Kapu ಕಾರು – ಬೈಕ್ ಢಿಕ್ಕಿ: ಮೂವರಿಗೆ ಗಾಯ
Team Udayavani, Jan 1, 2024, 11:12 PM IST
ಕಾಪು: ಕಾರು ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸಹಿತ ಮೂವರು ಗಾಯಗೊಂಡ ಘಟನೆ ರವಿವಾರ ರಾತ್ರಿ ಕಟಪಾಡಿಯಲ್ಲಿ ನಡೆದಿದೆ.
ಕೇರಳದಿಂದ ಮಂಗಳೂರಿಗೆ ಬಂದು, ಅಲ್ಲಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಕಟಪಾಡಿ ಜಂಕ್ಷನ್ ಬಳಿ ಮಟ್ಟು ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆಯಿತು. ಬೈಕ್ ಸವಾರ ಪ್ರವೀಣ್ ಕೃಷ್ಣ ದೇವಾಡಿಗ ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡರು. ಕಾರಿನಲ್ಲಿದ್ದ ಅಭಿಜಿತ್ ಮತ್ತು ಪೃಥ್ವಿರಾಜ್ ನಂಬಿಯಾರ್ ಅವರಿಗೂ ಗಾಯಗಳಾಗಿವೆ.
ಗಾಯಾಳುಗಳನ್ನು ಕಾರಿನಲ್ಲಿ ಆದಿಲ್ ಅವರು ರಿಕ್ಷಾದಲ್ಲಿ ಹಾಕಿಕೊಂಡು ಚಿಕಿತ್ಸೆ ಯ ಬಗ್ಗೆ ಉಡುಪಿಯ ಹೈಟೆಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಪ್ರವೀಣ್ ಕೃಷ್ಣ ದೇವಾಡಿಗ ಅವರನ್ನು ಆದರ್ಶ ಆಸ್ಪತ್ರೆಗೆ ಒಳರೋಗಿಯನ್ನಾಗಿ ದಾಖಲಿಸಲಾಗಿದೆ. ಕಾರು ಮತ್ತು ಬೈಕ್ಗಳೆರಡೂ ಜಖಂಗೊಂಡಿವೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.