![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 2, 2024, 1:37 PM IST
ದೋಟಿಹಾಳ: ಸ್ವಾತಂತ್ರ್ಯ ಸಿಕ್ಕು 75 ವರ್ಷ ಕಳೆದರೂ ಇನ್ನೂ ರಾಜ್ಯದ ಎಷ್ಟೋ 3-6 ವರ್ಷದೊಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ ಎಂಬುವುದೇ ಒಂದು ದುರಂತವಾಗಿದೆ. ಇದಕ್ಕೆ ತಾಜಾ ಉದಾಹರಣೆ, ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿರುವ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ರಾಮ್ಜೀ ನಾಯಕ್ ತಾಂಡದ 3-6 ವರ್ಷದ ಒಳಗಿನ ಮಕ್ಕಳ ಸ್ಥಿತಿ.
ರಾಮಜೀ ನಾಯಕ್ ತಾಂಡದಲ್ಲಿ 3-6 ವರ್ಷದ ಒಳಗಿನ ಸುಮಾರು 18-20 ಮಕ್ಕಳು ಇದ್ದಾರೆ. ಈ ಮಕ್ಕಳಿಗೆ ಇದುವರೆಗೂ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ. ಶಾಲಾ ಪೂರ್ವ ಶಿಕ್ಷಣ ಹಂತದಲ್ಲಿ ಓದುವ 3 ವರ್ಷದಿಂದ 6 ವರ್ಷದೊಳಗಿನ ಮಕ್ಕಳ ಬೆಳವಣಿಗೆಯಲ್ಲಿ ತಂದೆ ತಾಯಿ ಪೋಷಕರ ಪಾತ್ರ ಮಹತ್ವದಾಗಿರುತ್ತದೆ. ಹಾಗೇ ಶಾಲಾ ಪೂರ್ವ ಶಿಕ್ಷಣ ಪಡೆಯುವ ಮಕ್ಕಳ ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆಗೆ ಬೇಕಾದ ವ್ಯವಸ್ಥೆ ಹಾಗೂ ಸಾಮಾನ್ಯ ಜ್ಞಾನದಿಂದಾಗಿ ಮಕ್ಕಳ ಬೌದ್ಧಿಕ ಸಾಮರ್ಥ್ಯವು ವೃದ್ಧಿಯಾಗಲು ಅಂಗನವಾಡಿ ಕೇಂದ್ರ ಮುಖ್ಯ.
ರಾಜ್ಯದ ಎಷ್ಟೋ ತಾಂಡಗಳ ಮಕ್ಕಳು ಶಾಲಾ ಪೂರ್ವ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪ್ರಾಥಮಿಕ ಪೂರ್ವ ಶಿಕ್ಷಣವು ಮಕ್ಕಳ ಶಿಕ್ಷಣದ ತಳಹದಿಯಾಗಿದೆ. ಇಲ್ಲಿಯ ಶಿಕ್ಷಣ ಮುಂದಿನ ಶಿಕ್ಷಣದ ಪ್ರತಿಯೊಂದು ಹಂತದಲ್ಲಿ ಯಶಸ್ಸನ್ನು ಅವಲಂಭಿಸಿದೆ. ಶಾಲಾ ಶಿಕ್ಷಣ ಸಿಗದ ಎಷ್ಟೋ ಮಕ್ಕಳು ಶಾಲೆಯಿಂದ ಉತ್ತಮ ಶಿಕ್ಷಣ ಕಲಿಯದೆ. ಅನುತ್ತೀರ್ಣರಾಗಿ ಶಾಲೆಯಿಂದ ಹೊರಬೀಳುವ ಅಪಾಯವಿರುತ್ತದೆ.
