![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 29, 2023, 4:46 PM IST
ಉಳ್ಳಾಲ: ದರ್ಗಾ ಸಂದರ್ಶನಗೈಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಶುಕ್ರವಾರ ಸಮುದ್ರಪಾಲಾಗಿದ್ದು, ಓರ್ವನ ಶವ ಪತ್ತೆಯಾಗಿದೆ. ನೀರುಪಾಲಾಗುತ್ತಿದ್ದ ಓರ್ವನನ್ನು ರಕ್ಷಿಸಲಾಗಿದೆ.
ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ ನಡುವೆ ಸಿಲುಕಿದ್ದಾರೆ. ತತ್ ಕ್ಷಣ ಸ್ಥಳದಲ್ಲಿದ್ದ ಮೊಗವೀರ ಜೀವರಕ್ಷಕ ಸದಸ್ಯರು ಸಮುದ್ರಕ್ಕೆ ಧುಮುಕಿ ಸೈಫ್ ಆಲಿ ಮತ್ತು ಸಲ್ಮಾನ್ ಇಬ್ಬರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಬಶೀರ್ ಇನ್ನೂ ಸಮುದ್ರದಲ್ಲಿ ಪತ್ತೆಯಾಗಿಲ್ಲ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.