Manipal ಮಾನಹಾನಿ, ಜೀವ ಬೆದರಿಕೆ: ಆರೋಪ
Team Udayavani, Dec 28, 2023, 12:26 AM IST
ಮಣಿಪಾಲ: ದಲಿತ ಮಹಿಳೆಯೋರ್ವರು ಪರಿಶಿಷ್ಟ ಜಾತಿ /ಪಂಗಡ ನಿಗಮದಿಂದ ಸಾಲ ಪಡೆದು ತನಗೆ ನೀಡಲಿಲ್ಲ ಎಂಬ ದ್ವೇಷದಿಂದ ಜಿಲ್ಲಾ ಕರವೇ ಸದಸ್ಯನೋರ್ವ ಮಹಿಳೆಯ ಬಗ್ಗೆ ಸುಳ್ಳು ಮೆಸೇಜ್ ಹರಿಯಬಿಟ್ಟು ಮಾನ ಹಾನಿ ಮಾಡಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ನೊಂದ ಮಹಿಳೆಯು ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯೆಯಾಗಿದ್ದು, ಆರೋಪಿ ಪ್ರಭಾಕರ ಕೂಡ ಇದರ ಸದಸ್ಯನಾಗಿದ್ದಾನೆ. ಮಹಿಳೆಗೆ ಪರಿಶಿಷ್ಟ ಜಾತಿ ನಿಗಮದಿಂದ ಸಾಲ ಪಡೆದು ನೀಡುವಂತೆ ಒತ್ತಾಯಿಸುತ್ತಿದ್ದನು ಎನ್ನಲಾಗಿದೆ. ಮಹಿಳೆಯೂ ಸಾಲ ನೀಡಲು ನಿರಾಕರಿಸಿದ್ದು, ಈ ದ್ವೇಷದಿಂದ ಆರೋಪಿ ಮಹಿಳೆಯ ನಡತೆಯ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಪ್ರಚಾರ ಮಾಡಿ ಮತ್ತೋರ್ವ ಕರವೇ ಸದಸ್ಯೆಯ ಮೊಬೈಲ್ಗೆ ದಲಿತ ಮಹಿಳೆಯ ಕುರಿತು ಅವಹೇಳನಕಾರಿ ವಾಯ್ಸ ಮೆಸೇಜ್ ಕಳುಹಿಸಿದ್ದಾನೆ. ಆ ಮೆಸೇಜ್ನಲ್ಲಿ ನೊಂದ ಮಹಿಳೆಯ ಮಾನಕ್ಕೆ ಕುಂದು ಬರುವಂತಹ ಅವಾಚ್ಯ ಮಾತುಗಳಿದ್ದು, ಆಕೆಯ ಮನೆಗೆ ಬೆಂಕಿ ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.