Arrested: ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪಿ ಬಂಧನ


Team Udayavani, Dec 27, 2023, 11:31 AM IST

Arrested: ಪೊಲೀಸರ ಸೋಗಿನಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಉತ್ತರ ಭಾರತ ಮೂಲದವರನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ “ಪಂಚರ’ನನ್ನು ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರ ನಿವಾಸಿ ಗಣೇಶ್‌ ಅಲಿಯಾಸ್‌ ಗಣಿ ಬಂಧಿತ.

ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ದಂಪತಿಯನ್ನು ಹಿಂಬಾಲಿಸಿ ಅವರಿಂದ ನಗದು, ಚಿನ್ನಾಭರಣ ಸುಲಿಗೆ ಮಾಡಿದ್ದ. ಅಲ್ಲದೆ, ಈತನ ವಿಚಾರಣೆ ವೇಳೆ 2007ರಲ್ಲಿ ರಾಬರಿ, 2011ರಲ್ಲಿ ಡಕಾಯಿತಿ, ಸುಲಿಗೆ ಸೇರಿ 7 ಪ್ರಕರಣ ಬೆಳಕಿಗೆ ಬಂದಿವೆ. ಹೀಗಾಗಿ ಈತನಿಂದ ಸುಲಿಗೆ ಅಥವಾ ಬೆದರಿಕೆಗೆ ಒಳಗಾದ ವರು ದೂರು ಕೊಡುವಂತೆ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕ್ಯಾಬ್‌ ಚಾಲಕನಾಗಿದ್ದ ಗಣೇಶ್‌, ಉತ್ತರ ಭಾರತ ಮೂಲದವರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಅಂಗಡಿ ಮುಂದೆ ಅಥವಾ ಇತರೆ ಪ್ರದೇಶದಲ್ಲಿ ಸಿಗರೇಟ್‌ ಸೇದುವವರು ಹಾಗೂ ಹುಡುಗ-ಹುಡುಗಿ ಹೋಗುತ್ತಿದ್ದರೆ, ಅವರನ್ನು ಹಿಂಬಾಲಿಸಿಕೊಂಡು ಹೋಗಿ ಪೊಲೀಸ್‌ ಎಂದು ಹೆದರಿಸುತ್ತಿದ್ದ. ಬಳಿಕ ಈಗ ತಾನೇ ಗಾಂಜಾ ಸೇವನೆ ಮಾಡಿರುವುದನ್ನು ನೋಡಿದ್ದೇನೆ. ನಿಮ್ಮ ಮೇಲೆ ಮತ್ತೂಂದು ತಂಡ ನಿಗಾ ವಹಿಸುತ್ತಿದ್ದ. ಡ್ರಗ್ಸ್‌ ಕೇಸ್‌ ದಾಖಲಿಸದೇ ಇರಲು ಹಣ ಕೊಡಬೇಕೆಂದು ಬೆದರಿಸಿ ನಗದು ಮತ್ತು ಚಿನ್ನಾಭರಣ ಸುಲಿಗೆ ಮಾಡುತ್ತಿದ್ದ. ಆ ನಂತರ ಎಟಿಎಂ ಬೂತ್‌ ಬಳಿಗೆ ಕರೆದೊಯ್ದು ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗುತ್ತಿದ್ದ ಎಂದರು.

ಡಿ.17ರ ರಾತ್ರಿ 9.30ರಲ್ಲಿ ಉತ್ತರ ಭಾರತ ಮೂಲದ ದಂಪತಿ, ಸಿಗರೇಟ್‌ ಸೇದಿಕೊಂಡು ಮನೆಗೆ ನಡೆದು ಹೋಗಿದ್ದರು. ಅವರನ್ನು ಹಿಂಬಾಲಿಸಿಕೊಂಡು ಹೋದ ಗಣೇಶ್‌, ಪೊಲೀಸ್‌ ಎಂದು ಬೆದರಿಸಿ ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಬೇಡಿಕೆ ಹಾಕಿದ್ದಾನೆ. ಅದಕ್ಕೆ ಒಪ್ಪದಿದ್ದಾಗ ದಂಪತಿಯನ್ನು ಸರ್ಜಾಪುರ ರಸ್ತೆಗೆ ಕರೆದೊಯ್ದು ಎಟಿಎಂನಲ್ಲಿ ಹಣ ಡ್ರಾ ಮಾಡಿಸಿಕೊಂಡಿದ್ದ. ಬಳಿಕ ದಂಪತಿಯಿಂದ ಚಿನ್ನಾಭರಣ ಕಸಿದುಕೊಂಡು ಮನೆ ಬಳಿ ಬಿಟ್ಟು ಪರಾರಿಯಾಗಿದ್ದ.

ಕೆಲ ದಿನಗಳ ಬಳಿಕ ಟೆಕಿಯೊಬ್ಬರಿಗೆ ಬೆದರಿಸಿ ಎಟಿಎಂ ಮತ್ತು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಹಣ ಸುಲಿಗೆ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಪಂಚರನಾಗಿದ್ದ ಆರೋಪಿ : ಅಪರಾಧ ಪ್ರಕರಣಗಳು ನಡೆದಾಗ ಸ್ಥಳ ಮಹಜರು ಮತ್ತು ಪಂಚನಾಮೆ ಮಾಡಲು ಪರಿಚಯಸ್ಥರನ್ನು “ಪಂಚರು’ ಪೊಲೀಸರು ಕರೆದೊಯುತ್ತಾರೆ. ಅದೇ ರೀತಿ ಗಣೇಶ್‌ನನ್ನು ಕೆಲ ಪೊಲೀಸರು ಪ್ರಕರಣ ಗಳಲ್ಲಿ ಕರೆದೊಯ್ದು ಸಹಿ ಪಡೆಯುತ್ತಿದ್ದರು. ಹೀಗಾಗಿ ಪ್ರಕರಣಗಳಲ್ಲಿ ಕೋರ್ಟ್‌ ವಿಚಾರಣೆಗೆ ಹಾಜರಾಗುತ್ತೇನೆ ಎಂಬ ಕಾರಣಕ್ಕೆ ಪೊಲೀಸರ ಕಾರ್ಯಾಚರಣೆ ಬಗ್ಗೆ ತಿಳಿದುಕೊಂಡಿದ್ದ. ಅದನ್ನೇ ದುರ್ಬಳಕೆ ಮಾಡಿಕೊಂಡು ಆರೋಪಿ ಬೆದರಿಕೆ ಹಾಕಿ ಸುಲಿಗೆ, ಡಕಾಯಿತಿ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.