Ayodhya ಶ್ರೀ ರಾಮಮಂದಿರದ ರಾಮಲಲ್ಲಾ ವಿಗ್ರಹ; ಅಪೂರ್ವ ಅವಕಾಶ ಪಡೆದ ನಾಳದ ಶಿಲ್ಪಿ ಜಯಚಂದ್ರ


Team Udayavani, Jan 3, 2024, 7:00 AM IST

Ayodhya ಶ್ರೀ ರಾಮಮಂದಿರದ ರಾಮಲಲ್ಲಾ ವಿಗ್ರಹ; ಅಪೂರ್ವ ಅವಕಾಶ ಪಡೆದ ನಾಳದ ಶಿಲ್ಪಿ ಜಯಚಂದ್ರAyodhya ಶ್ರೀ ರಾಮಮಂದಿರದ ರಾಮಲಲ್ಲಾ ವಿಗ್ರಹ; ಅಪೂರ್ವ ಅವಕಾಶ ಪಡೆದ ನಾಳದ ಶಿಲ್ಪಿ ಜಯಚಂದ್ರ

ಬೆಳ್ತಂಗಡಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠೆಗೊಳ್ಳುವ ಬಾಲರಾಮ (ರಾಮಲಲ್ಲ)ನ ವಿಗ್ರಹ ಕೆತ್ತನೆಗೆ ಅವಕಾಶ ಪಡೆದ ಮೂರು ತಂಡಗಳ ಶಿಲ್ಪಿಗಳ ಪೈಕಿ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ನಾಳದ ಜಯಚಂದ್ರ ಆಚಾರ್ಯ ಅವರಿಗೂ ಅವಕಾಶ ಸಿಕ್ಕಿದೆ.

ವಿಗ್ರಹ ಕೆತ್ತನೆಗೆಂದು ಹೊಸದಿಲ್ಲಿ ಯಲ್ಲಿ 7 ತಿಂಗಳ ಹಿಂದೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ದೇಶದ ನೂರಕ್ಕೂ ಹೆಚ್ಚು ಶಿಲ್ಪಿ ಗಳೊಂದಿಗೆ ಸಭೆ ನಡೆಸಿತ್ತು. ಅಂತಿಮವಾಗಿ ಆ ಪೈಕಿ ರಾಜಸ್ಥಾನದ ಸತ್ಯನಾರಾಯಣ ಪಾಂಡೆ, ಮೈಸೂರಿನ ಅರುಣ್‌ ಯೋಗಿರಾಜ್‌, ಸಾಗರದ ವಿಪಿನ್‌ ಬದೋರಿಯಾ ಹಾಗೂ ಜಿ.ಎಲ್‌. ಭಟ್‌ ಇಡಗುಂಜಿಯವರ ತಂಡಗಳಿಗೆ ಅವಕಾಶ ಸಿಕ್ಕಿತ್ತು. ಈ ಪೈಕಿ ವಿಪಿನ್‌ ಬದೋರಿಯಾ, ಜಿಎಲ್‌ ಭಟ್‌ ತಂಡದಲ್ಲಿ ಬೆಳ್ತಂಗಡಿಯ ಜಯಚಂದ್ರ ಆಚಾರ್ಯ, ಹಾನಗಲ್‌ನ ಮೌನೇಶ್‌ ಬಡಿಗೇರ್‌, ಕಲ್ಗಟಿಗೆ ಪ್ರಕಾಶ್‌ ಹರಮನ್‌ ನವರ್‌, ಇಡಗುಂಜಿಯ ಸಂದೀಪ್‌ ಸಹ ಇದ್ದರು.

ಬಾಲರಾಮನ ವಿಗ್ರಹ
ಬಾಲರಾಮನ ವಿಗ್ರಹ ಕೆತ್ತನೆಗೆಂದು ಕಾರ್ಕಳದ ಈದುವಿನ ಕೃಷ್ಣಶಿಲೆ, ಎಚ್‌.ಡಿ. ಕೋಟೆಯ ಕೃಷ್ಣ ಶಿಲೆ, ರಾಜಸ್ಥಾನದ ಅಮೃತಶಿಲೆ ಹಾಗೂ ನೇಪಾಳದ ಗಂಡಕಿ ನದಿಯ ಸಾಲಿಗ್ರಾಮದ ಶಿಲೆಯನ್ನು ಆಯ್ಕೆ ಮಾಡಲಾಗಿತ್ತು. ಆ ಪೈಕಿ ಮೈಸೂರಿನ ಮತ್ತು ರಾಜಸ್ಥಾನದ ಶಿಲೆಗಳನ್ನು ವಿಗ್ರಹಕ್ಕೆ ಆಯ್ಕೆ ಮಾಡಲಾಯಿತು. ಐದು ವರ್ಷದ ಬಾಲರಾಮನ ನಿಂತಿರುವ ಭಂಗಿಯ 8 ಅಡಿ ಎತ್ತರದ ಪ್ರತ್ಯೇಕ ವಿಗ್ರಹ ರೂಪಿಸಲು ಮೂರೂ ತಂಡಗಳಿಗೆ ಟ್ರಸ್ಟ್‌ ಸೂಚಿಸಿತು.

