ನಾಳೆ 7ನೇ ವರ್ಷದ “ಮಂಗಳೂರು ಕಂಬಳ”- 150 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ
Team Udayavani, Dec 28, 2023, 5:58 AM IST
ಮಂಗಳೂರು: ಏಳನೇ ವರ್ಷದ “ಮಂಗಳೂರು ಕಂಬಳ’ ಡಿ. 30ರಂದು ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ.
ಹಿಂದೆ ಕಂಬಳದ ವಿರುದ್ಧ ಪಿತೂರಿ ಉಂಟಾದಾಗ ಕಂಬಳ ಉಳಿಯಬೇಕು ಎಂದು ಹೋರಾಡಿದ್ದೆವು, ಆ ಹೋರಾಟವೇ ಮಂಗಳೂರು ಕಂಬಳಕ್ಕೆ ಸ್ಫೂರ್ತಿ. ಎಲ್ಲರಿಗೂ ಕಂಬಳ ನೋಡುವ ಅವಕಾಶ ಹಾಗೂ ತುಳುನಾಡಿನ ಇತಿಹಾಸ, ಪರಂಪರೆ, ಸಂಪ್ರದಾಯಗಳನ್ನು ಅರಿಯ ಬಹುದು ಎಂಬುದೇ ನಮ್ಮ ಉದ್ದೇಶ ಎಂದು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಬೃಜೇಶ್ ಚೌಟ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ. 30ರಂದು ಬೆಳಗ್ಗೆ 8.30ಕ್ಕೆ ಕಂಬಳದ ಉದ್ಘಾಟ ನೆಯನ್ನು ಚಿತ್ರದುರ್ಗ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ನೆರವೇರಿಸುವರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸುವರು. ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ದೀಪ ಪ್ರಜ್ವಲನೆ ನೆರವೇರಿಸಲಿದ್ದು, ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಶ್ರೀ ಜಿತಕಾಮಾನಂದ ಜೀ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತರಿರುವರು.
ಸಂಜೆಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಎಂಆರ್ಜಿ ಗ್ರೂಪ್ ಚೇರ್ಮನ್ ಕೆ. ಪ್ರಕಾಶ್ ಶೆಟ್ಟಿ ವಹಿಸಲಿದ್ದು, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿಸೂರ್ಯ, ಸಂಸದ ನಳಿನ್ ಕುಮಾರ್ ಕಟೀಲು, ಮುಖಂಡರಾದ ಸಿ.ಟಿ. ರವಿ ಮತ್ತಿತರರು ಪಾಲ್ಗೊಳ್ಳುವರು.
ಆರು ವಿಭಾಗ
ಕನೆಹಲಗೆ, ಅಡ್ಡ ಹಲಗೆ, ಹಗ್ಗ ಹಿರಿಯ, ನೇಗಿಲು ಹಿರಿಯ, ಹಗ್ಗ ಕಿರಿಯ ಮತ್ತು ನೇಗಿಲು ಕಿರಿಯ ಹೀಗೆ 6 ವಿಭಾಗಗಳಲ್ಲಿ ಬಹುಮಾನಗಳಿದ್ದು, ಸುಮಾರು 150 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಚೌಟ ತಿಳಿಸಿದರು. ಕಂಬಳದ ಬಗ್ಗೆ ವಿದ್ಯಾರ್ಥಿಗಳು, ಯುವಜನರಲ್ಲಿ ಅರಿವು ಮೂಡಿಸಲು ವಿವಿಧ ಸ್ಪರ್ಧೆಗಳನ್ನೂ ಆಯೋ ಜಿಸಲಾಗಿದೆ. ಈ ಬಾರಿ ಕೋಣಗಳನ್ನು ಕರೆಗೆ ಇಳಿಸಲು ಟೈಮರ್ ಅಳವಡಿಸಿದ್ದು, 24 ಗಂಟೆಯೊಳಗಾಗಿ ಕಂಬಳ ಮುಗಿಸಲು ಸಿದ್ಧತೆ ಮಾಡಲಾಗಿದೆ ಎಂದು ಸಮಿತಿಯ ಗೌರವ ಸಲಹೆಗಾರ ವಿಜಯ್ ಕುಮಾರ್ ಕಂಗಿನಮನೆ ವಿವರಿಸಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಾಂತ್ಯಗುತ್ತು ಸಚಿನ್ ಶೆಟ್ಟಿ, ಕೋಶಾಧಿಕಾರಿ ತಲಪಾಡಿ ದೊಡ್ಡಮನೆ ಪ್ರೀತಮ್ ರೈ, ಉಪಾಧ್ಯಕ್ಷರಾದ ಸಂಜಯ್ ಪ್ರಭು, ಈಶ್ವರ್ ಪ್ರಸಾದ್ ಶೆಟ್ಟಿ, ಅಜಿತ್ ಬೋಪಯ್ಯ ಉಪಸ್ಥಿತರಿದ್ದರು.
ಕಂಬಳ ಕಾವೇರುವುದು ರಾತ್ರಿ
ಹೊರ ಜಿಲ್ಲೆಗಳ ಕಂಬಳಾಸಕ್ತರು ಕಂಬಳ ಪ್ರಕ್ರಿಯೆಯ ಸೂಕ್ತ ಮಾಹಿತಿ ಇಲ್ಲದ ಕಾರಣ ಸಾಮಾನ್ಯವಾಗಿ ಮಧ್ಯಾಹ್ನದ ವೇಳೆಗೆ ಆಗಮಿಸುತ್ತಾರೆ. ಆದರೆ ಆಗ ವಿಶೇಷ ಏನೂ ಇರದು. ರಾತ್ರಿ ವೇಳೆಗೆ ಕಂಬಳದ ನಿರ್ಣಾಯಕ ಓಟಗಳು ನಡೆಯುವುದರಿಂದ ಅದೇ ಸೂಕ್ತ ಸಮಯ ಎಂದು ಕ್ಯಾ| ಬೃಜೇಶ್ ಚೌಟ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.