ಸರಕಾರ ಮಕ್ಕಳ ಹಕ್ಕುಗಳ ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಮುಖಾಂತರ ಜಾಗೃತಿಗೊಳಿಸುತ್ತಿದೆ ಆದರೆ. ಇಲ್ಲಿಯ ಶಿಕ್ಷಣದಿಂದ ವಂಚಿತವಾಗುತ್ತಿರುವ ಇಂತಹ ಮಕ್ಕಳ ಬಗ್ಗೆ ಯಾರು ಗಮನಹರಿಸುತ್ತಿಲ್ಲ. ಮಕ್ಕಳ ಮೂಲಭೂತ ಹಕ್ಕು ಆದ ಶಿಕ್ಷಣ ಪಡೆಯುವ ಹಕ್ಕನ್ನು ಈ ಮಕ್ಕಳು ಕಳೆದುಕೊಳ್ಳುತ್ತಿರುವುದು ಕಂಡುಬರುತ್ತಿದೆ 2002ರಲ್ಲಿ ಆಸ್ತಿಕರಣ ಹಕ್ಕನ್ನು ತೆಗೆದು ಮಕ್ಕಳ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಆರ್ಟಿಕಲ್ 51-ಎ ಅಡಿಯಲ್ಲಿ ನೀಡಲಾಗಿದೆ. ಆದರೂ ಇನ್ನೂ 3-6 ವರ್ಷದ ಒಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ ಯಾಕೆ?
ಈ ತಾಂಡದಲ್ಲಿ ಸುಮಾರು 200ಕ್ಕೂ ಹೆಚ್ಚು ಹಾಗೂ 50 ರಿಂದ 60 ಕುಟುಂಬಗಳು ಈ ತಾಂಡದಲ್ಲಿ ವಾಸವಾಗಿದ್ದಾರೆ. ಇಲ್ಲಿ ಕೇವಲ ಮಕ್ಕಳ ಸಮಸ್ಯೆ ಅಷ್ಟೇಲ್ಲ. ಇಲ್ಲಿಯ ಗರ್ಭಿಣಿ, ತಾಯಂದಿರಿಗೆ ಅಂಗನವಾಡಿ ಕೇಂದ್ರದ ಮಾತಪೂರ್ಣ ಯೋಜನೆಯಿಂದ ಇವರು ವಂಚಿತರಾಗುತ್ತಿದ್ದಾರೆ. ಕಾರಣ ಈ ತಾಂಡ ಗರ್ಭಿಣಿ, ತಾಯಂದಿರು ಅಂಗನವಾಡಿ ಕೇಂದ್ರಕ್ಕೆ ಹೋಗಬೇಕಾದರೆ. 3-4 ಕಿಮೀ ನಡೆದುಕೊಂಡು ಕಿಲ್ಲಾರಹಟ್ಟಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಹೋಗಿ ಬರುವ ಸ್ಥಿತಿ ಇವರದ್ದಾಗಿದೆ. ತಾಂಡದಲ್ಲಿ ಒಂದು ಅಂಗನವಾಡಿ ಕೇಂದ್ರ ಇಲ್ಲದ ಕಾರಣ. ತಾಂಡದ ಮಕ್ಕಳಿಗೆ ಶಿಕ್ಷಣ ಹಾಗೂ ಗರ್ಭಿಣಿ, ತಾಯಂದಿರಿಗೆ ಸರಿಯಾದ ಪೌಷ್ಟಿಕ ಆಹಾರ ಸಿಗದೇ ತೊಂದರೆ ಅನುಭವಿಸುತ್ತಿದ್ದಾರೆ.
ಸರಕಾರ ಗರ್ಭಿಣಿ, ತಾಯಂದಿರಿಗೆ ಸರಿಯಾದ ಪೌಷ್ಟಿಕ ಆಹಾರ ನೀಡಲು ಅಂಗನವಾಡಿ ಕೇಂದ್ರದಲ್ಲಿ ಮಧ್ಯಾಹ್ನ ಪ್ರತಿ ನಿತ್ಯ ಗರ್ಭಿಣಿ, ತಾಯಂದಿರಿಗೆ ಪೌಷ್ಟಿಕ ಆಹಾರ ನೀಡುವ ಮಾತಪೂರ್ಣ ಯೋಜನೆ ಜಾರಿಗೆ ತಂದ್ದಿದೆ. ಆದರೇ ಇಲ್ಲಿಯ ಗರ್ಭಿಣಿ, ತಾಯಂದಿರಿಗೆ ಸರಿಯಾದ ಪೌಷ್ಟಿಕ ಆಹಾರ ಸಿಗದೇ. ದೂರದ ಕಿಲ್ಲಾರಹಟ್ಟಿ ಅಂಗನವಾಡಿ ಕೇಂದ್ರದವರು ತಿಂಗಳಿಗೊಮ್ಮೆ ಆಹಾರ ಪದಾರ್ಥವನ್ನು ನೀಡಿ ಕಳಿಸುತ್ತಿದ್ದಾರೆ.
