Madikeri ಮರದ ಕೊಂಬೆ ಬಿದ್ದು ಮಹಿಳೆ ಸಾವು
Team Udayavani, Dec 21, 2023, 12:32 AM IST
ಮಡಿಕೇರಿ: ಮರದ ಕೊಂಬೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ತೋಟವೊಂದರಲ್ಲಿ ಸಂಭವಿಸಿದೆ.
ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಅವರ ಪತ್ನಿ ಲಕ್ಷ್ಮೀ (48) ಮೃತಪಟ್ಟವರು.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮರದ ಕೊಂಬೆ ತಲೆಯ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಲಕ್ಷ್ಮೀ ಮೃತಪಟ್ಟಿದ್ದರು.
ಮೃತರು ಪತಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.