Tour: ಲೋಹಿತನ ಜಾಡಿನಲ್ಲಿ ಒಂದು ಪ್ರಯಾಣ


Team Udayavani, Dec 31, 2023, 5:21 PM IST

Tour: ಲೋಹಿತನ ಜಾಡಿನಲ್ಲಿ ಒಂದು ಪ್ರಯಾಣ

ಹಕ್ಕಿಗಳಿಗೆಂದು ಊರೂರುಗಳಲ್ಲಿ ಅಲೆಯುವ ನಾನು 2023ರಲ್ಲಿ ಮಾಡಿದ ಮೂರು ಹೊರರಾಜ್ಯದ ಹಕ್ಕಿ ಪ್ರವಾಸಗಳೂ ಅರುಣಾಚಲ ಪ್ರದೇಶದಲ್ಲೇ ಆಗಿದ್ದವು. ಆದರೆ ಈ ಪ್ರವಾಸಗಳು ಮೂರು ಬೇರೆ ಬೇರೆ ಜಾಗಗಳಾಗಿದ್ದವು. ಏಪ್ರಿಲ್-ಮೇನ ಮೊದಲ ಪ್ರವಾಸ ಮಂಡಲ, ಸೆಲಾಪಾಸ್‌, ಈಗಲ್‌ ನೆಸ್ಟಿಗೆ ಆಗಿದ್ದರೆ ಎರಡನೆಯ ನವೆಂಬರ್‌ ಪ್ರವಾಸ ಮಿಶ್ಮಿಗೆ ಆಗಿತ್ತು. ಡಿಸೆಂಬರಿನಲ್ಲಿ ಹೊರಟ ಕೊನೆಯ ಪ್ರವಾಸ ವಾಲಾಂಗ್‌ ಕಡೆಗೆ.

ವಾಲಾಂಗಿನ ಪ್ರವಾಸದಲ್ಲಿ ಎಡೆಬಿಡದೆ ಸೆರಗು ಹಿಡಿದು ಬೆರಗಿನಿಂದ ನಡೆದದ್ದು ಲೋಹಿತ್‌ ನದಿಯ ಜಾಡಿನಲ್ಲಿ. ಅಸ್ಸಾಮ್‌ ದಾಟಿ ಇನ್ನರ್‌ ಲೈನ್‌ ಪರ್ಮಿಟ್‌ ಪಡೆದು ಪರ್ವತಗಳ ನಾಡಾದ ಅರುಣಾಚಲ ಪ್ರದೇಶಕ್ಕೆ ಕಾಲಿರಿಸಿ ಪರಶುರಾಮ ಕುಂಡದ ಬಳಿ ಸೇತುವೆಯ ಮೇಲೆ ನಿಂತಾಗ ಲೋಹಿತ ತನ್ನ ತಿಳಿ ನೀಲವರ್ಣದಿಂದ ಕಣ್ತುಂಬಿ ಮನಕ್ಕಿಳಿಯಿತು. ಕೆಂಪು ಜೇಡಿಮಣ್ಣಿನ ನೆಲದಲ್ಲಿ ಹರಿಯುತ್ತಿದ್ದ ನದಿಗೆ ಹೆಸರು ಬಂದದ್ದು ಅಸ್ಸಾಮಿ ಮೂಲದ ರಕ್ತ ಅರ್ಥದ ಲೋಹಿತ ಶಬ್ದದಿಂದ. ರಕ್ತದ ನದಿ ಎಂದೇ ಕರೆಸಿಕೊಳ್ಳುವ ಲೋಹಿತ್‌ ಜೊತೆ ಜೊತೆಯಲ್ಲಿ ನದಿಯ ಮೂಲದತ್ತ ಹಿಮ್ಮುಖವಾಗಿ ಮುಂದಿನ ನಮ್ಮ ಪಯಣ ಸಾಗಿತು. ಕಣಿವೆಯಾಳದಲ್ಲಿ ನದಿ ಕಣ್ಣಿಗೆ ಬೀಳುತ್ತಲೇ ಇತ್ತು.

