![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 31, 2023, 12:52 AM IST
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ತಮ್ಮ ಸಂಪುಟವನ್ನು ವಿಸ್ತರಿಸಿದ್ದಾರೆ. ಕೇಂದ್ರ ಮಾಜಿ ಸಚಿವ ರಾಜ್ಯವರ್ಧನ್ ರಾಥೋಡ್, ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಸಹಿ ತ 22 ಶಾಸಕರು ಶನಿವಾರ ನೂತನ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ವಿಶೇಷ ವೆಂದರೆ ಈ ಪೈಕಿ 17 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ.
ಮುಖ್ಯವಾಗಿ ಸಂಪುಟದಲ್ಲಿ ಜಾತಿ ಸಮೀಕರಣ ಮತ್ತು ಪ್ರದೇಶಿಕ ಸಮಾನತೆಗೆ ಒತ್ತು ನೀಡಲಾಗಿದೆ. ನೂತನ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಇಬ್ಬರು ನಾಯಕರು, ನಾಲ್ವರು ಜಾಟರು, ಮೂವರು ರಜಪುತ್ ಸಮುದಾಯದವರು, ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೇರಿದ ಮೂವರು ಹಾಗೂ ಉಳಿದ 10 ಮಂದಿ ಇತರೆ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.
ರಾಥೋಡ್, ಕಿರೋಡಿ ಸಹಿತ 12 ಮಂದಿ ಸಂಪುಟ ದರ್ಜೆ ಸಚಿವರಾಗಿ, ಉಳಿದಂತೆ 10 ಮಂದಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಾಲ್ರಾಜ್ ಮಿಶ್ರಾ ಅವರು 22 ಮಂದಿ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಪ್ರಸ್ತುತ ಸಿಎಂ ಭಜನ್ ಲಾಲ್, ಇಬ್ಬರು ಡಿಸಿಎಂಗಳು ಸೇರಿದಂತೆ ಒಟ್ಟು 25 ಸಚಿವರು ಸಂಪುಟದಲ್ಲಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.