Finance: ಹಣಕಾಸು ಲಭ್ಯತೆ ನೋಡಿ ಅನುದಾನ ಬಿಡುಗಡೆ: ಸಿಎಂ ಸಿದ್ದರಾಮಯ್ಯ
ನೀರಾವರಿ ನಿಗಮಗಳ ನಿರ್ದೇಶಕರ ಮಂಡಳಿ ಸಭೆ
Team Udayavani, Dec 26, 2023, 11:48 PM IST
ಬೆಂಗಳೂರು: ಮುಂದಿನ ಆರ್ಥಿಕ ವರ್ಷದಲ್ಲಿ ಹಣಕಾಸಿನ ಲಭ್ಯತೆ ನೋಡಿಕೊಂಡು ಹಂತ-ಹಂತವಾಗಿ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ನಾಲ್ಕೂ ಪ್ರಮುಖ ನೀರಾವರಿ ನಿಗಮಗಳ ನಿರ್ದೇಶಕರ ಮಂಡಳಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಮಂಡಳಿ ಮುಂದೆ ಬಂದ ಹಣಕಾಸಿನ ಪ್ರಸ್ತಾವನೆಗಳನ್ನು ಸದ್ಯಕ್ಕೆ ಬಾಕಿ ಇಟ್ಟು, ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲವೇ ಕಾಮಗಾರಿಗಳ ಟೆಂಡರ್ಗಳನ್ನು ಆಹ್ವಾನಿಸಲು ಅನುಮೋದನೆ ನೀಡಿದ್ದಾರೆ.
ಮೇಕೆದಾಟು, ಎತ್ತಿನಹೊಳೆ, ಮಹದಾಯಿ, ಕಳಸಾ-ಬಂಡೂರಿ ನಾಲಾ ಜೋಡಣೆ ಸೇರಿದಂತೆ ಬಹುತೇಕ ನೀರಾವರಿ ಯೋಜನೆಗಳ ಸಾಧ್ಯಾ-ಸಾಧ್ಯತೆ ಕುರಿತು ಚರ್ಚೆ ನಡೆದಿದ್ದು, ಕೇಂದ್ರ ಸರಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕಿರುವ ಯೋಜನೆಗಳಿಗೆ ಸಂಬಂಧಿಸಿದ ವಿಸ್ತೃತ ಸಮಾಲೋಚನೆ ನಡೆದಿದೆ.
ಹಲವು ಸಮಯದಿಂದ ಬಾಕಿಯಾಗಿರುವ ಹಾಗೂ ಯಾವುದೇ ಅಡೆತಡೆಯಿಲ್ಲದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದು, ಹೊಸ ಕಾಮಗಾರಿಗಳನ್ನು ಸದ್ಯಕ್ಕೆ ಮುಂದೂಡಿ ಎಂದು ಸೂಚಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ತೊಡಗಿಸಬೇಕಿರುವುದರಿಂದ ಹೊಸ ಕಾಮಗಾರಿಗಳ ಪ್ರಸ್ತಾವನೆಯನ್ನು ಸದ್ಯಕ್ಕೆ ಮಂಡಿಸದಂತೆ ನಿರ್ದೇಶಕರ ಮಂಡಳಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸದ್ಯಕ್ಕೆ ಬಹುಕಾಲದಿಂದ ಬಾಕಿ ಇದ್ದ ಕಾಮಗಾರಿಗಳ ಟೆಂಡರ್ ಕರೆಯಲು ಅನುಮೋದನೆ ನೀಡುತ್ತೇವೆ ಎಂದರು.
ಈ ಸರಕಾರ ರಚನೆಯಾದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮದ ಮೊದಲ ಸಭೆ ಆಗಿದ್ದರಿಂದ ಚರ್ಚೆಗಷ್ಟೆ ಸಭೆ ಸೀಮಿತವಾಗಿತ್ತು. ಇನ್ನುಳಿದಂತೆ ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮ ಹಾಗೂ ವಿಶ್ವೇಶ್ವರಯ್ಯ ಜಲನಿಗಮಗಳ ಹಳೆಯ ಕಾಮಗಾರಿಗಳ ಬಾಕಿ ಬಿಲ್, ಬಾಕಿ ಕಾಮಗಾರಿಗಳಿಗೆ ಅನುಮೋದನೆ ಮತ್ತು ಕೆಲ ಕಾಮಗಾರಿಗಳ ಟೆಂಡರ್ಗಳ ಅನುಮೊದನೆಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು. ಆದರೆ, ಹಣಕಾಸಿನ ಲಭ್ಯತೆ ನೋಡಿಕೊಂಡು ಹಂತ-ಹಂತವಾಗಿ ಅನುಮೋದನೆಗಳನ್ನು ಕೊಡಲು ಕ್ರಮ ವಹಿಸುವುದಾಗಿ ಸಿಎಂ ಭರವಸೆ ನೀಡಿರುವುದರಿಂದ ಅಧಿಕಾರಿಗಳೂ ಹೊಸ ಪ್ರಸ್ತಾವನೆ ಸಲ್ಲಿಸುವ ಬದಲು, ಆದ್ಯತೆ ಮೇರೆಗೆ ಹಿಂದಿನ ಕಾಮಗಾರಿಗಳ ಬಾಕಿ ಬಿಲ್ ಮತ್ತು ಹಳೆಯ ಕಾಮಗಾರಿಗಳಿಗೆ ಅನುಮೋದನೆ ಪಡೆದುಕೊಳ್ಳುವ ಪ್ರಸ್ತಾವನೆಯನ್ನಷ್ಟೇ ಸಿದ್ಧಪಡಿಸಲು ಮನಸ್ಸು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.