Test; ವಸ್ತ್ರಾಕರ್‌ ದಾಳಿಗೆ ಕುಸಿದ ಆಸ್ಟ್ರೇಲಿಯ 219ಕ್ಕೆ ಆಲೌಟ್‌: ಭಾರತ ಒಂದು ವಿಕೆಟಿಗೆ 98


Team Udayavani, Dec 21, 2023, 10:39 PM IST

1-sdasd

ಮುಂಬಯಿ: ಸೀಮರ್‌ ಪೂಜಾ ವಸ್ತ್ರಾಕರ್‌ ಮತ್ತು ಆಫ್ ಸ್ಪಿನ್ನರ್‌ ಸ್ನೇಹ ರಾಣ ಅವರ ಅಮೋಘ ನಿರ್ವಹಣೆಯಿಂದ ಭಾರತ ತಂಡವು ಆಸ್ಟ್ರೇಲಿಯ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿಯೂ ಮೇಲುಗೈ ಸಾಧಿಸಿದೆ. ಅವರಿಬ್ಬರ ಬಿಗು ದಾಳಿಯಿಂದಾಗಿ ಆಸ್ಟ್ರೇಲಿಯ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 219 ರನ್ನಿಗೆ ಆಲೌಟಾಗಿದೆ.

ಆಬಳಿಕ ಬ್ಯಾಟಿಂಗ್‌ನಲ್ಲಿಯೂ ಮಿಂಚಿದ ಭಾರತ ವನಿತೆಯರು ದಿನದಾಟದ ಅಂತ್ಯಕ್ಕೆ ಒಂದು ವಿಕೆಟ್‌ ಕಳೆದುಕೊಂಡು 98 ರನ್‌ ಗಳಿಸಿದ್ದಾರೆ. ಆರಂಭಿಕ ಆಟಗಾರ್ತಿಯರಾದ ಸ್ಮತಿ ಮಂಧನಾ ಮತ್ತು ಶಫಾಲಿ ವರ್ಮ ಮೊದಲ ವಿಕೆಟಿಗೆ 90 ರನ್ನುಗಳ ಜತೆಯಾಟ ನಡೆಸಿ ಬೇರ್ಪಟ್ಟರು. 40 ರನ್‌ ಗಳಿಸಿದ ಶಫಾಲಿ ದಿನದಾಟದ ಅಂತ್ಯದ ವೇಳೆ ಔಟಾದರು. ಅವರಿಬ್ಬರು ಆಸೀಸ್‌ ದಾಳಿಯನ್ನು ದಿಟ್ಟವಾಗಿ ಎದರಿಸಿದ್ದರು. ಎಂಟು ಬೌಂಡರಿ ಬಾರಿಸಿರುವ ಮಂಧನಾ 43 ರನ್ನುಗಳಿಂದ ಆಡುತ್ತಿದ್ದು ಭಾರತದ ಆಸರೆಯಾಗಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ನಡೆದ ಏಕೈಕ ಟೆಸ್ಟ್‌ನಲ್ಲಿ ದಾಖಲೆಯ ಅಂತರದಲ್ಲಿ ಜಯ ಸಾಧಿಸಿದ್ದ ಸಂಭ್ರಮದಲ್ಲಿದ್ದ ಭಾರತೀಯ ವನಿತೆಯರು ಆಸ್ಟ್ರೇಲಿಯ ವಿರುದ್ಧವೂ ಅಮೋಘ ಹೋರಾಟ ಮುಂದುವರಿಸಿದ್ದರು. ಭಾರತೀಯರ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ ವನಿತೆಯರು ಆಗಾಗ್ಗೆ$ವಿಕೆಟ್‌ ಕಳೆದುಕೊಳ್ಳುತ್ತ ಪೂರ್ಣ ಶರಣಾದರು. ತಹ್ಲಿಯಾ ಮೆಕ್‌ಗ್ರಾಥ್‌ ತಾಳ್ಮೆಯ ಅರ್ಧಶತಕ ಹೊಡೆದರೂ ಉಳಿದವರ್ಯಾರೂ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಲು ವಿಫ‌ಲರಾದರು.

ಮೊದಲ ಓವರಿನಲ್ಲಿಯೇ ತಂಡ ವಿಕೆಟನ್ನು ಕಳೆದುಕೊಂಡಿತ್ತು. ನಾಲ್ಕು ಎಸೆತಗಳ ಬಳಿಕ ವಸ್ತ್ರಾಕರ್‌ ಅಮೋಘ ದಾಳಿ ಸಂಘಟಿಸಿ ಎಲಿಸ್‌ ಪೆರ್ರಿ ಅವರ ವಿಕೆಟನ್ನು ಹಾರಿಸಲು ಯಶಸ್ವಿಯಾದರು. ಇದರಿಂದಾಗಿ ಆಸ್ಟ್ರೇಲಿಯ 7 ರನ್‌ ತಲುಪುವಷ್ಟರಲ್ಲಿ ಎರಡು ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಆದರೆ ಮೆಕ್‌ಗ್ರಾಥ್‌ ತಾಳ್ಮೆಯ ಆಟವಾಡಿ ಇನ್ನಷ್ಟು ಕುಸಿತ ಆಗದಂತೆ ತಡೆದರೂ ಕ್ರೀಸ್‌ನ ಇನ್ನೊಂದು ಬದಿಯಿಂದ ವಿಕೆಟ್‌ ಉರುಳಿಸಲು ಭಾರತೀಯರು ಯಶಸ್ವಿಯಾದರು. ಅಂತಿಮವಾಗಿ ಆಸ್ಟ್ರೇಲಿಯ 219 ರನ್ನಿಗೆ ಆಲೌಟಾಯಿತು.

ಬಿಗು ದಾಳಿ ಸಂಘಟಿಸಿದ ವಸ್ತ್ರಾಕರ್‌ 53 ರನ್ನಿಗೆ ನಾಲ್ಕು ವಿಕೆಟ್‌ ಮಿಂಚಿದರು. ಅವರಿಗೆ ಉಪಯುಕ್ತ ಬೆಂಬಲ ನೀಡಿದ ಸ್ನೇಹ ರಾಣ 56 ರನ್ನಿಗೆ 3 ವಿಕೆಟ್‌ ಕಿತ್ತರೆ ದೀಪ್ತಿ ಶರ್ಮ 45 ರನ್ನಿಗೆ 2 ವಿಕೆಟ್‌ ಹಾರಿಸಿದರು.
ಸಂಕ್ಷಿಪ್ತ ಸ್ಕೋರು: ಆಸ್ಟ್ರೇಲಿಯ 219 (ಬೆತ್‌ ಮೂನಿ 40, ತಹ್ಲಿಯಾ ಮೆಕ್‌ಗ್ರಾಥ್‌ 50, ಅಲಿಸಾ ಹೀಲಿ 38, ವಸ್ತ್ರಾಕರ್‌ 53ಕ್ಕೆ 4, ಸ್ನೇಹ ರಾಣ 56ಕ್ಕೆ 3, ದೀಪ್ತಿ ಶರ್ಮ 45ಕ್ಕೆ 2); ಭಾರತ 1 ವಿಕೆಟಿಗೆ 98 (ಮಂಧನಾ 43 ಔಟಾಗದೆ, ಶಫಾಲಿ ವರ್ಮ 40).

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

1–ind-ccc

Team India; ಮುಂಬಯಿ ಟೆಸ್ಟ್‌ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ ಸೂರ್ಯ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.