![Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ](https://www.udayavani.com/wp-content/uploads/2024/07/deng-415x229.jpg)
Airport ಕೋವಿಡ್ ಪರೀಕ್ಷೆ ಕಡ್ಡಾಯ ಸದ್ಯಕ್ಕಿಲ್ಲ: ಕೇಂದ್ರ
ಸೋಂಕು ಹೆಚ್ಚಿದ್ದರೂ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ
Team Udayavani, Dec 22, 2023, 6:10 AM IST
![Covid test](https://www.udayavani.com/wp-content/uploads/2023/12/Covid-test-4-620x354.jpg)
ಹೊಸದಿಲ್ಲಿ: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಆರ್ಟಿಪಿಸಿಆರ್ -ಕೊರೊನಾ ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವ ಕುರಿತು ಚಿಂತನೆ ಮಾಡಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟ ಪಡಿಸಿದೆ.
ಜೆಎನ್.1 ಉಪ ರೂಪಾಂತರಿ ಪತ್ತೆಯ ಬಳಿಕವೂ ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆಯೇ ಇದ್ದು, ಪರಿಸ್ಥಿತಿ ತೀರಾ ಕಳವಳಕಾರಿಯಾಗಿಲ್ಲ ಈ ಹಿನ್ನೆಲೆಯಲ್ಲಿ ಅಂಥ ಯಾವುದೇ ಕ್ರಮಗಳನ್ನು ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾವಿಸಲಾಗಿಲ್ಲ ಎಂದಿದೆ. ಇನ್ನು ಗುರುವಾರ ದೇಶಾದ್ಯಂತ ಹೊಸದಾಗಿ 594 ಮಂದಿಗೆ ಕೊರೊನಾ ದೃಢಪಟ್ಟು, 6 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಕೇರಳದಿಂದಲೇ 300 ಪ್ರಕರಣ ದಾಖಲಾಗಿದೆ ಹಾಗೂ ಮೂವರು ಮೃತಪಟ್ಟಿದ್ದಾರೆ.
ರಾಜಸ್ಥಾನದಲ್ಲಿ ಮಾರ್ಗಸೂಚಿ: ರಾಜಸ್ಥಾನದ ಜೈಸ್ಮ ಲೇರ್ನಲ್ಲಿ ಇಬ್ಬರಿಗೆ ಜೆಎನ್.1 ಉಪ ರೂಪಾಂತರಿ ದೃಢವಾದ ಬೆನ್ನಲ್ಲೇ ಗುರುವಾರ ಜೈಪುರದಲ್ಲಿ ಮತ್ತಿಬ್ಬರಿಗೆ ಇದೇ ಸೋಂಕು ಹರಡಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಚಂಡೀಗಢದಲ್ಲಿ ಮಾಸ್ಕ್ ಕಡ್ಡಾಯ
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಚಂಡೀಗಢ ಆಡಳಿತ ಆದೇಶಿಸಿದೆ. ಉಪ ತಳಿ ಜೆಎನ್.1 ತೀವ್ರಗತಿಯಲ್ಲಿ ಹರಡುತ್ತಿದೆ. ಮುನ್ನೆ ಚ್ಚರಿಕೆ ಕ್ರಮವಾಗಿ ಚಂಡೀಗಢ ಆಡಳಿತ ಮಾರ್ಗಸೂಚಿ ಹೊರಡಿಸಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೆಮ್ಮುವಾಗ ಮತ್ತು ಸೀನುವಾಗ ಬಟ್ಟೆ ಅಥವಾ ಟಿಶ್ಯು ಪೇಪರ್ ಅನ್ನು ಅಡ್ಡ ಹಿಡಿಯಿರಿ. ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿ ಎಂದು ಸಲಹೆ ನೀಡಿದೆ.
ಟಾಪ್ ನ್ಯೂಸ್
![Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ](https://www.udayavani.com/wp-content/uploads/2024/07/deng-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
![NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?](https://www.udayavani.com/wp-content/uploads/2024/07/neet-5-150x83.jpg)
NEET-UG Counselling: ನೀಟ್-ಯುಜಿ ಕೌನ್ಸೆಲಿಂಗ್ ಈ ಮಾಸಾಂತ್ಯಕ್ಕೆ ಆರಂಭ?
![Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ](https://www.udayavani.com/wp-content/uploads/2024/07/ambani-1-150x90.jpg)
Justin Bieber: ಅಂಬಾನಿ ಪುತ್ರನ “ಸಂಗೀತ್’ನಲ್ಲಿ ಮನಗೆದ್ದ ಜಸ್ಟೀನ್ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.