MLA Siddu Savadi; ಸಾರ್ವಜನಿಕರ ಸಹಭಾಗಿತ್ವದಿಂದ ಸರಕಾರದ ಯೋಜನೆಗಳು ಯಶಸ್ವಿ
ಹಿಪ್ಪರಗಿ ಜಲಾಶಯ ಹಿನ್ನೀರನಲ್ಲಿ 4 ಲಕ್ಷ ಮೀನು ಮರಿ ಬೀಡುವ ಕಾರ್ಯಕ್ರಮ
Team Udayavani, Dec 24, 2023, 5:28 PM IST
ರಬಕವಿ ಬನಹಟ್ಟಿ : ಸರ್ಕಾರದ ಯಾವುದೇ ಕೆಲಸಗಳಿದ್ದರೂ ಅದಕ್ಕೆ ಸಾರ್ವಜನಿಕರ ಸಹಭಾಗಿತ್ವವಿರಬೇಕು. ಆಗ ಮಾತ್ರ ಯೋಜನೆ ಯಶಸ್ವಿಯಾಗಲು ಸಾಧ್ಯವೆಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ತಾಲೂಕಿನ ಹಿಪ್ಪರಗಿ ಜಲಾಶಯದ ಹಿನ್ನೀರಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಮೀನು ಮರಿ ಬಿಡುವ ಕಾರ್ಯಕ್ರಮದಲ್ಲಿ ಹಿಪ್ಪರಗಿ ಜಲಾಶಯದ ಹಿನ್ನೀರಿಗೆ ಮೀನು ಮರಿ ಬಿಟ್ಟು ಅವರು ಮಾತನಾಡಿದರು.
ಹಿಪ್ಪರಗಿ ಜಲಾಶಯ ಹಿನ್ನೀರ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಿರಂತರವಾಗಿ ನಡೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಮೀನುಗಳ ಸಂಖ್ಯೆ ಕಡಿಮೆಯಾಗಿತ್ತು. ಅಲ್ಲದೆ ಹರಿಯುವ ನೀರಿನಲ್ಲಿ ಮಾತ್ರ ಮೀನಿನ ಸಂತಾನೋತ್ಪತ್ತಿಯಾಗುತ್ತದೆ. ಹಿನ್ನೀರಿನಲ್ಲಿ ಮೀನಿನ ಸಂತಾನೋತ್ಪತ್ತಿ ಅಷ್ಟೊಂದು ಪ್ರಮಾಣದಲ್ಲಿ ಆಗಲ್ಲ. ಹೀಗಾಗಿ ಇಲಾಖೆಯಿಂದ ಬೇರಡೆಯಿಂದ ಮೀನಿನ ಮರಿಗಳನ್ನು ತಂದು ಬಿಡಲಾಗುತ್ತಿದೆ ಎಂದರು.
ಮೀನುಗಾರಿಕೆ ಇಲಾಖೆಯಿಂದ ಒಟ್ಟು 4 ಲಕ್ಷ ಮರಿಗಳನ್ನು ತರಲಾಗಿದ್ದು, ಪ್ರತಿಯೊಂದು ಮರಿಗಳು 1 ಇಂಚಿನ ಗಾತ್ರದಿಂದ 4ಇಂಚಿನವರೆಗೆ ಇದ್ದು 3 ರಿಂದ ನಾಲ್ಕು ತಿಂಗಳಲ್ಲಿ ಸುಮಾರು 6 ರಿಂದ 5 ಕೆಜಿ ತೂಕದವರೆಗೆ ಈ ಮರಿಗಳು ಬೆಳೆಯುತ್ತವೆ. ಇದರಿಂದ ಈ ಭಾಗದಲ್ಲಿ ಮೀನುಗಾರರು, ಮೀನು ತಿನ್ನುವವರಿಗೂ ಅನುಕೂಲವಾಗಲಿದೆ ಎಂದರು.
ಮೀನುಗಾರಿಕೆಯೂ ಈಗ ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ಜಲಾಶಯದ ಹಿನ್ನೀರಿನಲ್ಲಿ ಮೀನಿನ ಮರಿ ಬಿಡುವದರಿಂದ ಈ ಭಾಗದಲ್ಲಿ ಮೀನುಗಳ ಸಂಖ್ಯೆ ವೃದ್ಧಿಯಾಗಲಿದೆ. ಹಿಪ್ಪರಗಿ ಜಲಾಶಯದ ಹಿನ್ನೀರಿನ ಮೀನುಗಳಿಗೆ ಬೇಡಿಕೆಯೂ ಹೆಚ್ಚಿದೆ ಎಂದರು.
ಆನಂದ ಕಂಪು, ಗಂಗಯ್ಯ ಕುರಣಿ, ಚನ್ನಯ್ಯ ಮಠಪತಿ, ಮಹಾದೇವ ನಾಯಕ, ವೆಂಕಟೇಶ ಕೌಜಲಗಿ, ವರ್ಧಮಾನ ಕೋರಿ, ಪಾಂಡು ಸಾಲ್ಗುಡಿ, ಮುತ್ತುರಾಜ ಶಿರಹಟ್ಟಿ ಹಾಗು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.