Dharwad; ಸುಸ್ಥಿರ ತಂತ್ರಜ್ಞಾನ ವೃದ್ಧಿಗೆ ಐಐಟಿ ಒತ್ತು: ಡಾ.ದೇಸಾಯಿ


Team Udayavani, Dec 29, 2023, 5:44 PM IST

Dharwad; ಸುಸ್ಥಿರ ತಂತ್ರಜ್ಞಾನ ವೃದ್ಧಿಗೆ ಐಐಟಿ ಒತ್ತು: ಡಾ.ದೇಸಾಯಿ

ಧಾರವಾಡ: ನೂತನ ತಾಂತ್ರಿಕತೆಗಳ ಜೊತೆ ಜೊತೆಗೆ ಪರಿಸರ ಮತ್ತು ಕೃಷಿಗೆ ಪೂರಕವಾದ ಸುಸ್ಥಿರ ತಂತ್ರಜ್ಞಾನಗಳ ಶೋಧನೆಗೆ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಧಾರವಾಡ ಐಐಟಿ ನಿರ್ದೇಶಕ ಡಾ.ವಿ.ಆರ್.ದೇಸಾಯಿ ಹೇಳಿದರು.

ಇಲ್ಲಿನ ಐಐಟಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಳೆ ವಿದ್ಯಾರ್ಥಿಗಳ ಸಂಘದ ಮೊದಲ ಸ್ನೇಹ-ಮಿಲನ ಕಾರ್ಯಕ್ರಮ ನಿಮಿತ್ತ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಧಾರವಾಡ ಐಐಟಿ ಇನ್ನು ಅಂಬೇಗಾಲು ಇಡುತ್ತಿದೆ. ಇದಕ್ಕಿಗ ಏಳು ವರ್ಷಗಳಾಗಿದ್ದು, ಇಷ್ಟೇ ಅವಧಿಯಲ್ಲಿ ಸುತ್ತಮುತ್ತಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಸ್ಥೆಗಳ ಜೊತೆಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮ ರೂಪಿಸಿದ್ದೇವೆ. ಕೆಲವು ವಿಶ್ವವಿದ್ಯಾಲಯಗಳ ಜೊತೆಗೆ ಕೈ ಜೋಡಿಸಿ ಒಡಂಬಡಿಕೆ ಕೂಡ ಮಾಡಿಕೊಂಡಿದ್ದೇವೆ ಎಂದರು.

ಕೊಳಚೆ ನೀರು ಶುದ್ಧಿಕರಣ, ನೀರಿನ ಮರು ಬಳಕೆ, ವೇದ ಕೃಷಿ, ಹನಿ ನೀರಾವರಿಯಂತ ವಿಚಾರಗಳು ಮೇಲ್ನೋಟಕ್ಕೆ ತಂತ್ರಜ್ಞಾನ ಎನ್ನಿಸುವುದಿಲ್ಲ. ಆದರೆ ಧಾರವಾಡ ಐಐಟಿ ಇಂತಹ ವಿಚಾರಗಳಿಗೆ ಮಹತ್ವ ಕೊಟ್ಟು ಸುಸ್ಥಿರ ತಂತ್ರಜ್ಞಾನವನ್ನು ವೃದ್ಧಿಗೊಳಿಸುತ್ತಿದೆ. ಕೆರೆಗಳ ಸಂರಕ್ಷಣೆ, ಪ್ರತಿಯೊಂದು ಹಳ್ಳಿಯಲ್ಲಿನ, ಪ್ರತಿಯೊಬ್ಬ ವ್ಯಕ್ತಿಯು ಉತ್ಪಾದಿಸುವ ಕೊಳಚೆ ನೀರನ್ನು ಸುಸ್ಥಿರ ತಂತ್ರಜ್ಞಾನದ ಮೂಲಕ ಮರು ಬಳಕೆಗೆ ಯೋಗ್ಯವಾಗಿ ಹೊರ ಬಿಡುವುದು ಹೇಗೆ? ಎಂಬುದನ್ನು ಅತ್ಯಂತ ಗಂಭೀರವಾಗಿ ಸ್ವೀಕರಿಸಿ ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ ಎಂದರು.

