Karkala: ಕಿರುಕುಳ- ವ್ಯಕ್ತಿ ಪೊಲೀಸ್ ವಶಕ್ಕೆ
Team Udayavani, Dec 28, 2023, 11:36 PM IST
ಕಾರ್ಕಳ: ನಗರದ ಖಾಸಗಿ ಹಣಕಾಸು ಸಂಸ್ಥೆಯ ಉದ್ಯೋಗಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳಿಯರು ನಗರದ ಬಸ್ ನಿಲ್ದಾಣದಲ್ಲಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಡಿ. 27ರಂದು ಸಂಜೆ ನಡೆದಿದೆ.
ಇರ್ವತ್ತೂರು ನಿವಾಸಿ ಜಗದೀಶ್ ಪೂಜಾರಿ ಯುವತಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿ. ಈತ ಕಳೆದ ಕೆಲವು ದಿನಗಳಿಂದ ಯುವತಿಯನ್ನು ಹಿಂಬಾಲಿಸಿ ದಾರಿ ಮಧ್ಯೆ ಮಾತನಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದ. ಸಂಜೆ ಯುವತಿ ಕಚೇರಿಯಿಂದ ಕೆಲಸ ಮುಗಿಸಿ ನಂದಳಿಕೆ ಭಾಗದ ತನ್ನ ಮನೆಗೆ ತೆರಳಲೆಂದು ಹೊರಟು ಬಸ್ ನಿಲ್ದಾಣದ ಕಡೆಗೆ ತೆರಳುತ್ತಿದ್ದ ವೇಳೆ ವ್ಯಕ್ತಿ ಹಿಂಬಾಲಿಸಿದ್ದಾನೆ. ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸಿದ್ದ ವೇಳೆ ಯುವತಿ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ ಸ್ಥಳೀಯರು ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಈ ಹಿಂದೆ ಕೂಡ ಅನೇಕ ಯುವತಿಯರಿಗೆ ಕಿರುಕುಳವನ್ನು ನೀಡುತ್ತಿದ್ದನೆಂದು ಘಟನೆಯ ಬಳಿಕ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆತನ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.