Koppal ಕಿಲ್ಲಾರಹಟ್ಟಿ ಘಟನೆ; ಉದಯವಾಣಿ ವರದಿಗೆ ಸ್ಪಂದಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕನ್ನು ಉಲ್ಲಂಘನೆ ಯಾಗಲು ಆಯೋಗ ಬಿಡುವುದಿಲ್ಲ
Team Udayavani, Jan 2, 2024, 7:31 PM IST
ದೋಟಿಹಾಳ: ಕೊಪ್ಪಳ ಜಿಲ್ಲೆಯ ಗಡಿ ಭಾಗದಲ್ಲಿರುವ ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ರಾಮಜೀ ನಾಯಕ್ ತಾಂಡದಲ್ಲಿ 3-6 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಲ್ಲಿ ಕಡ್ಡಾಯ ಶಿಕ್ಷಣ ಮಾಯವಾಗುತ್ತಿದೆ ಎಂಬ ಉದಯವಾಣಿ ಆನ್ಲೈನ್ ಸುದ್ದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ವರದಿಗಾರರು ಸಂಪರ್ಕಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜೆ. ರಾಮತ್ನಾಳ ಅವರು ಮಾತನಾಡಿ , ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡುವುದು ಸರಕಾರದ ಕೆಲಸ.
ತಾಯಿಯ ಗರ್ಭದಲ್ಲಿರುವ ಮಗುವಿನಿಂದ ಹಿಡಿದು 14 ವರ್ಷದ ಮಗುವಿನ ರಕ್ಷಣೆ ಮಾಡುವುದು ಹಾಗೂ ಶಿಕ್ಷಣ ನೀಡುವುದು ಸರ್ಕಾರದ ಕೆಲಸ, ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೂ ಶಿಕ್ಷಣ ಸಿಗಬೇಕು, ತಾಂಡದಲ್ಲಿ 10 ಮಕ್ಕಳಿಗೆ ಇರಲಿ… ಒಂದೇ ಮಗು ಇರಲಿ ಅವರಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುವಂತಿಲ್ಲ, ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯ. ಹೀಗಾಗಿ ತತಕ್ಷಣದಿಂದಲೇ ಅಲ್ಲಿಯ ಮಕ್ಕಳಿಗೆ ಶಿಕ್ಷಣ ಸಿಗುವಂತಾಗಬೇಕು. ಕೂಡಲೇ ಆ ತಾಂಡಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಭೇಟಿ ನೀಡಿ. ಅಲ್ಲಿಯ ಮಕ್ಕಳಿಗೆ ಶಿಕ್ಷಣ ಸಿಗುವ ವ್ಯವಸ್ಥೆಯನ್ನು ಆಯೋಗ ಮಾಡುತ್ತದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜೆ ರಾಮತ್ನಾಳ ಅವರು ಮಾಹಿತಿ ನೀಡಿದ್ದಾರೆ.
ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಹುಟ್ಟಿದ ಮಕ್ಕಳಿಗೂ ರಕ್ಷಣೆ ನೀಡುವುದು ಹಾಗೂ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯವಾಗಿದೆ. ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕನ್ನು ಉಲ್ಲಂಘನೆ ಯಾಗಲು ಆಯೋಗ ಬಿಡುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.