New Year: ಹೊಸ ವರ್ಷದ ಸಂಭ್ರಮಕ್ಕೆ ಖಾಕಿ ಕಣ್ಗಾವಲು!


Team Udayavani, Dec 30, 2023, 2:39 PM IST

New Year: ಹೊಸ ವರ್ಷದ ಸಂಭ್ರಮಕ್ಕೆ ಖಾಕಿ ಕಣ್ಗಾವಲು!

ಚಿಕ್ಕಬಳ್ಳಾಪುರ: ಹೊಸ ವರ್ಷದ ಸಂಭ್ರಮಾಚರಣೆಗೆ ತುದಿಗಾಲಲ್ಲಿರುವ ಜನತೆ ಮೋಜು, ಮಸ್ತಿಗಾಗಿ ಹಾತೊರೆಯುತ್ತಿರುವುದು ಒಂದಡೆಯಾದರೆ ಜಿಲ್ಲಾದ್ಯಂತ ಹೊಸ ವರ್ಷದಂದು ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯ ಪೊಲೀಸರು ಭರ್ಜರಿ ತಯಾರಿ ನಡೆಸಿದ್ದಾರೆ.ಹೇಳಿ ಕೇಳಿ ಜಿಲ್ಲೆಗೆ ಇತ್ತೀಚಿನ ದಿನಗಳಲ್ಲಿ ನಿತ್ಯ ಸಹಸ್ರಾರು ಪ್ರವಾಸಿಗರ ಪ್ರವಾಸಕ್ಕೆ ಸಾಕ್ಷಿಯಾ ಗುತ್ತಿರುವ ಹಿನ್ನಲೆ ¿ಲ್ಲಿ ನೂತನ ವರ್ಷ 2024 ರ ಸಂಭ್ರಮಾಚರಣೆಗೆ ಜನ ಸಿದ್ದತೆ ನಡೆಸಿಕೊಳ್ಳುತ್ತಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸೇರಿದಂತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸರು ಎಚ್ಚೆತ್ತಿಕೊಂಡು ಹಲವು ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದಾರೆ.

ವಿಶೇಷ ಮಾರ್ಗಸೂಚಿ:   ಹೊಸ ವರ್ಷದಂದು ಮೊದಲ ದಿನ ಸೋಮವಾರ ಈಶಾ ಕೇಂದ್ರ, ನಂದಿ ಬೆಟ್ಟ, ನಂದಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ವಾಹನಗಳ ದಟ್ಟಣೆ ನಿಯಂತ್ರಣ, ಮಾದಕ ವಸ್ತುಗಳ ಸಾಗಾಟ ತಡೆಯುವುದರ ಜೊತೆಗೆ ಪ್ರವಾಸಿಗರಿಗೆ ಸೂಕ್ತ ಭದ್ರತೆ ಒದಗಿಸುವ ದಿಕ್ಕಿನಲ್ಲಿ, ಜಿಲ್ಲೆಯ ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ಉಪ ವಿಭಾಗದ ಪೊಲೀಸರು ವಾರದಿಂದಲೇ ಕಾನೂನು ಸುವ್ಯವಸ್ಥೆ ಕಾಪಾಡಲು ಮಾರ್ಗಸೂಚಿ ರೂಪಿಸಿ ಅವುಗಳ ಅನುಷ್ಠಾನಕ್ಕೆ ಯೋಜನೆ ರೂಪಿಸಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಠಿಯಿಂದ ಹೆಚ್ಚಿನ ಪೊಲೀಸ್‌ ಭದ್ರತೆಯನ್ನು ನಿಯೋಜಿಸಲು ನಿರ್ಧರಿಸಿದ್ದಾರೆ. ವಿಶೇಷವಾಗಿ ರಾಜ್ಯದಲ್ಲಿ ಮತ್ತೆ ಕೋ ವಿಡ್‌ ಆತಂಕ ಸೃಷ್ಟಿ ಆಗಿರುವುದರಿಂದ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳಂತೆ ಜಿಲ್ಲಾಡಳಿತ ಕೂಡ ಹಲವು ದಿಟ್ಟ ಕ್ರಮಗಳಿಗೆ ಮುಂದಾಗಿದ್ದು, ಜನವರಿ 1 ರಂದು ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯಗೊಳಿಸಲು ಮುಂದಾಗಿದೆ.

