MRG Group; ಇನ್ನೊಬ್ಬರ ಕಷ್ಟ ಆಲಿಸುವ ಮನಸ್ಥಿತಿ ಶ್ರೇಷ್ಠ: ರಮೇಶ್‌ ಅರವಿಂದ್‌

ಆಶಾ ಪ್ರಕಾಶ್‌ ಶೆಟ್ಟಿ ಸಹಾಯ ಹಸ್ತ; 4 ಕೋಟಿ ರೂ. ನೆರವು ವಿತರಣೆ

Team Udayavani, Dec 25, 2023, 11:56 PM IST

MRG Group; ಇನ್ನೊಬ್ಬರ ಕಷ್ಟ ಆಲಿಸುವ ಮನಸ್ಥಿತಿ ಶ್ರೇಷ್ಠ: ರಮೇಶ್‌ ಅರವಿಂದ್‌

ಮಂಗಳೂರು: ಎಂಆರ್‌ಜಿ ಗ್ರೂಪ್‌ನ ಚೇರ್ಮನ್‌ ಪ್ರಕಾಶ್‌ ಶೆಟ್ಟಿ ಅವರು ಸಹಾಯ ಮಾಡುವಾಗ ಊರು, ಧರ್ಮ, ಹಿನ್ನೆಲೆ ಕೇಳಲಿಲ್ಲ. ಬದಲಾಗಿ “ನಿಮ್ಮ ಕಷ್ಟ ಏನು’ ಎಂದು ಮಾತ್ರ ಕೇಳಿದ್ದಾರೆ. ಇನ್ನೊಬ್ಬರ ಕಷ್ಟ ಕೇಳುವ ಈ ಮನಸ್ಸು ನಿಜಕ್ಕೂ ಶ್ರೇಷ್ಠ ಎಂದು ನಟ ಡಾ| ರಮೇಶ್‌ ಅರವಿಂದ್‌ ಹೇಳಿದರು.

ಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಸೋಮವಾರ ಐದನೇ ವರ್ಷದ ಆಶಾ ಪ್ರಕಾಶ್‌ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿ
ದರು. ಇನ್ನೊಬ್ಬರನ್ನು ಮೇಲಕ್ಕೆತ್ತಲೆಂದೇ ಭಗವಂತ ನಮಗೆ ಹಸ್ತ ನೀಡಿದ್ದಾನೆ. ಬಲಶಾಲಿಗಳೊಂದಿಗಿನ ಗೆಲುವು ಗೆಲುವಲ್ಲ. ಅಸಹಾಯಕರಿಗೆ ಮಾಡುವಸಹಾಯವೇ ನಮ್ಮ ಗೆಲುವು. ಇರುವುದು ಒಂದು ಜೀವನ. ಅದರಲ್ಲಿ ರುವುದು ಒಂದು ಪುಟ್ಟ “ಹೃದಯ’, ಮತ್ತೊಂದು “ಪ್ರಪಂಚ’. “ಹೃದಯ’ ಪ್ರಪಂಚದ ಎಷ್ಟು ಮಂದಿಗೆ ಸ್ಪಂದಿಸಿದೆ ಎನ್ನುವುದೇ ಮುಖ್ಯ ಎಂದರು.

ಕಳೆದ ಐದು ವರ್ಷಗಳಿಂದ ಸಹಾಯಹಸ್ತ ನೀಡುವ ಪ್ರಕಾಶ್‌ ಶೆಟ್ಟಿಯವರ ಈ ಪಯಣ ಇನ್ನಷ್ಟು ವರ್ಷ ಮುಂದುವರಿಯಲಿ. ನೆರವುಪಡೆದವರು ಸಾಧ್ಯವಾದರೆ ಇನ್ನೊಬ್ಬ ರಿಗೆ ನೆರವಾಗುವ ಮೂಲಕ ಕೃತಾರ್ಥ ರಾಗಬೇಕು ಎಂದರು.

