BJP: ವಿಜಯೇಂದ್ರ ತಂಡದ ಚೊಚ್ಚಲ ಸಭೆ ನಾಡಿದ್ದು
ಲೋಕಸಭಾ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ಬಗ್ಗೆ ಚರ್ಚೆ ನಿರೀಕ್ಷೆ
Team Udayavani, Dec 24, 2023, 11:24 PM IST
ಬೆಂಗಳೂರು: ನೂತನ ತಂಡ ರಚನೆಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಹೊಸ ಪದಾಧಿಕಾರಿಗಳ ಸಭೆ ಕರೆದಿದ್ದು, ಮುಂದಿನ ಲೋಕ ಸಭಾ ಚುನಾವಣೆಗೆ ಸಜ್ಜಾಗಲಿದ್ದಾರೆ.
ಹೊಸ ತಂಡದ ಕುರಿತು ಪ್ರತಿಕ್ರಿಯಿ ಸಿರುವ ವಿಜಯೇಂದ್ರ, ಬೇರೆ ಬೇರೆ ಸಮಾಜಗಳು, ಪಂಗಡಗಳು, ಕರಾ ವಳಿ, ಮುಂಬಯಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಹಿರಿಯರಿಗೂ ಅವಕಾಶ ಮಾಡಿಕೊಟ್ಟಿದೆ ಎಂದು ತಮ್ಮ ಹೊಸ ತಂಡವನ್ನು ಸಮರ್ಥಿಸಿಕೊಂಡರು.
ಮುಂದಿನ ಲೋಕಸಭಾ ಚುನಾವಣೆಯ ವರೆಗೆ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆಗೆ ಬಲ ತುಂಬಬೇಕೆಂಬ ಸಂದೇಶ ನೀಡುವ ಉದ್ದೇಶ ದಿಂದ ಬುಧವಾರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ದಲ್ಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವುದು ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ಮೂಲಕ ಪ್ರಧಾನಿ ಮೋದಿ ಅವರಿಗೆ ಬಲ ತುಂಬುವ ಕಾರ್ಯ ಮಾಡಬೇಕಿದೆ ಎಂದು ತಿಳಿಸಿದರು.
ದಾವಣಗೆರೆಯಲ್ಲಿ ಮಾತನಾಡಿ, ತಂದೆಯ ಮಾದರಿಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಸುತ್ತಿ ಪಕ್ಷವನ್ನು ಕಟ್ಟುತ್ತೇನೆ ಎಂದರು.
ಸದಾನಂದ ಗೌಡ, ಯತ್ನಾಳ್ ಅಸಮಾಧಾನ
ಬೆಂಗಳೂರು: ನೂತನ ಪದಾಧಿಕಾರಿಗಳ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ಶಾಸಕ ಬಸನಗೌಡ ಯತ್ನಾಳ್ ಅಸಮಾ ಧಾನ ವ್ಯಕ್ತಪಡಿಸಿದ್ದಾರೆ. ವರಿಷ್ಠರು ಕೋರ್ ಕಮಿಟಿ ಸದಸ್ಯರು ಅಥವಾ ರಾಜ್ಯ ಬಿಜೆಪಿಯ ಪ್ರಮುಖರನ್ನು ಕರೆದು ಮಾತನಾಡಿ ತಂಡ ಕಟ್ಟಬೇಕಿತ್ತು. ಆಂತರಿಕ ಭಿನ್ನಾಭಿಪ್ರಾಯ, ಕಚ್ಚಾಟಗಳಿಗೆ ಇತಿಶ್ರೀ ಹಾಕಬೇಕಿತ್ತು ಎಂದು ಡಿವಿಎಸ್ ಹೇಳಿದರು. ವಿಜಯೇಂದ್ರ ಅವರು ತಮಗೆ ಬೇಕಾದವರನ್ನು ನೇಮಿಸಿ ಕೊಂಡಿದ್ದಾರೆ ಎಂದು ಟೀಕಿಸಿರುವ ಯತ್ನಾಳ್, ಬಿಜೆಪಿಯೊಳಗೆ ಕೆಜೆಪಿ ಭಾಗ 2 ತಂಡವನ್ನು ರಚಿಸಿಕೊಂಡಿದ್ದಾರೆ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.