Haveri: ಬಿಸಿಲ ಝಳಕ್ಕೆ ಬಾಡಿದ ಪೈರು: ರೈತ ಕಂಗಾಲು


Team Udayavani, Dec 29, 2023, 5:42 PM IST

Haveri: ಬಿಸಿಲ ಝಳಕ್ಕೆ ಬಾಡಿದ ಪೈರು: ರೈತ ಕಂಗಾಲು

ಹಾವೇರಿ: ಮುಂಗಾರು ಮಳೆ ವೈಫಲ್ಯದಿಂದ ಕಂಗೆಟ್ಟಿರುವ ಅನ್ನದಾತರಿಗೆ ಹಿಂಗಾರು ಮಳೆಯೂ ಕೈಕೊಟ್ಟಿದೆ. ಹಿಂಗಾರು ಮಳೆಯ ಹಿನ್ನಡೆಯಿಂದಾಗಿ ಬಿತ್ತನೆಗೆ ಹೊಡೆತ ಬಿದ್ದಿದೆ. ಈವರೆಗೆ ಕೇವಲ ಶೇ.58ರಷ್ಟು ಬಿತ್ತನೆಯಾಗಿದ್ದು, ಮಳೆ ಮಾಯವಾದ ಪರಿಣಾಮ ಬೆಳೆಯುತ್ತಿರುವ ಪೈರು ಬಿಸಿಲಿಗೆ ಬಾಡುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ನವೆಂಬರ್‌ ಮೊದಲ ವಾರ ಆಗಾಗ ಸುರಿದ ಮಳೆಗೆ ಕೆಲ ರೈತರು ತಕ್ಕಮಟ್ಟಿಗೆ ಜೋಳ, ಮೆಕ್ಕೆಜೋಳ, ಹುರುಳಿ, ಅಲಸಂದಿ ಸೇರಿದಂತೆ ಇತರೆ ಬೀಜಗಳನ್ನು ಬಿತ್ತನೆ ಮಾಡಿದ್ದರು. ಮೊಳಕೆಯೊಡೆದು ಬೆಳೆಯುತ್ತಿದ್ದ ಪೈರಿಗೆ ಮಳೆ ಅವಶ್ಯಕವಾಗಿದೆ. ಈಗ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ಬಾಡುತ್ತಿದ್ದು, ಹಿಂಗಾರಿನಲ್ಲಿ ಬಿತ್ತನೆ ಮಾಡಿರುವ ಬೀಜಗಳು ಮಣ್ಣು ಪಾಲಾಗುವ ಆತಂಕ ಎದುರಾಗಿದೆ.

ಜಿಲ್ಲೆಯಲ್ಲಿ ಶೇ.58 ಬಿತ್ತನೆ: ಹಿಂಗಾರು ಹಂಗಾಮಿನಲ್ಲಿ ಒಟ್ಟಾರೆ 1.11 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ 64,809 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ ಕೇವಲ 26 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ. ಇದರ ಜೊತೆಗೆ 16 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದೆ. 2691 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ, 1844 ಹೆಕ್ಟೇರ್‌ ಪ್ರದೇಶದಲ್ಲಿ ಅಲಸಂದಿ, 368 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು, 371 ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಲಾಗಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಮಳೆ ಬಾರದೆ ಕೈಕೊಟ್ಟಿದ್ದರಿಂದ ಬಿತ್ತನೆ ಪ್ರಮಾಣ ಕುಂಟಿತಗೊಂಡಿದೆ. ಅಲ್ಲದೇ, ಬಿತ್ತನೆ ಮಾಡಿದ ಬಹುತೇಕ ಬೆಳೆಗಳು ಸಹ ನಾಶಗೊಳ್ಳುತ್ತಿವೆ.

ಮುಂಗಾರು ಹಂಗಾಮಿನಲ್ಲಿ ಎದುರಾಗಿದ್ದ ಸ್ಥಿತಿಯೇ ಹಿಂಗಾರು ಹಂಗಾಮಿನಲ್ಲೂ ಎದುರಾಗಿದ್ದು ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದನ್ನು ನೋಡಿ ರೈತರು ಕಣ್ಣೀರಿಡುತ್ತಿದ್ದಾರೆ.

ಬಿಸಿಲಿಗೆ ಬಾಡುತ್ತಿದೆ ಬೆಳೆ:ನವೆಂಬರ್‌ನಲ್ಲಿ ಸುರಿದ ಮಳೆಗೆ ಬಿತ್ತನೆ ಮಾಡಿದ್ದ ಜೋಳ, ಹುರುಳಿ, ಕಡಲೆ ಸೇರಿದಂತೆ ಇತರೆ ಬೀಜಗಳು ಮೊಳಕೆಯೊಡೆದು ಗೇಣೇತ್ತರಕ್ಕೆ ಬೆಳೆದು ನಿಂತಿವೆ.