ಎತ್ತ ನೋಡಿದರೂ ಲೋಹಿತನ ಮೋಹಕ ನೋಟ:‌

ಇಳಿ ಸಂಜೆಯಲ್ಲಿ ಕತ್ತಲೆ ಕಣ್ಣಿಗೆ ಕಟ್ಟಿದಾಗ ವಾಲಾಂಗ್‌ ತಲುಪಿದ್ದೆವು. ಹಿಡಿ-ಕೈಪಿಡಿ ಇಲ್ಲದ ಐವತ್ತು ಮೆಟ್ಟಿಲು ಏರಿ ಹೋಂ ಸ್ಟೇ ಸೇರಿದೆವು. ಬೆಳಿಗ್ಗೆ ಐದೂವರೆಗೆ ಹಕ್ಕಿಗೆ ಹೊರಡಲು ರೆಡಿಯಾಗಿರಿ ಎಂದಿದ್ದರಿಂದ ಬಹು ದೂರದ ಕುಲುಕಾಟದ ಪಯಣಕ್ಕೆ ಬಾಡಿ ಬಸವಳಿದಿದ್ದರಿಂದ ಬೇಗ ಎರಡು ರಗ್ಗು ಹೊದ್ದು ಹಾಸಿಗೆಯಲ್ಲಿ ಬಿದ್ದು ನಿದ್ದೆಗೆ ಶರಣಾದೆ. ಏನೋ ಹರಿಯುವ ಸದ್ದು ಎಂದು ಬೆಳಿಗ್ಗೆ ಬಾಲ್ಕನಿಯ ಬಾಗಿಲು ತೆರೆದು ಕಣಿºಟ್ಟರೆ ಎದುರೆದುರೆ ಲೋಹಿತ ಕಣ್‌ ದಿಟ್ಟಿ ಕಾಣುವ ತನಕ. ಅರೆ ಲೋಹಿತ ಕಣ್ಣಿಗೆ ನೀನೆಷ್ಟು ಹಿತ ಎಂದುಕೊಂಡೆ. ನದಿಯ ದಡದಲ್ಲೇ ನಮ್ಮ ಸೇನಾಪಡೆಯ ಕ್ಯಾಂಪ್‌. ಸೇನೆಯ ಅನೇಕ ಸಾಹಸಗಳಿಗೆ ತೆರೆದ ತೋಳಿನಿಂದ ಸ್ವಾಗತ ನೀಡುವವ.

ನಮ್ಮ ಆ ದಿನದ ಹಕ್ಕಿ ಅರಸಾಟಕ್ಕೆ ಲೋಹಿತ್‌ ಕಣ್ಗಾವಲಾದ. ಹೆಲ್ಮೆಟ್‌ ಟಾಪಿನಲ್ಲಿ ಹಕ್ಕಿ ಹುಡುಕಿ ಸಂಜೆ ಕೆಳಗಿಳಿದರೆ ಲೋಹಿತನ ದಡದ ಸನಿಹದಲ್ಲಿಯೂ ಹುಡುಕಿದೆವು. ಮರುದಿನ ನಮ್ಮ ನಡೆ ಗಡಿಯ ಕಡೆಗೆ ಅಂದರೆ ಇಂಡಿಯಾದ ಕೊನೆಯ ಊರು ಕಾಹೋಗೆ ಆಗಿತ್ತು. ಲೋಹಿತನನ್ನು ಪದೇ ಪದೇ ದಾಟಿ ಅವನ ಪಕ್ಕದಲ್ಲೇ ಕಾಹೋ ತಲುಪಿದರೆ, ಚೀನಾ ದಾಟಿ ನಮ್ಮ ದೇಶಕ್ಕೆ ಲೋಹಿತ್‌ ಕಾಹೋ ಮೂಲಕ ಕಾಲಿರಿಸಿದ್ದ. ಟಿಬೇಟಿನ ಕಾಂಗ್ರಿ ಕಾರ್ಪೊ ಶ್ರೇಣಿಯಲ್ಲಿ ರೊಂಗ್ಟೋ ಚು ಹಾಗೂ ಜೌಯಲ್‌ ನ್ಗುಚು ನದಿಗಳಾಗಿ ಹುಟ್ಟಿ ನಂತರ ಎರಡೂ ಒಂದಾಗಿ ಗಡಿಗಳು ನಿಮಗೆ, ನನಗಲ್ಲ ಎನ್ನುವಂತೆ ಹರಿದು ನಮ್ಮ ದೇಶದ ಗಡಿಗೆ ಮುನ್ನುಗ್ಗಿದ್ದ ಲೋಹಿತ. ಅವನನ್ನು ದಾಟಲು ವಾಹನಗಳಿಗೆ ಸುಭದ್ರ ಸೇತುವೆಗಳಿದ್ದರೆ ಅಲ್ಲಲ್ಲಿ ತೂಗು ಸೇತುವೆಗಳೂ ಇದ್ದವು. “ಜೋಪಾನ, ಜಾರಿದರೆ ಪ್ರಪಾತ’ ಎಂದು ಲೋಹಿತ ಎಚ್ಚರಿಸುತ್ತಿದ್ದ. ನಾವೂ ಆಗಾಗ ಗಾಡಿ ನಿಲ್ಲಿಸಿ ಲೋಹಿತನೆಡೆಗೆ ದುರ್ಬೀನಿನಲ್ಲಿ ದೃಷ್ಟಿ ಹರಿಸುತ್ತಿದ್ದೆವು ಬಿಳಿಹೊಟ್ಟೆ ಬಕನಿಗಾಗಿ.