ಭದ್ರತೆ ಸಿದ್ಧತೆಗಳ ಬಗ್ಗೆ ಎಸ್ಪಿ ಹೇಳಿದ್ದೇನು?:

ಈಗಾಗಲೇ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಡಿ.31 ರಂದು ಸಂಜೆ 6 ಗಂಟೆಯಿಂದ ಜ.1 ಬೆಳಗ್ಗೆ 6 ಗಂಟೆವರಗೂ ಗಿರಿಧಾಮಕ್ಕೆ ಬರುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಜೊತೆಗೆ ನಂದಿಬೆಟ್ಟದಲ್ಲಿನ ವಸತಿ ಗೃಹಗಳ ಕಾಯ್ದರಿಸುವಿಕೆಯನ್ನು ಕೂಡ ರದ್ದುಗೊಳಿಸಲಾಗಿದೆ. ನಂದಿಬೆಟ್ಟ ಸುತ್ತಮುತ್ತ ಇರುವ ಹೋಂಮ್‌ ಸ್ಟೇ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿ ಯಾವುದೇ ರೀತಿ ಅಕ್ರಮ, ಅನೈತಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಪೊಲೀಸ್‌ ಇಲಾಖೆ ಕೂಡ ಅಯಕಟ್ಟಿನ ಸ್ಥಳಗಳಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಜೊತೆಗೆ ಹೊಸ ವರ್ಷ ರಾತ್ರಿ ವಿಶೇಷ ಗಸ್ತು ರೂಪಿಸಲಾಗಿದೆ. ಅನುಮಾನಸ್ಪದವಾಗಿ ಸಂಚರಿಸುವ ವಾಹನಗಳ ತಪಾಸಣೆ ನಡೆಸುವಂತೆ ಎಲ್ಲಾ ಠಾಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ್‌ ಉದಯವಾಣಿಗೆ ತಿಳಿಸಿದರು.

ಅವಲಬೆಟ್ಟ, ಸ್ಕಂದಗಿರಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ ಇಲ್ಲ :

ಪ್ರವಾಸಿಗರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಆದರೆ ಜಿಲ್ಲೆಯ ಪ್ರವಾಸಿ ತಾಣಗಳಾದ ಸೆಲ್ಫಿ ಸ್ಪಾಟ್‌ ಅವಲಬೆಟ್ಟ ಹಾಗೂ ಚಾರಣರಿಗೆ ಪ್ರಿಯವಾದ ಜಿಲ್ಲೆಯ ಚಿಕ್ಕಬಳ್ಳಾಪುರದ ಕಳವಾರ ಸಮೀಪ ಇರುವ ಸ್ಕಂದಗಿರಿಗೆ ಪ್ರವಾಸಿಗರಿಗೆ ಮುಕ್ತ ಪ್ರವೇಶ ಕಲ್ಪಿಸಿದೆ.

ನಂದಿಬೆಟ್ಟದ ತಪ್ಪಲಿನಲ್ಲಿ ರೆಸಾರ್ಟ್‌, ಹೋಮ್‌ ಸ್ಟೇಗಳಲ್ಲಿ ಮೋಜು, ಮಸ್ತಿ ಪಾರ್ಟಿ!:

ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶನಕ್ಕೆ ನಿರ್ಬಂಧ ಹೇರಿರುವ ಜಿಲ್ಲಾಡಳಿತ, ನಂದಿಬೆಟ್ಟದ ತಪ್ಪಲ್ಲಿನಲ್ಲಿ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ನಡೆಯುವ ಹೊಸ ವರ್ಷದ ಮೋಜು, ಮಸ್ತಿ ಪಾರ್ಟಿಗೆ ಕಡಿವಾಣ ಹಾಕುವುದೇ ಎಂಬುದನ್ನು ಕಾದು ನೋಡಬೇಕಿದೆ. ಐಟಿ, ಬಿಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಚಿಕ್ಕಬಳ್ಳಾಪುರ ನಂದಿ, ದೊಡ್ಡಮರಳಿ, ಕಳವಾರ, ಕೊತ್ತನೂರು, ಚದಲಪುರ ಅಸುಪಾಸಿನಲ್ಲಿ ಸಾಕಷ್ಟು ರೆಸಾರ್ಟ್‌ಗಳ ಮಾದರಿಯಲ್ಲಿ ಹೋಂ ಸ್ಟೇಗಳು ತಲೆ ಎತ್ತಿದ್ದು, ಗ್ರಾಹಕರಿಗೆ ಎಗ್ಗಿಲ್ಲದೇ ಮಾದಕ ವಸ್ತುಗಳ ಪೂರೈಕೆ ನಡೆಸುತ್ತಿದೆ. ಇತ್ತೀಚೆಗೆ ನಂದಿ ಠಾಣೆ ಪೊಲೀಸರು ಕೂಡ ನಂದಿ ಬಳಿ ಇರುವ ಹೋಂ ಸ್ಟೇ ಮೇಲೆ ದಾಳಿ ನಡೆಸಿ ಮಾದಕ ಹುಕ್ಕಾ ಸೇವನೆಗೆ ಅವಕಾಶ ನೀಡಿದ್ದ ಆರೋಪದ ಮೇರೆಗೆ ದೂರು ದಾಖಲಿಸಿಕೊಂಡಿದ್ದರು. ಆದರೆ ಹೊಸ ವರ್ಷದ ಸಂಭ್ರಮದಲ್ಲಿ ಯುವ ಜನರನ್ನು ಹಾದಿ ತಪ್ಪಿಸಲು ಸಾಕಷ್ಟು ಹೋಂ ಸ್ಟೇಗಳು ತಯಾರಿ ನಡೆಸಿಕೊಂಡಿವೆ ಎನ್ನಲಾಗುತ್ತಿವೆ.

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.