Direct turn; ನಾನು ಸರ್ವಪಕ್ಷದ ವಿಪಕ್ಷ ನಾಯಕ: ಯತ್ನಾಳ್

ಕೆಜೆಪಿ ಭಾಗ ಎರಡು ರಚಿಸಿರುವ ವಿಜಯೇಂದ್ರ...!!!..ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ

Team Udayavani, Dec 24, 2023, 7:27 PM IST

Yatnal 2

ವಿಜಯಪುರ: ನಾನು ಜನಮಾನಸದಿಂದ ಬಂದಿರುವ ವಿಲನ್, ಹೀರೋ ಅಲ್ಲ. ನಾನೂ ಆಲ್ವೇಸ್ ವಿಲನ್, ಸರ್ವಪಕ್ಷಗಳ ವಿಪಕ್ಷ ನಾಯಕ ನಾನೇ. ಚಿತ್ರರಂಗದಲ್ಲಿ ವಿಲನ್ ಆದವರೇ ನಂತರ ಅಂಬರೀಶ್ ಅವರಂತೆ ಹೀರೋ ಆಗಿದ್ದಾರೆ. ನಾನೂ ಒಂದು ದಿನ ಹೀರೋ ಆಗುವ ಅವಕಾಶ ಸಿಗಬಹುದು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿ, ವಿಲನ್ ಪಾತ್ರ ಇದ್ದರೆ ಮಾತ್ರವೇ ಹೀರೋ ಪಾತ್ರಕ್ಕೆ ಮಹತ್ವ ಬರುತ್ತದೆ. ಹೀಗಾಗಿ ಜನಮಾನಸದಿಂದ ಬಂದಿರುವ ಶಾಶ್ವತ ವಿಪಕ್ಷ ನಾಯಕ ನಾನು. ಎಂದು ಸ್ವಪಕ್ಷೀಯರ ವಿರುದ್ಧದ ತಮ್ಮ ಟೀಕೆಗಳನ್ನು ಸಮರ್ಥಿಸಿಕೊಂಡರು.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಪಕ್ಷದ ಅಧ್ಯಕ್ಷ ವಿಜಯೇಂದ್ರ ತಮಗೆ ಬೇಕಾದವರನ್ನು ನೇಮಿಸಿದ್ದಾರೆ. ಬಿಜೆಪಿ ಪಕ್ಷದಲ್ಲೇ ಇದ್ದುಒಂದು ರಾಜ್ಯದಲ್ಲಿ ಕೆಜೆಪಿ ಭಾಗ ಎರಡು ರಚಿಸಿದ್ದಾರೆ ಎಂದು ವಾಗ್ದಾಳಿ ಮುಂದುವರೆಸಿದರು.

ಪಕ್ಷದ ಹೈಕಮಾಂಡ್ ಕಳ್ಳರ ಕೈಗೇ ಚಾವಿ ಕೊಟ್ಟಿದೆ. ರಾಜಕೀಯದಲ್ಲಿ ಲಫಂಗರು, ಕಳ್ಳರ ಸಂಖ್ಯೆಯೇ ಇದೀಗ ಹೆಚ್ಚುತ್ತಿದೆ. ಸಭ್ಯ ರಾಜಕೀಯ ಮಾಡುವವರಿಗೆ ಅವಕಾಶ ಇಲ್ಲವಾಗಿದ್ದು, ರಾಜಕೀಯದಲ್ಲಿ ಮೌಲ್ಯಾಧಾರಿತ ರಾಜಕೀಯ ಮರೆಯಾಗಿದೆ ಎಂದರು.

ಒಂದೊಮ್ಮೆ 2024 ರ ಲೋಕಸಭೇ ಚುನಾವಣೆಯಲ್ಲಿ ರಾಜ್ಯದಲ್ಲಿ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲದಿದ್ದಲ್ಲಿ ವಿಜಯೇಂದ್ರನಿಗೆ ಕೊಟ್ಟಿರುವ ಚಾವಿಯನ್ನು ಕಸಿದುಕೊಳ್ಳಲಿದೆ. ಒಂದೇ ಒಂದು ಸ್ಥಾನದಲ್ಲಿ ಬಿಜೆಪಿ ಸೋತರೂ ಹೈಕಮಾಂಡ್ ವಿಜಯೇಂದ್ರ ಸ್ಥಾನ ತೆರವು ಮಾಡಲಿದೆ ಎಂದರು.

ಲೋಕಸಭೆ ಚುನಾವಣೆ ಬಳಿಕವೂ ಪಕ್ಷದ ವರಿಷ್ಠರು ಬಿಜೆಪಿ ರಾಜ್ಯ ಘಟಕಕ್ಕೆ ಮೇಜರ್ ಸರ್ಜರಿ ಮಾಡದಿದ್ದಲ್ಲಿ ನಾನು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಪಕ್ಷದ ವರಿಷ್ಠರಿಗೆ ವಿಜಯೇಂದ್ರ ವಿರುದ್ಧ ತಮ್ಮ ಪ್ರತಿರೋಧ ಮುಂದುವರೆಯಲಿದೆ ಎಂದು ನೇರವಾಗಿ ಸಂದೇಶ ರವಾನಿಸಿದರು.

2028 ರ ವಿಧಾನಸಭೇ ಚುನಾವಣೆ ಬಳಿಕ ನಾನು ರಾಜಕೀಯ ನಿವೃತ್ತಿ ನಿರ್ಧಾರ ಮಾಡಲಿದ್ದೇನೆ. ಹೀಗಾಗಿ ಯುಟರ್ನ್ ಹೊಡೆದ ಯತ್ನಾಳ ಎನ್ನದೇ, ಡೈರೆಕ್ಟ್ ಟರ್ನ್ ಹೊಡೆದ ಯತ್ನಾಳ ಎನ್ನಿ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಛೇಡಿಸಿದರು.

ಟಾಪ್ ನ್ಯೂಸ್

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.