Ind vs SA 1st Test:ಎಲ್ಗರ್‌ ಅಜೇಯ ಶತಕ; ದಕ್ಷಿಣ ಆಫ್ರಿಕಾಕ್ಕೆ ಮುನ್ನಡೆ


Team Udayavani, Dec 27, 2023, 10:46 PM IST

1-sadasd

ಸೆಂಚುರಿಯನ್‌: ಸದ್ಯದ ಲ್ಲಿಯೇ ನಿವೃತ್ತಿಯಾಗಲಿರುವ ಡೀನ್‌ ಎಲ್ಗರ್‌ ಅವರ ಅಮೋಘ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಪ್ರವಾಸಿ ಭಾರತ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಗಳಿಸಿ ಕೊಂಡಿದೆ. ಮಂದಬೆಳಕಿನಿಂದ ದ್ವಿತೀಯ ದಿನದಾಟದ ಆಟ ನಿಂತಾಗ ದ. ಆಫ್ರಿಕಾವು 5 ವಿಕೆಟಿಗೆ 256 ರನ್‌ ಗಳಿಸಿತ್ತು. ಆತಿಥೇಯ ತಂಡವು ಒಟ್ಟಾರೆ 11 ರನ್‌ ಮುನ್ನಡೆ ಸಾಧಿಸಿದೆ.

ಇನ್ನೂ ಮೂರು ದಿನಗಳ ಆಟ ಬಾಕಿ ಉಳಿದಿದ್ದು ದಕ್ಷಿಣ ಆಫ್ರಿಕಾವು ದೊಡ್ಡ ಮೊತ್ತ ಪೇರಿಸುವ ಸಾಧ್ಯತೆಯಿದೆ. 140 ರನ್‌ ಗಳಿಸಿರುವ ಎಲ್ಗರ್‌ ಔಟಾಗದೆ ಉಳಿದಿದ್ದು ಮೂರನೇ ದಿನ ಆಟ ಮುಂದುವರಿಸಲಿದ್ದಾರೆ. ಅವರು ಭಾರತೀಯ ದಾಳಿಯನ್ನು ದಿಟ್ಟವಾಗಿ ಎದುರಿಸಿದರೆ ಭಾರತಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಎಲ್ಗರ್‌ ಸಹಿತ ದಕ್ಷಿಣ ಆಫ್ರಿಕಾವನ್ನು ಬೇಗನೇ ಆಲೌಟ್‌ ಮಾಡಿಸಿದರೆ ಭಾರತ ಗೆಲ್ಲುವ ಕಡೆ ಗಮನ ಹರಿಸಬಹುದು.
ಈ ಮೊದಲು ಕೆಎಲ್‌ ರಾಹುಲ್‌ ಅವರ ಆಕರ್ಷಕ ಶತಕದಿಂದಾಗಿ ಭಾರತ ತಂಡವು 245 ರನ್‌ ಗಳಿಸಿ ಆಲೌಟಾಯಿತು.

ಎಲ್ಗರ್‌ ಅಜೇಯ ಶತಕ
ದಕ್ಷಿಣ ಆಫ್ರಿಕಾದ ಆರಂಭ ಉತ್ತಮ ವಾಗಿರಲಿಲ್ಲ. ಆರಂಭಿಕ ಐಡೆನ್‌ ಮಾರ್ಕ್‌ರಮ್‌ ಹೆಚ್ಚು ಹೊತ್ತು ನಿಲ್ಲಲು ವಿಫ‌ಲರಾದರು. ಅವರು 5 ರನ್‌ ಗಳಿಸಿದ ವೇಳೆ ಸಿರಾಜ್‌ಗೆ ವಿಕೆಟ್‌ ಒಪ್ಪಿಸಿದರು. ಆದರೆ ಡೀನ್‌ ಎಲ್ಗರ್‌ ಮತ್ತು ಈ ಹಿಂದಿನ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ನೀಡಿದ್ದ ಟೋನಿ ಡಿ ಝೋರ್ಜಿ ಅವರು ಭಾರತೀಯ ದಾಳಿಯನ್ನು ದಿಟ್ಟವಾಗಿ ಎದುರಿಸಿ ತಂಡವನ್ನು ಸುಸ್ಥಿತಿಗೆ ತಲುಪಿಸಲು ಪ್ರಯತ್ನಿಸಿದರು. ಅವರಿಬ್ಬರು ದ್ವಿತೀಯ ವಿಕೆಟಿಗೆ 93 ರನ್‌ ಪೇರಿಸಿ ಬೇರ್ಪಟ್ಟರು.