ರಾಮ್ಜೀ ನಾಯಕ ತಾಂಡ 3-6 ವರ್ಷದ ಒಳಗಿನ ಮಕ್ಕಳು ನಮ್ಮ ಅಂಗನವಾಡಿ ಕೇಂದ್ರದಲ್ಲಿ ದಾಖಲಾಗಿವೆ. ಆದರೇ ಈ ಮಕ್ಕಳು ಕೇಂದ್ರಕ್ಕೆ ಬರುವದಿಲ್ಲ. ಪ್ರತಿ ವರ್ಷ 4-5 ಮಂದಿ ಗರ್ಭಿಣಿ ಬಾಣತಿಯರು ಸಿಗುತ್ತಾರೆ ಹೀಗಾಗಿ ತಾಂಡದಲ್ಲಿ ಒಂದು ಅಂಗನವಾಡಿ ಕೇಂದ್ರ ಆರಂಭ ಮಾಡಿದರೆ ಮಕ್ಕಳಿಗೂ ಹಾಗೂ ಗರ್ಭಿಣಿ ತಾಯಂದಿರಿಗೂ ಅನುಕೂಲವಾಗುತ್ತದೆ ಎಂದು ಕಿಲ್ಲಾರಹಟ್ಟಿ ಕೇಂದ್ರ ಕಾರ್ಯಕರ್ತೆ ಅವರು ಹೇಳಿದರು.
ಶಿಕ್ಷಣ ಪ್ರತಿ ಮಗುವಿನ ಹಕ್ಕು, 14ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತೇವೆ ಎಂದು ಸರಕಾರ ಹೇಳಿಕೊಳ್ಳುತ್ತವೆ. ಆದರೆ ಇದುವರಿಗೂ ಈ ತಾಂಡದ ಎಷ್ಟೋ 3-6ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ ಯಾಕೆ? ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡುತ್ತಿದ್ದಾರೆ.
3-6ವರ್ಷದ ಪ್ರತಿ ಮಕ್ಕಳು ಶಾಲಾ ಪೂರ್ವ ಶಿಕ್ಷಣ ಪಡೆಯಬೇಕು. ಈ ರಾಮ್ಜೀ ನಾಯಕ್ ತಾಂಡದ 3-6 ವರ್ಷದ ಮಕ್ಕಳ ಶಿಕ್ಷಣ ಸಮಸ್ಯೆ ಬಗ್ಗೆ ಕೂಡಲೇ ಸರ್ವೆ ಮಾಡಿ ವರದಿ ತರಿಸಿಕೊಂಡು ಸೂಕ್ತ ಕ್ರಮಕೈಗೊಳ್ಳುತ್ತೇವೆ. –ರೋಹಿಣಿ,ಜಿಲ್ಲಾ ಮಕ್ಕಳ ರಕ್ಷಣ ಅಧಿಕಾರಿ ಕೊಪ್ಪಳ.
ರಾಮ್ಜೀ ನಾಯಕ್ ತಾಂಡದ ಇಲಾಖೆಯ ಒಬ್ಬ ಅಧಿಕಾರಿಯನ್ನು ಕಳಿಸುತ್ತೇವೆ. ಇಲ್ಲಿಯ ಮಕ್ಕಳ ಸಮಸ್ಯೆ ಬಗ್ಗೆ ವರದಿ ಪಡೆದುಕೊಂಡು ಶಿಕ್ಷಣದಿಂದ ವಂಚಿತರಾಗುತ್ತಿರು 3-6ವರ್ಷದ ಮಕ್ಕಳ ಸಮಸ್ಯೆ ಸೂಕ್ತ ಪರಿಹಾರ ಕಂಡುಕೊಳ್ಳುತ್ತೇವೆ. – ತಿಮ್ಮಣ್ಣ ಶಿರಸಿಗಿ, ಡಿಡಿ ಕೊಪ್ಪಳ.
– ವರದಿ: ಮಲ್ಲಿಕಾರ್ಜುನ ಮೆದಿಕೇರಿ ದೋಟಿಹಾಳ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.