![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 31, 2023, 1:01 AM IST
ಬೆಂಗಳೂರು: ರೈತರಿಗೆ 2 ಸಾವಿರ ರೂ. ಬರ ಪರಿಹಾರ ಹಾಗೂ ಬಡ್ಡಿ ಮನ್ನಾ ಘೋಷಣೆಯಾಗಿಯೇ ಉಳಿದಿವೆ ಎಂದು ವಿಪಕ್ಷಗಳು ಗಂಭೀರ ಆರೋಪ ಮಾಡಿವೆ.
ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸುಮ್ಮನಾಗಿರುವ ಸರಕಾರವು ಕೇಂದ್ರದಿಂದ 18 ಸಾವಿರ ಕೋಟಿ ರೂ. ನೆರವು ಕೋರಿ ಕೈಕಟ್ಟಿ ಕುಳಿತಿದೆ ಎಂದು ಟೀಕಿಸಿವೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿ ಗಾಲದ ಅಧಿವೇಶನ ಆರಂಭವಾಗುವ ಮುನ್ನ ಬರ ಪರಿಹಾರ ಘೋಷಿಸಿದ್ದ ಸರಕಾರವು ವಿಪಕ್ಷ ಗಳ ವಾಗ್ಧಾಳಿಯಿಂದ ತಪ್ಪಿಸಿಕೊಳ್ಳಲೆಂದೇ ಈ ರಕ್ಷಣಾತ್ಮಕ ತಂತ್ರ ಹೂಡಿತ್ತು ಎಂದು ಆಪಾದಿಸಿವೆ.
ಈ ಕುರಿತು ಸರಕಾರದ ವಿರುದ್ಧ ಹರಿಹಾಯ್ದಿರುವ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರಕಾರದಿಂದ ಮೊದಲ ಕಂತಾಗಿ 223 ಬರಪೀಡಿತ ತಾಲೂಕುಗಳ ರೈತರಿಗೆ ತಲಾ 2 ಸಾವಿರ ರೂ. ಬರ ಪರಿಹಾರ ಕೊಡುವುದಾಗಿ ಘೋಷಿಸಲಾಗಿತ್ತು. ಆದರೆ ಇದುವರೆಗೆ ಯಾವೊಬ್ಬ ರೈತನಿಗೂ ಇದು ಸಿಕ್ಕಿಲ್ಲ ಎಂದು ಜರೆದಿದ್ದಾರೆ. 2 ಸಾವಿರ ರೂ. ಪರಿಹಾರ ಕೊಡುವುದಾಗಿ ಘೋಷಿಸಿದವರು ಈಗ 11 ಸಾವಿರ ಕೋಟಿ ರೂ.ಗಳನ್ನು ಅಲ್ಪಸಂಖ್ಯಾಕರ ಬಡಾವಣೆಗೆ ಖರ್ಚು ಮಾಡುತ್ತೇವೆ ಎನ್ನುತ್ತಿದ್ದಾರೆ ಎಂದು ಆರ್. ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಬಡ್ಡಿಮನ್ನಾ ಘೋಷಿಸಿದ್ದರೂ ಈ ಬಗ್ಗೆ ಆದೇಶ ಹೊರಡಿಸದೆ ರೈತರಿಂದ ಸಾಲ ವಸೂಲಾತಿಯಾಗಲು ಬಿಟ್ಟಿದೆ ಎಂದು ಬಿಜೆಪಿ, ಜೆಡಿಎಸ್ ದೂರಿವೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.