![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Dec 22, 2023, 1:16 PM IST
ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿದಿನ ಬೆಳಿಗ್ಗೆ 8.45 ನಿಮಿಷಕ್ಕೆ ಹೊರಡಬೇಕಾದ ದಾಂಡೇಲಿ-ಯಲ್ಲಾಪುರ- ಶಿರಸಿ ಬಸ್ ಶುಕ್ರವಾರ ನಿಗದಿತ ಸಮಯಕ್ಕೆ ಹೊರಡದೇ ಸುಮಾರು 1.15 ನಿಮಿಷದ ನಂತರ ಹೊರಡಿರುವುದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಪ್ರಯಾಣಿಕರು ಸಾರಿಗೆ ಘಟಕದ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಂದಿನಂತೆ ಬೆಳಿಗ್ಗೆ 8.45 ನಿಮಿಷಕ್ಕೆ ಹೊರಡಬೇಕಾದ ಬಸ್, ದುರಸ್ತಿ ಹಿನ್ನೆಲೆ ಮತ್ತೆ ಸಾರಿಗೆ ಡಿಪೋಗೆ ಹೋಗಿ ದುರಸ್ತಿ ಮಾಡಿಸಿಕೊಂಡು 10 ಗಂಟೆಗೆ ಬಸ್ ನಿಲ್ದಾಣಕ್ಕೆ ಬಂದಿದೆ. ಆನಂತರ ಪ್ರಯಾಣಿಕರು ಸಾರಿಗೆ ಘಟಕದ ನಿರ್ಲಕ್ಷ್ಯಕ್ಕೆ ಹಿಡಿ ಶಾಪ ಹಾಕಿ ಬಸ್ ಹತ್ತಿದ್ದಾರೆ.
ಸಾರಿಗೆ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬಸ್ ಬರುವ ಮುನ್ನವೇ ಬಸ್ ಅನ್ನು ಸರಿಪಡಿಸಿ ನಿಲ್ದಾಣಕ್ಕೆ ಬರಬೇಕೆ ವಿನಹ: ಬಸ್ ನಿಲ್ದಾಣಕ್ಕೆ ಬಂದ ನಂತರ ಮತ್ತೆ ದುರಸ್ತಿಗೆ ತೆಗೆದುಕೊಂಡು ಹೋಗುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿದೆ.
ಕೆಟ್ಟು ಹೋದ ಬಸ್ಸನ್ನು ದುರಸ್ತಿ ಮಾಡಿ ಅದನ್ನೇ ಕಳುಹಿಸುವ ಬದಲು, ನಿಗದಿತ ಸಮಯಕ್ಕೆ ಬದಲಿ ಬಸ್ಸನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಇನ್ನು ಮುಂದೆಯಾದರೂ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.