ಕಾರ್ಯಕ್ರಮದ ರೂವಾರಿ ಎಂಆರ್‌ ಜಿ ಗ್ರೂಪ್‌ನ ಚೇರ್ಮನ್‌ ಕೆ. ಪ್ರಕಾಶ್‌ ಶೆಟ್ಟಿ ಮಾತನಾಡಿ, ಜನ್ಮಭೂಮಿಯಿಂದ ಕರ್ಮಭೂಮಿಗೆ ಹೋಗುವಾಗ ಕತ್ತಲ ಹಾದಿಯಲ್ಲಿ ಭಗವಂತ ಬೆಳಕು ತೋರಿಸಿದ. ಊರಿಗೆ ಏನಾದರೂ ಮಾಡಬೇಕು ಎನ್ನುವ ಸಂಕಲ್ಪದಂತೆ ಕಾರ್ಯನಿರತನಾಗಿದ್ದೇನೆ. ಮೊದಲ ವರ್ಷ 1.25 ಕೋ. ರೂ., ಎರಡು ಮತ್ತು ಮೂರನೇ ವರ್ಷ ತಲಾ 2 ಕೋ.ರೂ., ನಾಲ್ಕನೇ ವರ್ಷ 3 ಕೋ.ರೂ. ಸಹಾಯಹಸ್ತ ನೀಡಲಾಗಿದೆ ಎಂದು ಹೇಳಿದರು.

ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ ಮೋಹನ ಆಳ್ವ, ಎಂಆರ್‌ಜಿ ಗ್ರೂಪ್‌ ಆಡಳಿತ ನಿರ್ದೇಶಕ ಗೌರವ್‌ ಪಿ. ಶೆಟ್ಟಿ, ಆಶಾ ಪ್ರಕಾಶ್‌ ಶೆಟ್ಟಿ ಉಪಸ್ಥಿತರಿದ್ದರು.

ನೆರವು ವಿತರಣೆ
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ, ಶಿಕ್ಷಣ, ಕ್ರೀಡೆ,ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ, ಭಿನ್ನಸಾಮರ್ಥ್ಯದ ಮಕ್ಕಳ ಶಾಲೆಗಳಿಗೆ ಅರ್ಥಿಕ ಬೆಂಬಲ, ಶೌಚಾಲಯ ನಿರ್ಮಾಣಕ್ಕೆ ನೆರವು, ಶಿಕ್ಷಕರ ನೇಮಕಕ್ಕೆ ನೆರವು, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ ಸಹಿತ ವಿವಿಧ ಸಂಸ್ಥೆಗಳಿಗೆ ನೆರವು ವಿತರಿಸಲಾಯಿತು. ಒಟ್ಟು ಸುಮಾರು 2 ಸಾವಿರ ಕುಟುಂಬ ಗಳಿಗೆ 4 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ವಿತರಿಸಲಾಯಿತು.

ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆಸ್ವಾಗತಿಸಿ, ಅನುಷ್ಕಾ ಗೌರವ್‌ ಶೆಟ್ಟಿ ವಂದಿಸಿದರು. ಅಡ್ಯಾರು ಪುರುಷೋತ್ತಮ
ಭಂಡಾರಿ ಸಾಧಕರ ಪಟ್ಟಿ ವಾಚಿಸಿ ದರು. ನಿತೇಶ್‌ ಶೆಟ್ಟಿ ಎಕ್ಕಾರು ನಿರೂಪಿಸಿ ದರು. ಜಗದೀಶ್‌ ಆಚಾರ್ಯ ಪುತ್ತೂರು ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನೆರವೇರಿತು.

ಗೋಲ್ಡ್‌ಫಿಂಚ್‌ ಸಿಟಿಯಲ್ಲಿ ಟೌನ್‌ಶಿಪ್‌
ಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯ 100 ಎಕರೆ ಜಾಗದಲ್ಲಿ ಮಂಗಳೂರು ನಗರಕ್ಕೆ ಕಿರೀಟಪ್ರಾಯವಾಗುವ ರೀತಿಯಲ್ಲಿ ಟೌನ್‌ಶಿಪ್‌ ಮಾಡಲು ಉದ್ದೇಶಿಸಲಾಗಿದೆ. ಇದು ಮನೆಗಳು, ಶಾಲೆ, ಆಸ್ಪತ್ರೆ, ಅಪಾರ್ಟ್‌ಮೆಂಟ್‌, ಹೊಟೇಲ್‌, ಮಾಲ್‌ ಎಲ್ಲವನ್ನೂ ಒಳಗೊಳ್ಳಲಿದೆ. 60 ಸಾವಿರ ಮಂದಿಗೆ ಉದ್ಯೋಗ ನೀಡುವ “ಐಟಿ ಪಾರ್ಕ್‌’ ನಿರ್ಮಾಣ ಈ ಯೋಜನೆಯ ಮುಖ್ಯ ಭಾಗವಾಗಿದೆ ಎಂದು ಪ್ರಕಾಶ್‌ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.