ಪರಿಸರ ಸ್ನೇಹಿ ಕ್ಯಾಂಪಸ್: ಐಐಟಿಯ ಹಿರಿಯ ಪ್ರಾಧ್ಯಾಪಕ ಸೂರ್ಯಪ್ರತಾಪ್ ಸಿಂಗ್ ಮಾತನಾಡಿ, ಧಾರವಾಡ ಐಐಟಿ ಕ್ಯಾಂಪಸ್ ದೇಶದಲ್ಲಿಯೇ ಪರಿಸರ ಸ್ನೇಹಿ ಕ್ಯಾಂಪಸ್ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದ್ದು, ಇಡೀ ಕ್ಯಾಂಪಸ್‌ಗೆ ಬೇಕಾಗುವ ಶಕ್ತಿ ಮತ್ತು ನೀರಿನ ಸ್ವಾವಲಂಬನೆ ಪಡೆದುಕೊಂಡಿದೆ. ಅಷ್ಟೇಯಲ್ಲ, ನುರಿತ ಪ್ರಾಧ್ಯಾಪಕ ವೃಂದಕ್ಕೆ ಸ್ಟ್ಯಾನ್‌ಫೋರ್ಡ್ ವಿಶ್ವದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಅತ್ಯಂತ ಪ್ರಭಾವಿ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಐಐಟಿಯ ಡಾ.ಬಸವರಾಜ್ಪ್ಪ ಮತ್ತು ಡಾ.ಅಮರನಾಥ ಹೆಗಡೆ ಸ್ಥಾನ ಪಡೆದುಕೊಂಡಿದ್ದು ಹೆಮ್ಮೆಯ ವಿಚಾರ ಎಂದರು.

ಹುದ್ದೆಗಳ ಕೊರತೆಯಿದೆ: ಇನ್ನು ಧಾರವಾಡ ಐಐಟಿಯಲ್ಲಿ ಹುದ್ದೆಗಳ ಕೊರತೆ ಇರುವ ಬಗ್ಗೆ ಕೂಡ ಡಾ.ದೇಸಾಯಿ ಸರ್ಕಾರದ ಗಮನ ಸೆಳೆದಿದ್ದಾರೆ. ಹತ್ತು ಜನ ವಿದ್ಯಾರ್ಥಿಗಳಿಗೆ ಒಬ್ಬ ಪ್ರಾಧ್ಯಾಪಕ ಇರಬೇಕು. 11 ಜನ ಬೋಧಕೇತರ ಸಿಬ್ಬಂದಿ ಇರಬೇಕು. ಇದು ಕೇಂದ್ರ ಸರ್ಕಾರವೇ ನಿಗದಿ ಪಡೆಸಿದ ನಿಯಮ. ಆದರೆ ಸದ್ಯಕ್ಕೆ ಐಐಟಿ ಧಾರವಾಡದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಕೊರತೆ ಇದೆ. ಸರ್ಕಾರ ಇದನ್ನು ಸರಿದೂಗಿಸುವ ವಿಶ್ವಾಸ ನನಗೆ ಇದೆ ಎಂದರು.

ಧಾರವಾಡ ಐಐಟಿಯ ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆಯಾಗಿ ಮೊದಲ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ಉತ್ತಮ ಹುದ್ದೆಯಲ್ಲಿದ್ದು ಅವರೆಲ್ಲರನ್ನು ಒಟ್ಟಾಗಿ ಸೇರಿಸಿ, ಅವರಿಂದ ಐಐಟಿ ಧಾರವಾಡಕ್ಕೆ ಆಗಬೇಕಿರುವ ಉತ್ತಮ ಕೆಲಸಗಳ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ಡಾ.ದೇಸಾಯಿ ಹೇಳಿದರು.

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

Hubli: Siddaramaiah must resign if respect remains: Basavaraja Bommai

Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.