Imprisonment: ಅಲ್‌ಖೈದಾ ಇಬ್ಬರು ಸದಸ್ಯರಿಗೆ 7 ವರ್ಷ ಜೈಲು ಶಿಕ್ಷೆ


Team Udayavani, Dec 28, 2023, 1:46 PM IST

Imprisonment: ಅಲ್‌ಖೈದಾ ಇಬ್ಬರು ಸದಸ್ಯರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ನಿಷೇಧಿತ ಅಲ್‌ಖೈದಾ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದ ಆರೋಪದಡಿ ಬಂಧನಕ್ಕೊಳಗಾದ ಇಬ್ಬರು ಶಂಕಿತ ಉಗ್ರರಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದ 7 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

ಅಸ್ಸಾಂ ಮೂಲದ ಅಖ್ತರ್‌ ಹುಸೇನ್‌ ಲಷ್ಕರ್‌ (24) ಮತ್ತು ಪಶ್ಚಿಮ ಬಂಗಾಳ ಮೂಲದ ಅಬ್ದುಲ್‌ ಅಲೀಮ್‌ ಮೊಂಡಲ್‌ ಅಲಿಯಾಸ್‌ ಎಂಡಿ ಜುಬಾನ್‌(23) ಶಿಕ್ಷೆಗೊಳಗಾದ ಶಂಕಿತ ಉಗ್ರರು. ಅಖ್ತರ್‌ ಹುಸೇನ್‌ ಲಷ್ಕರ್‌ಗೆ 41 ಸಾವಿರ ರೂ. ಮತ್ತು ಅಬ್ದುಲ್‌ ಅಲೀಮ್‌ ಮೊಂಡಲ್‌ಗೆ 51 ಸಾವಿರ ರೂ. ದಂಡ ವಿಧಿಸಲಾಗಿದೆ.

ಶಂಕಿತ ಉಗ್ರರು ವಿದೇಶದಲ್ಲಿರುವ ಅಲ್‌ಖೈದಾ ಸಂಘಟನೆ ಸದಸ್ಯರ ಜತೆ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಯನ್‌(ಖಾಸಗಿ ಸಂವಹನ ವ್ಯವಸ್ಥೆ) ಮಾಡಿದ ಸಾಮಾಜಿಕ ಜಾಲತಾಣಗಳ ಮೂಲದ ಸಂಪರ್ಕದಲ್ಲಿದ್ದರು.

ಪ್ರಮುಖವಾಗಿ ಟೆಲಿಗ್ರಾಂ ಆ್ಯಪ್‌ನಲ್ಲಿ ವಿದೇಶಿ ಹ್ಯಾಂಡ್ಲರ್‌ಗಳ ಜತೆ ಸಂವಹನ ನಡೆಸುತ್ತಿದ್ದರು. ಈ ಆ್ಯಪ್‌ ಮೂಲಕ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಯುವಕರನ್ನು ಸಂಪರ್ಕಿಸಿ, ಉಗ್ರ ಸಂಘಟನೆಗೆ ನೇಮಕ ಮಾಡಲು ಯತ್ನಿಸಿದ್ದು, ಉಗ್ರ ಸಂಘಟನೆ ದೇಶದಲ್ಲಿ ನಡೆಸಲು ಉದ್ದೇಶಿಸಿದ ಅಕ್ರಮ ಚಟುವಟಿಕೆಗಳ ಬಗ್ಗೆ ಚರ್ಚಿಸುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಎನ್‌ಐಎ ತಿಳಿಸಿದೆ.

ಆಫ್ಘಾನಿಸ್ತಾನಕ್ಕೆ ತೆರಳಲು ಸಿದ್ಧತೆ: ಅಲ್ಲದೆ, ಅಲ್‌ಖೈದಾ ಸಂಘಟನೆ ಹೆಚ್ಚು ಸಕ್ರಿಯವಾಗಿರುವ ಆಫ್ಘಾನಿಸ್ತಾನದ ಖಾರಾಸನ್‌ ಪ್ರಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರದ ಮೂಲಕ ತೆರಳಲು ಇಬ್ಬರು ಶಂಕಿತರು ಸಿದ್ಧತೆ ನಡೆಸಿದ್ದು, ಅಲ್ಲಿಯೇ ಉಗ್ರ ತರಬೇತಿ ಪಡೆದು ದೇಶಕ್ಕೆ ವಾಪಸ್‌ ಬಂದು ಇಲ್ಲಿ ಸಂಘಟನೆಯನ್ನು ಸಕ್ರಿಯವಾಗಿರಿಸಲು ಯೋಜನೆ ರೂಪಿಸಿದ್ದರು. ಆ ನಂತರ ಕರ್ನಾಟಕ ಸೇರಿ ದೇಶದ ಕೆಲ ರಾಜ್ಯಗಳ ನಿರ್ದಿಷ್ಟ ಸಮುದಾಯದ ಯುವಕರನ್ನು ಸಂಘಟನೆಗೆ ಸೇರಿಸಲು ರೂಪುರೇಷೆ ಸಿದ್ಧಪಡಿಸಿದ್ದರು ಎಂದು ಎನ್‌ಐಎ ತಿಳಿಸಿದೆ. ಶಂಕಿತರ ವಿರುದ್ಧ ಎನ್‌ಐಎ 2022ರ ಆಗಸ್ಟ್‌ನಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿತ್ತು.

