Udupi; ವಸ್ತ್ರ ಮಳಿಗೆಯಲ್ಲಿ ಮಿಸ್ ಫೈರ್: ಲೈಸನ್ಸ್ ಹೊಂದಿದ್ದ ಪಿಸ್ತೂಲು
ಪ್ರಕರಣ ದಾಖಲಿಸಿ ವಾರಿಸುದಾರನ ಮಾಹಿತಿ ಪತ್ತೆ ಹಚ್ಚಿದ ಪೊಲೀಸರು
Team Udayavani, Dec 30, 2023, 7:00 PM IST
ಉಡುಪಿ: ಉಡುಪಿಯ ವಸ್ತ್ರ ಮಳಿಗೆಯ ಮೊದಲನೇ ಮಹಡಿಯ ಪುರುಷರ ಶೌಚಾಲಯವನ್ನು ಸಿಬಂದಿಗಳು ಸ್ವಚ್ಛಗೊಳಿಸುತ್ತಿದ್ದಾಗ ಪತ್ತೆಯಾದ ಪಿಸ್ತೂಲಿನ ವಾರಿಸುದಾರನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಅದು ಪರವಾನಿಗೆ ಹೊಂದಿದ್ದು ಎನ್ನುವುದನ್ನು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಡಿ. 30 ರಂದು ಮಧ್ಯಾಹ್ನ 12 ಗಂಟೆ ವೇಳೆ ಶೌಚಾಲಯ ಲ್ಲಿ ಇದ್ದ ಪಿಸ್ತೂಲನ್ನು ಇನ್ನೊಬ್ಬ ಸಿಬಂದಿ ಪರೀಕ್ಷಿಸಲು ಪಡೆದುಕೊಂಡು ಕಾಕ್ ಮಾಡಿದ್ದು, ಆಕಸ್ಮಿಕವಾಗಿ ಟ್ರಿಗರ್ ಕೈ ತಾಗಿದಾಗ ಗುಂಡು ಸಿಡಿದು ಇನ್ನೊಬ್ಬ ಸಿಬ್ಬಂದಿಯ ಎಡಕೈ ತೋಳಿಗೆ ಗಾಯವಾಗಿತ್ತು.
ಪಿಸ್ತೂಲನ್ನು ಯಾರೋ ಅಪರಿಚಿತ ವ್ಯಕ್ತಿಯು ಶೌಚಾಲಯದಲ್ಲಿ ಬಿಟ್ಟು ಹೋಗಿದ್ದು, ಸಿಬಂದಿಗಳು ಸೂಕ್ತ ಮುಂಜಾಗ್ರತೆ ವಹಿಸದೇ ಕಾಕ್ ಮಾಡಿದ ಪರಿಣಾಮ ಫೈರ್ ಆಗಿರುತ್ತದೆ. ಪಿಸ್ತೂಲ್ ಬಿಟ್ಟು ಹೋದ ಅಪರಿಚಿತ ವ್ಯಕ್ತಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತನಿಖೆಯ ಪ್ರಥಮ ಹಂತದಲ್ಲಿ ಪಿಸ್ತೂಲ್ ವಾರಿಸುದಾರರ ಬಗ್ಗೆ ಪತ್ತೆ ಹಚ್ಚಲಾಗಿದ್ದು,ಅದು ಪರವಾನಿಗೆ ಹೊಂದಿದ ಪಿಸ್ತೂಲ್ ಆಗಿದ್ದು, ವಸ್ತ್ರ ಮಳಿಗೆಯ ಶೌಚಾಲಯಕ್ಕೆ ತೆರಳಿದಾಗ ಮರೆತು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದು, ತನಿಖೆ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Pushpa 2: ಅಲ್ಲು ಅರ್ಜುನ್ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್?- ಫೋಟೋ ವೈರಲ್
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್ ಸಪ್ತಾಹ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.