Alcohol sales: ಜಿಲ್ಲಾದ್ಯಂತ 2 ದಿನಕ್ಕೆ 8.63 ಕೋಟಿ ಮದ್ಯ ಮಾರಾಟ!


Team Udayavani, Jan 2, 2024, 3:50 PM IST

Alcohol sales: ಜಿಲ್ಲಾದ್ಯಂತ 2 ದಿನಕ್ಕೆ 8.63 ಕೋಟಿ ಮದ್ಯ ಮಾರಾಟ!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನೂತನ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮದ್ಯದ ಹೊಳೆಯೆ ಹರಿದಿದ್ದು, ಕೇವಲ ವರ್ಷಾಂತ್ಯದ ಕೊನೆಯ ಡಿ. 30, 31 ರಂದು 2 ದಿನದಲ್ಲಿ ಬರೋಬ್ಬರಿ 8.63 ಕೋಟಿ ರೂ. ಮೌಲ್ಯದಷ್ಟು ದಾಖಲೆಯ ಮದ್ಯ ಜಿಲ್ಲಾದ್ಯಂತ ಮಾರಾಟಗೊಂಡಿದೆ.

ಹೌದು, 2022ನೇ ಸಾಲಿಗೆ ಹೋಲಿಸಿದರೆ 2023ನೇ ಸಾಲಿನಲ್ಲಿ ಬರೋಬ್ಬರಿ 1 ಕೋಟಿಯಷ್ಟು ಅಧಿಕ ಮದ್ಯ ಹಾಗೂ ಬಿಯರ್‌ ಜಿಲ್ಲೆಯಲ್ಲಿ ಮಾರಾಟ ಆಗಿದ್ದು,ಜಿಲ್ಲೆಯಲ್ಲಿ ಬಿಯರ್‌ ಕುಡಿಯುವುದರಗಿಂತ ಮದ್ಯ ಪ್ರಿಯರೇ ಸಂಖ್ಯೆಯೆ ಹೆಚ್ಚಾಗಿರುವುದು ಅಬಕಾರಿ ಇಲಾಖೆ ನೀಡಿರುವ ಅಂಕಿ, ಅಂಶಗಳಿಂದ ದೃಢಪಟ್ಟಿದೆ.

8.63 ಕೋಟಿ ಮದ್ಯ ಮಾರಾಟ: 2023 ನೇ ಸಾಲಿನ ಹೊಸ ವರ್ಷಕ್ಕೆ ಜಿಲ್ಲಾದ್ಯಂತ ಮಾರಾಟಗೊಂಡ ಮದ್ಯದ ಲೆಕ್ಕಾಚಾರ ನೋಡಿದರೆ ಈ ಹಿಂದಿನ ಹಲವು ವರ್ಷಗಳ ದಾಖಲೆಗಳನ್ನು ಮೀರಿ ಈ ಬಾರಿ ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮದ್ಯ ಮಾರಾಟಗೊಂಡಿದ್ದು, ಈ ವರ್ಷ ಕೇವಲ 2 ದಿನದಲ್ಲಿ ಒಟ್ಟು 8,63,94,644.8 ರೂ.ಕೋಟಿ ಮೌಲ್ಯದ ಮದ್ಯ ಮಾರಾಟಗೊಂಡಿದೆ. ಕಳೆದ ಬಾರಿ ಇದೇ ಸಮಯದಲ್ಲಿ ಕೇವಲ 7.70 ಕೋಟಿ ಮದ್ಯ ಮಾತ್ರ ಮಾರಾಟಗೊಂಡಿತ್ತು. ಆದರೆ ಈ ವರ್ಷ ಮದ್ಯ ಮಾರಾಟ ಪ್ರಮಾಣ ಹೇರಳವಾಗಿ ಹೆಚ್ಚಾಗಿದೆ. ಆ ಪೈಕಿ ಭಾರತೀಯ ಮದ್ಯ ಹೆಚ್ಚಿನ ಪ್ರಮಾಣದಲ್ಲಿ ಮಾರಾಟಗೊಂಡರೆ ಬೀಯರ್‌ ಕಡಿಮೆ ಪ್ರಮಾಣದಲ್ಲಿ ಮಾರಾಟಗೊಂಡಿರುವುದು ಜಿಲ್ಲೆಯಲ್ಲಿ ಕಂಡು ಬಂದಿದೆ.

ಇನ್ನೂ ಮದ್ಯ ಮಾರಾಟದಲ್ಲಿ ಆಂಧ್ರದ ಗುಡಿಯಲ್ಲಿರುವ ಗೌರಿಬಿದನೂರು ತಾಲೂಕು ಮೊದಲ ಸ್ಥಾನದಲ್ಲಿದ್ದರೆ 2ನೇ ಸ್ಥಾನದಲ್ಲಿ ಅತಿ ಹಿಂದುಳಿದ ತಾಲೂಕಾದ ಬಾಗೇಪಲ್ಲಿ, 3ನೇ ಸ್ಥಾನದಲ್ಲಿ ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿ, 4ನೇ ಸ್ಥಾನಕ್ಕೆ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಇದ್ದು ಕೊನೆ ಸ್ಥಾನದಲ್ಲಿ ರೇಷ್ಮೆ ನಗರಿ ಶಿಡ್ಲಘಟ್ಟ ತಾಲೂಕು ಇದೆ.

ಜಿಲ್ಲೆಯಲ್ಲಿ ಈ ವರ್ಷ ಮಳೆ ಬೆಳೆ ಇಲ್ಲದೇ ತೀವ್ರ ಬರಗಾಲ ಇದ್ದು, ರೈತಾಪಿ ಜನ ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೂ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಮದ್ಯದ ಹೊಳೆ ಹರಿಯುವುದು ಎದ್ದು ಕಾಣುತ್ತಿದೆ. ಇದರಿಂದ ಎರಡೇ ದಿನದಲ್ಲಿ ಜಿಲ್ಲೆಯ ಮದ್ಯಪ್ರಿಯರಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 8.63 ಕೋಟಿಗೂ ಅಧಿಕ ಮೊತ್ತ ಹರಿದು ಹೋಗಿದೆ.

ಜಿಲ್ಲೆಯಲ್ಲಿ ಹೊಸ ವರ್ಷದ ಹಿನ್ನಲೆಯಲ್ಲಿ ಡಿ.30 ಹಾಗೂ 31 ರಂದು ಒಟ್ಟು 8,63,97,644.8 ಮೌಲ್ಯದಷ್ಟು ಮದ್ಯ ಹಾಗೂ ಬಿಯರ್‌ ಮಾರಾಟಗೊಂಡಿದೆ. ಆ ಪೈಕಿ ಐಎಂಎಲ್‌ 16,739 ಬಾಕ್ಸ್‌ (1,44,624.96 ಲೀ) ಹಾಗೂ ಬಿಯರ್‌ 6,257 ಬಾಕ್ಸ್‌ (56,313 ಲೀ) ಮಾರಾಟಗೊಂಡಿದೆ. ●ಆಶಾಲತಾ , ಅಬಕಾರಿ ಉಪಆಯುಕ್ತರು, ಚಿಕ್ಕಬಳ್ಳಾಪುರ ಜಿಲ್ಲೆ

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.