ಬಿಳಿ ಬಿಳಿ ಗುಂಡಾದ ನುಣುಪು ಕಲ್ಲುಗಳಿಗೆ ಮುತ್ತಿಟ್ಟ ನೀರು ಮುಂದುವರೆಯುತ್ತಿತ್ತೆ ವಿನಾ ನಾವರಸುತ್ತಿದ್ದ ಬಕ ಕಾಣಲಿಲ್ಲ. ಕಾಹೋದಿಂದ ಮರಳುವಾಗ ಹೊಸದಾಗಿ ಕಟ್ಟುತ್ತಿದ್ದ ಸೇತುವೆಯಂಚಿನಲ್ಲಿ ಲ್ಯಾಂಡ್‌ ಸ್ಲೆçಡಾಗಿ ತಾಸು ತ್ರಾಸು ಅನುಭವಿಸಿ ಕೊನೆಗೂ ವಾಲಾಂಗಿಗೆ ತಡವಾಗಿ ತಲುಪಿ ಸಮಾಧಾನದ ನಿಟ್ಟುಸಿರು ಬಿಟ್ಟೆವು.

ಕೊನೆಗೂ ಕ್ಯಾಮರಾ ಆಸೆ ತಣಿಸಿದ ಲೋಹಿತ:

ಕೊನೆಯ ದಿನ ವಾಲಾಂಗಿನಿಂದ ಮುಂಜಾವದಲ್ಲೇ ಮುನ್ಸರಿದು ಲೋಹಿತ್‌ ಜಿಲ್ಲೆಯ ತೇಜು ಕಡೆಗೆ ಹೊರಟರೆ ಜೊತೆಗೆ ಲೋಹಿತ ಸಾಥ್‌ ನೀಡಿದ. ಉದಯಕ್‌ ಪಾಸ್‌ ಏರಿದರೆ ಅಲ್ಲೂ ಲೋಹಿತ. ಸಂಜೆಗೆಂಪು ಆಗಸದಂಚಿನಲ್ಲಿ ತುಂಬಿದಾಗ ವ್ಯೂ ಪಾಯಿಂಟಿನಲ್ಲಿಳಿದು ಆ ರಂಗನ್ನು ಪಟಕ್ಕಿಳಿಸುವಾಗ ಲೋಹಿತನ ಬೆಳ್ಳಿಬಣ್ಣಕ್ಕೆ ರವಿ ರಂಗೇರಿಸಿದ ಚಿತ್ರ ನಯನ ಮನೋಹರವಾಗಿತ್ತು.

