Theater Artist: ದ್ವಿಚಕ್ರ ವಾಹನ ಅಪಘಾತ: ರಂಗಭೂಮಿ ಕಲಾವಿದ ಸಾವು
Team Udayavani, Dec 31, 2023, 10:05 AM IST
ಪುಂಜಾಲಕಟ್ಟೆ: ದ್ವಿಚಕ್ರ ವಾಹನ ಅಪಘಾತದಲ್ಲಿ ರಂಗಭೂಮಿ ಕಲಾವಿರೋರ್ವರು ಮೃತಪಟ್ಟ ಘಟನೆ ಡಿ.31ರ ರವಿವಾರ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ ಗೌತಮ್ (26) ಮೃತಪಟ್ವರಾಗಿದ್ದಾರೆ.
ಮೂಡುಬಿದಿರೆ ಪಿಂಗಾರ ಕಲಾವಿದೆರ್ ತಂಡದ ಕಲಾವಿದರಾಗಿದ್ದ ಅವರು ಡಿ.30 ರಂದು ಬೆಳುವಾಯಿಯಲ್ಲಿ ನಾಟಕ ಮುಗಿಸಿ ತಡರಾತ್ರಿ ಸುಮಾರು 3ಗಂಟೆಯ ಹೊತ್ತಿಗೆ ಮನೆಗೆ ಹಿಂತಿರುಗುತ್ತಿರುವಾಗ ಅವರ ಸ್ಕೂಟರ್ ಮನೆಯ ಸಮೀಪ ಮರವೊಂದಕ್ಕೆ ಢಿಕ್ಕಿಯಾಗಿ ಗೌತಮ್ ಅವರ ತಲೆಗೆ ಏಟಾಗಿ ರಸ್ತೆಗೆ ಬಿದ್ದಿದ್ದರು. ಬೆಳಗ್ಗೆಯಷ್ಟೆ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಅವಿವಾಹಿತರಾಗಿದ್ದ ಅವರು ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಉತ್ತಮ ನಾಟಕ ಕಲಾವಿದರಾಗಿದ್ದ ಅವರು ಹಲವಾರು ಸಂಘ ಸಂಸ್ಥೆಗಳ ನಾಟಕಗಳಲ್ಲಿ ಪಾತ್ರ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್
Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ
Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.