Padubidri ಕೈಗಾರಿಕ ಪ್ರದೇಶದಲ್ಲಿ ಕಲ್ಲು ಬಂಡೆ ಸ್ಫೋಟ, ಸಾಗಾಟ ಪತ್ತೆ

ಸ್ಫೋಟಕಗಳು, 4 ಟಿಪ್ಪರ್‌, ಹಿಟಾಚಿ ಯಂತ್ರ, ಕಂಪ್ರಸರ್‌ ಟ್ರ್ಯಾಕ್ಟರ್ ಸಹಿತ ಓರ್ವ ವಶಕ್ಕೆ

Team Udayavani, Dec 26, 2023, 12:40 AM IST

Padubidri ಕೈಗಾರಿಕ ಪ್ರದೇಶದಲ್ಲಿ ಕಲ್ಲು ಬಂಡೆ ಸ್ಫೋಟ, ಸಾಗಾಟ ಪತ್ತೆ

ಪಡುಬಿದ್ರಿ: ನಂದಿಕೂರು ಕೈಗಾರಿಕ ಪ್ರದೇಶದಲ್ಲಿರುವ ಕಲ್ಲು ಬಂಡೆಗಳಿಂದ ಕೂಡಿರುವ ಖಾಲಿ ನಿವೇಶನದಲ್ಲಿ ಯಾವುದೇ ರೀತಿಯ ಸ್ಫೋಟಕ ಪರವಾನಿಗೆ ಇಲ್ಲದೇ ಕಲ್ಲು ಬಂಡೆಗಳನ್ನು ಸ್ಫೋಟಿಸಿ ಅವುಗಳನ್ನು ಲಾರಿಗಳ ಮೂಲಕ ತುಂಬಿಸಿ ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಪಡುಬಿದ್ರಿ ಪೊಲೀಸರು ನಾಲ್ಕು ಟಿಪ್ಪರ್‌, ಸ್ಥಳದಲ್ಲಿ ಉಪಯೋಗಿಸುತ್ತಿದ್ದ ಹಿಟಾಚಿ ಯಂತ್ರ, ಕಂಪ್ರಸರ್‌ ಟ್ರ್ಯಾಕ್ಟರ್ ಹಾಗೂ ಬಂಡೆ ಸ್ಫೋಟಿಸಲು ಸಿದ್ಧತೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ.

ಪಡುಬಿದ್ರಿ ಕ್ರೈಂ ಎಎಸ್‌ಐ ಸುದರ್ಶನ್‌ ದೊಡ್ಡಮನಿ ಅವರಿಗೆ ದೊರೆತ‌ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಖಾಲಿ ನಿವೇಶನದಲ್ಲಿ ಕಲ್ಲು ಬಂಡೆಗಳನ್ನು ಒಡೆದು ಹಾಕಿರುವುದು ಮತ್ತು ಒಡೆದಿರುವ ಬಂಡೆಕಲ್ಲುಗಳನ್ನು ಲೋಡ್‌ ಮಾಡಿರುವುದು ಪತ್ತೆ ಯಾಗಿದೆ.

ಬಂಡೆಕಲ್ಲುಗಳಲ್ಲಿ ಕೆಲವು ಕಡೆ ರಂಧ್ರ ಕೊರೆದು ಎಲೆಕ್ಟ್ರಿಕ್‌ ವಯರ್‌ ಸಂಪರ್ಕಿಸಿ ಬಂಡೆಕಲ್ಲುಗಳನ್ನು ಸ್ಫೋಟ ನಡೆಸಲು ಸಿದ್ಧತೆೆ ನಡೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಕಲ್ಲು ಬಂಡೆ ಸ್ಫೋಟಿಸುತ್ತಿದ್ದ ಮಂಜುನಾಥ ನಾಯ್ಕರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲಿದ್ದ ಟಿಪ್ಪರ್‌ ಲಾರಿ ಚಾಲಕರು ಓಡಿ ಹೋಗಿದ್ದಾರೆ. ಈ ಖಾಲಿ ಜಾಗವು ಐವನ್‌ ಎನ್ನುವವರಿಗೆ ಸೇರಿದ್ದಾಗಿದ್ದು ವೆರೋನಿಕಾ ಯಾನೆ ಶರ್ವಿನ್‌ ಅವರು ಸ್ಫೋಟಕ ಬಳಸಿ ಒಡೆಯಲು ಗುತ್ತಿಗೆ ವಹಿಸಿಕೊಂಡಿದ್ದಾಗಿ ಆರೋಪಿ ಮಂಜುನಾಥ ಬಾಯ್ಬಿಟ್ಟಿದ್ದಾನೆ.

ಸಂಬಂಧಪಟ್ಟ ಇಲಾಖೆ ಯಿಂದ ಬಂಡೆಕಲ್ಲನ್ನು ಸ್ಫೋಟಕ ಬಳಸಿ ಒಡೆಯಲು ಮತ್ತು ಒಡೆದ ಬಂಡೆಕಲ್ಲುಗಳನ್ನು ಟಿಪ್ಪರ್‌ಗಳ ಮೂಲಕ ಸಾಗಾಟ ಮಾಡಲು ಯಾವುದೇ ಪರವಾನಿಗೆ ಪಡೆದಿರುವುದಿಲ್ಲ. ಸ್ಥಳದಲ್ಲಿದ್ದ ಸ್ಫೋಟಕ ವಸ್ತುಗಳು, ಕಂಪ್ರಸರ್‌ ಟ್ರ್ಯಾಕ್ಟರ್‌, 4 ಟಿಪ್ಪರ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಜಾಗದ ಮಾಲಕ ಐವನ್‌, ವೆರೊನಿಕಾ ಯಾನೆ ಶರ್ವಿನ್‌, ಮಂಜುನಾಥ ನಾಯ್ಕರ್‌ ಮತ್ತು ಇತರರ ವಿರುದ್ಧ ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.