ಎಲ್ಗರ್‌ ಮತ್ತು ಈ ಪಂದ್ಯದ ಮೂಲಕ ಟೆಸ್ಟ್‌ಗೆ ಪದಾರ್ಪಣೆಗೈದ ಡೇವಿಡ್‌ ಬೆಡಿಂಗಂ ಅವರು ಭರ್ಜರಿ ಆಟದ ಪ್ರದರ್ಶನ ನೀಡಿದರಲ್ಲದೇ ನಾಲ್ಕನೇ ವಿಕೆಟಿಗೆ 131 ರನ್ನುಗಳ ಜತೆಯಾಟ ನಡೆಸಿ ತಂಡ ಮುನ್ನಡೆ ಸಾಧಿಸುವುದನ್ನು ಖಚಿತಪಡಿಸಿ ದರು. ಮುನ್ನಡೆ ಸಾಧಿಸಲು ಒಂದು ರನ್‌ ಇರುವಾಗ ಈ ಜೋಡಿ ಮುರಿಯಿತು. 56 ರನ್‌ ಗಳಿಸಿದ ಬೆಡಿಂಗಂ ಅವರು ಸಿರಾಜ್‌ ಎಸೆತದಲ್ಲಿ ಕ್ಲೀನ್‌ಬೌಲ್ಡ್‌ ಆದರು.

ಈ ಸರಣಿ ಬಳಿಕ ನಿವೃತ್ತಿಯಾಗ ಲಿರುವ ಎಲ್ಗರ್‌ ಕ್ರೀಸ್‌ನ ಒಂದು ಕಡೆ ಗಟ್ಟಿಯಾಗಿ ನಿಂತು ಅಮೋಘವಾಗಿ ಆಡಿದರು. ಭಾರತೀಯ ದಾಳಿಯನ್ನು ದಂಡಿಸಿದ ಅವರು ಒಟ್ಟಾರೆ 211 ಎಸೆತ ಎದುರಿಸಿ 140 ರನ್‌ ಗಳಿಸಿ ಆಡುತ್ತಿದ್ದಾರೆ. ಈ ಮೂಲಕ ರಾಹುಲ್‌ ಅವರ ಶತಕ ಸಂಭ್ರಮವನ್ನು ಮರೆಯುವಂತೆ ಮಾಡಿದ್ದಾರೆ. ಇದು ಟೆಸ್ಟ್‌ನಲ್ಲಿ ಅವರು ದಾಖಲಿಸಿದ 14ನೇ ಶತಕವಾಗಿದೆ.

ಸಂಕ್ಷಿಪ್ತ ಸ್ಕೋರು: ಭಾರತ 245 (ವಿರಾಟ್‌ ಕೊಹ್ಲಿ 38, ಅಯ್ಯರ್‌ 31, ರಾಹುಲ್‌ 101, ಶಾದೂìಲ್‌ ಠಾಕುರ್‌ 24, ರಬಾಡ 59ಕ್ಕೆ 5, ನಾಂಡ್ರೆ ಬರ್ಗರ್‌ 50ಕ್ಕೆ 3); ದಕ್ಷಿಣ ಆಫ್ರಿಕಾ 5 ವಿಕೆಟಿಗೆ 256 (ಡೀನ್‌ ಎಲ್ಗರ್‌ 140 ಔಟಾಗದೆ, ಟೋನಿ ಝೋರ್ಜಿ 28, ಬೆಡಿಂಗಂ 56, ಬುಮ್ರಾ 48ಕ್ಕೆ 2, ಸಿರಾಜ್‌ 63ಕ್ಕೆ 2).

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.