬಾಗಲಕೋಟೆಯ ಸಾಯಿಕೃಷ್ಣ ಜಗಲಿ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
-ಅಮರನಾಥ ರಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.