ಮಿಶ್ಮಿ ಬೆಟ್ಟವನ್ನೇರಿದಾಗ ಬಯಲ ತುಂಬಾ ಹರಡಿಕೊಂಡ ದಿಬಾಂಗ್‌ ನದಿಯನ್ನು ಕಂಡಿದ್ದೆ. ದಿಬಾಂಗ್‌ ಮತ್ತಷ್ಟು ದೂರ ಹರಿದು ಲೋಹಿತನೊಂದಿಗೆ ಮಿಲನಿಸಿ ಮುನ್ನಡೆಯುತ್ತಿತ್ತು. ಇನ್ನೂರು ಕಿ.ಮೀ ಪಯಣದ ತನ್ನ ದಾರಿಯುದ್ದಕ್ಕೂ ಅನೇಕ ಉಪನದಿಗಳನ್ನು ತನ್ನೊಳಗೆ ಕೂಡಿಸಿಕೊಂಡು ಹರಿಯುವ ಲೋಹಿತ 9.15 ಕಿ.ಮೀ ಉದ್ದದ ಅಸ್ಸಾಂ-ಅರುಣಾಚಲಕ್ಕೆ ಕೊಂಡಿಯಾದ ಅಸ್ಸಾಮಿನ ಸಾದಿಯಾ ದೋಲಿಯ ಬಳಿಯ ಭೂಪೇನ್‌ ಹಜಾರಿಕಾ ಸೇತುವೆಯಡಿಯಲ್ಲಿ ಸಾಗಿ ತನ್ನ ಪರ್ವತಗಳಂಚಿನ ಪಯಣ ಮರೆತು ಭರದಿಂದ ಓಡುವ ಬ್ರಹ್ಮಪುತ್ರದ ಪ್ರಮುಖ ಉಪನದಿಯಾಗಿ ಬಯಲಿನಲ್ಲಿ ಬೆರೆತು ಹೋಗುವ ಅರುಣಾಚಲದ ಕೃಷಿಗೆ, ಕುಡಿಯುವ ನೀರಿಗೆ, ಶಕ್ತಿಯುತ್ಪಾದನೆಗೆ, ಪ್ರವಾಸೋದ್ಯಮದ ಬೆಳವಣಿಗೆಗೆ ನೆರವಾದ ಲೋಹಿತನ ಜಾಡಿನಲ್ಲಿ ಹೋಗಿಬಂದ ಚಿತ್ರಗಳನ್ನು ಸೆರೆಹಿಡಿಯುವ ಆಸೆಗೆ ಕ್ಯಾಮೆರಾ ಕೂಡಾ ಸ್ಪಂದಿಸಿತು.

ತಲುಪುವುದು ಹೇಗೆ?

ಅರುಣಾಚಲಕ್ಕೆ ನೇರ ವಿಮಾನ ಸಂಪರ್ಕ ಇಲ್ಲ. ಇತ್ತೀಚೆಗೆ ತೇಜು ಎಂಬ ಕಡೆ ಶುರುವಾಗಿದ್ದರೂ, ವಿಮಾನ ಸಂಖ್ಯೆ ಕಡಿಮೆ. ಅರುಣಾಚಲದ ಕೆಲವು ಕಡೆಗೆ ಗೌಹಾಟಿಗೆ ಹೋಗಿ ಅಲ್ಲಿಂದ ಬಸ್‌ ಅಥವಾ ಕಾರ್‌ ಮೂಲಕ ಹೋಗಬೇಕು. ಕೆಲವು ಕಡೆಗೆ ಅಸ್ಸಾಮಿನ ದಿಬ್ರೂಗಡಕೆj ಹೋಗಿ ಅಲ್ಲಿಂದ ಅರುಣಾಚಲಕ್ಕೆ ತೆರಳಬೇಕು. ವಿಮಾನದ ವೆಚ್ಚ ಅಂದಾಜು ಒಂದು ಕಡೆಗೆ ಹನ್ನೆರಡು ಸಾವಿರ. ಜೊತೆಗೆ ಕಾರ್‌, ಬಸ್‌ ಪ್ರಯಾಣದ ವೆಚ್ಚ ಪ್ರತ್ಯೇಕ.

-ಡಾ. ಲೀಲಾ ಅಪ್ಪಾಜಿ

ಟಾಪ್ ನ್ಯೂಸ್

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

6-kalburgi

Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ

Gadag; ಜಿಲ್ಲೆಯಲ್ಲಿ ಡೇಂಜರ್ ಡೆಂಘೀಗೆ ಮೊದಲ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

7-yellapura

Yellapura: ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ; ತಪ್ಪಿದ ಅನಾಹುತ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.