Udupi ಗಾಂಜಾ ಸೇವನೆ: ಓರ್ವನ ಬಂಧನ
Team Udayavani, Dec 24, 2023, 12:33 AM IST
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಸಂದೀಪ್ (36)ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಆತ್ಮಹತ್ಯೆ
ಉಡುಪಿ: ಮಾನಸಿಕವಾಗಿ ನೊಂದು ಉಡುಪಿಯ ಗಣೇಶ್ (38) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 1 ವರ್ಷದಿಂದ ಕ್ಷಯ ರೋಗ ಕಾಯಿಲೆಯಿಂದ ಬಳಲುತ್ತಿದ್ದು, ಅಂಗಡಿ ವ್ಯವಹಾರದಲ್ಲಿ ನಷ್ಟವನ್ನು ಅನುಭವಿಸಿದ್ದರು. ಈ ಕಾರಣಗಳಿಂದ ಮಾನಸಿಕವಾಗಿ ನೊಂದು ಡಿ. 22ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ: ಓರ್ವ ವಶ
ಮಣಿಪಾಲ: ಮಣಿಪಾಲದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಧೀರಜ್ (18)ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ನಾಪತ್ತೆ: ದೂರು
ಮಲ್ಪೆ: ಬಡಾನಿಡಿಯೂರು ಗ್ರಾಮದ ಶರಣಪ್ಪ (38) ಅವರು ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ ಸುನೀತಾ ಶರಣಪ್ಪ ಮಲ್ಪೆ ಠಾಣೆಗೆ ದೂರು ನೀಡಿದ್ದಾರೆ. ಮೇ 11ರಂದು ತಾನು ಬೆಂಗಳೂರಿಗೆ ಹೋಗಿರುವುದಾಗಿ ಮೆಸೇಜ್ ಮಾಡಿದ್ದರು. ಡಿ. 17ರಂದು ಅವರು ಫೋನ್ ಮಾಡಿ ತಾನು ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಮಲ್ಪೆ: ಕೊಡವೂರು ನಿವಾಸಿ ಮುತ್ತಯ್ಯ (66) ಅವರು ಶುಕ್ರವಾರ ರಾತ್ರಿ ಮನೆಯ ಬಾವಿಯ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಅಪ್ಪಿ ಅವರು ಬೆಳಗ್ಗೆ ಎದ್ದು ಬಾವಿ ಕಟ್ಟೆಯ ಬಳಿ ಹೋದಾಗಲಷ್ಟೇ ವಿಷಯ ಬೆಳಕಿಗೆ ಬಂದಿದೆ. 5 ವರ್ಷಗಳಿಂದ ಸೊಂಟ ಮತ್ತು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿ ದ್ದಾರೆನ್ನಲಾಗಿದ್ದು, ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.