2022ರಲ್ಲಿ ನಗರದಲ್ಲಿ ಶಂಕಿತರಿಬ್ಬರ ಬಂಧನ:

ಅಸ್ಸಾಂನ ಕಚಾರ್‌ ಜಿಲ್ಲೆಯ ತೆಲಿತಿಕಾರ್‌ ಗ್ರಾಮದ ಅಖ್ತರ್‌ 2 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು, ತಿಲಕನಗರದ ಬಿಟಿಬಿ ಲೇಔಟ್‌ನ 3ನೇ ಕ್ರಾಸ್‌ನ ಫ‌ನಿ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ಮೂವರು ಸ್ನೇಹಿತರ ಜತೆ ವಾಸವಾಗಿದ್ದ. ಹಗಲು ವೇಳೆ ಹೆಚ್ಚು ಓಡಾಡದೆ, ಸಂಜೆ 4ರ ನಂತರ ಫ‌ುಡ್‌ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ.

ಸ್ಥಳೀಯರೊಂದಿಗೆ ಹೆಚ್ಚು ಮಾತನಾಡದ ಈತ, ಟೀ, ಬೇಕರಿ, ಕೆಲ ಸಾರ್ವಜನಿಕ ಪ್ರದೇಶಗಳಲ್ಲಿ ನಿರ್ದಿಷ್ಟ ಸಮುದಾಯದ ಯುವಕರ ಜತೆ ಹೆಚ್ಚು ಕಾಲ ಕಳೆಯುತ್ತಿದ್ದ. ಅವರೊಂದಿಗೆ “ಜಿಹಾದಿ’ ಬಗ್ಗೆ ಪ್ರತಿಪಾದಿಸುತ್ತಿದ್ದ. ಈ ಮಾಹಿತಿ ಮೇರೆಗೆ ಜುಲೈನಲ್ಲಿ ಸಿಸಿಬಿಯ ಅಂದಿನ ಜಂಟಿ ಪೊಲೀಸ್‌ ಆಯುಕ್ತ ಡಾ.ಶರಣಪ್ಪ ನೇತೃತ್ವದ ತಂಡ ಕೇಂದ್ರ ತನಿಖಾ ಸಂಸ್ಥೆ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಆ ಬಳಿಕ ಈತನ ಮಾಹಿತಿ ಮೇರೆಗೆ ತಮಿಳುನಾಡನಲ್ಲಿ ತಲೆಮರೆಸಿಕೊಂಡಿದ್ದ ಜುಬಾನ್‌ನನ್ನು ಬಂಧಿಸಲಾಗಿತ್ತು. ಈ ಸಂಬಂಧ ತಿಲಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ವಿಚಾರಣೆಯಲ್ಲಿ ಅಖ್ತರ್‌, ಟೆಲಿಗ್ರಾಂನಲ್ಲಿ “ದಿ ಈಗಲ್‌ ಆಫ್ ಕೊರಾಸನ್‌ ಆ್ಯಂಡ್‌ ಹಿಂಡರ್‌-ಈಗಲ್‌’ ಎಂಬ ಗ್ರೂಪ್‌ಗಳನ್ನು ರಚಿಸಿಕೊಂಡಿದ್ದ. ಅದರಲ್ಲಿ ಅಸ್ಸಾಂ ಮತ್ತು ನಗರದ ಕೆಲವರನ್ನು ಸೇರಿಸಿಕೊಂಡು ಉಗ್ರ ಪ್ರೇರಿತ ಪೋಸ್ಟ್‌ಗಳನ್ನು ಮಾಡುತ್ತಾ ಯುವಕರನ್ನು “ಮೂಲಭೂತವಾದಿ’ಗಳಾಗಿ ಪರಿವರ್ತಿಸುತ್ತಿದ್ದ. ಈತನ ಪ್ರಚೋದನಕಾರಿ ಪೋಸ್ಟ್‌ಗಳ ಬಗ್ಗೆ ಆಸಕ್ತಿ ಹೊಂದಿದ್ದ ಯುವಕರಿಗೆ ಕಾಶ್ಮೀರ ಮತ್ತು ಅಫ್ಘಾನಿಸ್ತಾನದ ಖುರಾಸನ್‌ ಪ್ರಾಂತ್ಯಕ್ಕೆ ಕಳುಹಿಸಿ, ಭಯೋತ್ಪಾದನಾ ತರಬೇತಿ ನೀಡಲು ಸಂಚು ರೂಪಿಸಿದ್ದ ಎಂಬುದು ಪತ್ತೆಯಾಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.