ಗೌಪ್ಯ, ಬಿಗು ಬಂದೋಬಸ್ತ್
ಅಯೋಧ್ಯೆಯಿಂದ 3 ಕಿ.ಮೀ. ದೂರದ ಗೌಪ್ಯ ಸ್ಥಳದಲ್ಲಿ ಮೂರು ತಂಡಗಳೂ ಬಿಗು ಬಂದೋಬಸ್ತ್ನಲ್ಲಿ ವಿಗ್ರಹ ರಚನೆ ಪೂರ್ಣಗೊಳಿಸಿವೆ. ಇವುಗಳಲ್ಲಿ ಪ್ರಾಣ ಪ್ರತಿಷ್ಠೆಗೆ ಆಯ್ಕೆಗೊಳ್ಳುವ ವಿಗ್ರಹ ಹೊರತುಪಡಿಸಿ ಉಳಿದವನ್ನು ಶ್ರೀ ರಾಮಮಂದಿರದ ಪ್ರಾಂಗಣದಲ್ಲೇ ಪ್ರತಿಷ್ಠಾಪಿಸುವ ಸಂಭವವಿದೆ. ಸದ್ಯದ ಮಾಹಿತಿ ಪ್ರಕಾರ ಮೈಸೂರಿನ ಅರುಣ್‌ ಯೋಗಿರಾಜ್‌ ತಂಡದ ಕೃಷ್ಣಶಿಲೆಯ ವಿಗ್ರಹ ಆಯ್ಕೆಯಾಗಿದೆ ಎನ್ನಲಾಗಿದ್ದು. ರಾಮಜನ್ಮಭೂಮಿ ಟ್ರಸ್ಟ್‌ ಅಧಿಕೃತವಾಗಿ ಘೋಷಣೆ ಬಾಕಿ ಇದೆ. ವಿಗ್ರಹ ರಚನೆಗೆ ಆಯ್ಕೆಯಾಗದ ಶಿಲೆಗಳನ್ನೂ ಗಣಪತಿ ಮಂದಿರದ ಬಳಿ ಇರಿಸಲಾಗಿದೆ. ಅವುಗಳೂ ಮುಂದಿನ ದಿನಗಳಲ್ಲಿ ಬೇರೆ ವಿಗ್ರಹ ರಚನೆಗೆ ಬಳಕೆಯಾಗುವ ಸಾಧ್ಯತೆ ಇದೆ.

ನಾಳದ ಪ್ರತಿಭೆ ಜಯಚಂದ್ರ
ನಾಳದ ಗ್ರಾಮೀಣ ಯುವ ಪ್ರತಿಭೆ ಜಯಚಂದ್ರ ಆಚಾರ್ಯ (33) ಅತ್ಯುತ್ತಮ ಶಿಲ್ಪಿಯಾಗಿದ್ದು, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ. ಪಿಯುಸಿ ಬಳಿಕ ಶಿಲ್ಪಕಲೆ ಅಧ್ಯಯನ ಮಾಡಿರುವ ಅವರು, ರಥ ರಚನೆ, ಪಲ್ಲಕ್ಕಿ ರಚನೆ, ಹೊಯ್ಸಳ ಶೈಲಿ, ಚೋಳ ಶೈಲಿ, ಚಾಲುಕ್ಯ ಶೈಲಿ ಸೇರಿದಂತೆ ಪಾರಂಪರಿಕ ಶೈಲಿಯ ವಿಗ್ರಹಗಳ ರಚನೆಯಲ್ಲಿಯೂ ತೊಡಗಿದ್ದಾರೆ.

ನಮ್ಮ ಗುರುಗಳಾದ ಸಾಗರದ ವಿಪಿನ್‌ ಬದೋರಿಯಾ ಮೂಲಕ ರಾಮಜನ್ಮಭೂಮಿಗೆ ಕಾಲಿರಿಸುವ ಅವಕಾಶ ಸಿಕ್ಕಿತಲ್ಲದೇ, ಬಾಲರಾಮನ ವಿಗ್ರಹ ನಿರ್ಮಾಣದಲ್ಲಿ ಭಾಗಿಯಾಗುವ ಸೌಭಾಗ್ಯ ಸಿಕ್ಕಿದ್ದು ನನ್ನ ಬದುಕಿನ ಪವಿತ್ರ ಕ್ಷಣ.
– ಜಯಚಂದ್ರ ಆಚಾರ್ಯ ನಾಳ, ಶಿಲ್ಪಿ

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.