ಮಳೆ ಬಾರದ್ದರಿಂದ ತೇವಾಂಶ ಕೊರತೆ ಹಾಗೂ ನಿರೀಕ್ಷಿತ ಪ್ರಮಾಣದಲ್ಲಿ ಚಳಿ ಬೀಳದ ಕಾರಣ ಬಿಸಿಲಿಗೆ ಬಾಡುತ್ತಿವೆ. ಇದರಿಂದ ಇಳುವರಿ ಬರುವುದಿರಲಿ ಜಾನುವಾರುಗಳಿಗೆ ಮೇವು ಸಹ  ಆಗುತ್ತಿಲ್ಲ ಎಂಬ ನೋವು ಅನ್ನದಾತರದ್ದಾಗಿದೆ. ಮಳೆ ಸಮರ್ಪಕವಾಗಿದ್ದರೆ ಜೋಳದ ಮೇವು, ಶೇಂಗಾ, ಕಡಲೆ, ಹುರುಳಿ, ಗೋಧಿ ಹೊಟ್ಟನ್ನು ಸಂಗ್ರಹಿಸಿ ರೈತರು ವರ್ಷಪೂರ್ತಿ ದನಕರುಗಳಿಗೆ ಆಹಾರದ ಕೊರತೆ ಬರದಂತೆ ನೋಡಿಕೊಳ್ಳುತ್ತಿದ್ದರು. ಆದರೆ, ಈ ವರ್ಷ ಮೇವಿನ ಕೊರತೆ ಎದುರಾಗಲಿದೆ ಎನ್ನುತ್ತಾರೆ ರೈತ ಕಿರಣಕುಮಾರ ಗಡಿಗೋಳ.

ನೀರಾವರಿ ಪ್ರದೇಶದಲ್ಲೂ ಬಿತ್ತನೆ ಕುಂಟಿತ: ನೀರಾವರಿ ಸೌಲಭ್ಯ ಹೊಂದಿರುವ ರೈತರು ಹಿಂಗಾರಿನಲ್ಲಿ ಅಷ್ಟಾಗಿ ಬಿತ್ತನೆ ಮಾಡಲು ಮನಸ್ಸು ಮಾಡುತ್ತಿಲ್ಲ. ಒಂದೆಡೆ ವಿದ್ಯುತ್‌ ಕಣ್ಣಾಮುಚ್ಚಾಲೆ ಶುರುವಾಗಿದ್ದರೆ, ಮತ್ತೂಂದೆಡೆ ಕೊಳವೆಬಾವಿಗಳಲ್ಲಿ ಈಗಾಗಲೇ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಕೆಲ ಬೋರ್‌ವೆಲ್‌ಗ‌ಳು ಈಗಾಗಲೇ ಬತ್ತಿ ಹೋಗಿದ್ದರೆ, ಕೆಲ ಬೋರ್‌ವೆಲ್‌ಗ‌ಳಲ್ಲಿ ಸಣ್ಣಗೆ ನೀರು ಬರುತ್ತಿವೆ. ಹೀಗಾಗಿ, ನೀರಾವರಿ ಸೌಲಭ್ಯ ಇರುವ ರೈತರು ಬಿತ್ತನೆಗೆ ಹಿಂದೇಟು ಹಾಕುವಂತಾಗಿದೆ.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುಮಾರು 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮಳೆ
ಕೊರತೆಯಿಂದಾಗಿ ಈವರೆಗೆ ಶೇ.58ರಷ್ಟು ಬಿತ್ತನೆಯಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ರೈತರು ಬಿತ್ತನೆ ಕಾರ್ಯ
ನಡೆಸುತ್ತಿದ್ದು, ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆಗೆ ಅಗತ್ಯ ಬೀಜ ದಾಸ್ತಾನಿದೆ.
*ಮಂಜುನಾಥ ಅಂತರವಳ್ಳಿ
ಜಂಟಿ ಕೃಷಿ ನಿರ್ದೇಶಕರು, ಹಾವೇರಿ

ಟಾಪ್ ನ್ಯೂಸ್

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ

haveri

ಬ್ಯಾಡಗಿ: ಆರೋಗ್ಯವಂತ ತಾಯಿ-ಮಕ್ಕಳು ದೇಶದ ಆಸ್ತಿ: ಶಿವಣ್ಣನವರ

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

ಆರು ತಿಂಗಳಲ್ಲಿ ಏಳು ಹರಕೆ ಕೋಣಗಳ ಸಾವು: ಭಕ್ತರ ನಂಬಿಕೆ ಚ್ಯುತಿ ತರಬೇಡಿ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

1-alvas

Yoga Competition; ಆಳ್ವಾಸ್‌ ಕಾಲೇಜಿನ ಐವರು ರಾಷ್ಟ್ರಮಟ್ಟಕ್ಕೆ

1-koraga

Mangaluru; ಅಪ್ಪಿ ಕೊರಗ ಅವರಿಗೆ ‘ಸಂಜೀವಿನಿ ಪ್ರಶಸ್ತಿ’

1-shiv

Koragajja; ಕುತ್ತಾರು ಕೊರಗಜ್ಜನ ಕಟ್ಟೆಗೆ ನಟ ಶಿವರಾಜ್‌ ಕುಮಾರ್‌ ಭೇಟಿ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.