Goa: ಜ. 5 ರಿಂದ 25 ರವರೆಗೆ ಅನ್ಮೋಡ್ ಘಾಟ್ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧ
ಬದಲಿ ಮಾರ್ಗ ಬಳಕೆಗೆ ಸೂಚನೆ
Team Udayavani, Jan 3, 2024, 6:01 PM IST
ಪಣಜಿ: ಜನವರಿ 5 ರಿಂದ 25 ರವರೆಗೆ ಭಾರೀ ವಾಹನಗಳಿಗೆ ಅನ್ಮೋಡ್ ಘಾಟ್ ರಸ್ತೆಯನ್ನು ಮುಚ್ಚಲಾಗಿದೆ. ರೈಲ್ವೆ ಇಲಾಖೆಯ ಡಬ್ಲಿಂಗ್ ಕಾಮಗಾರಿಗಾಗಿ ರಸ್ತೆ ಬಂದ್ ಮಾಡುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಮಾರ್ಗವಾಗಿ ಓಡಾಡುವ ವಾಹನಗಳಿಗೆ ರಾಮನಗರ, ತಿನೇಘಾಟ್, ಸಣ್ಣ ವಾಹನಗಳಿಗೆ ಮಸರ್ಂಗಲ್ ಮತ್ತು ಅನ್ಮೋಡ್, ಕಾಸರ್ಲಾಕ್, ಚಂಡೆವಾಡಿ ಜಗಲಬೆಟ್ ಮಾರ್ಗವನ್ನು ನೀಡಲಾಗಿದೆ. ಭಾರಿ ವಾಹನಗಳಿಗೆ ಅಳ್ನಾವರ-ತಾಳಾಪುರ-ಯಲ್ಲಾಪುರ ಮಾರ್ಗವಾಗಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ತಿಳಿಸಲಾಗಿದೆ.
ಟ್ರಾಫಿಕ್ ಜಾಮ್ ಸಮಸ್ಯೆ:– ಅನ್ಮೋಡ್ ಘಾಟ್ ಬೆಳಗಾವಿ ಮತ್ತು ಗೋವಾವನ್ನು ಸಂಪರ್ಕಿಸುವ ಪ್ರಮುಖ ಘಾಟ್ ಮಾರ್ಗವಾಗಿದ್ದು, ಈ ಮಾರ್ಗದಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಒಂದು ವಾರದ ಹಿಂದೆ ಟ್ರಾಲಿಯೊಂದು ಘಾಟ್ನಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟು ಮಾಡಿತ್ತು. ಅಲ್ಲದೆ ಕೆಲ ತಿಂಗಳ ಹಿಂದೆ ಅನ್ಮೋಡ್ನಿಂದ ರಾಮನಗರದವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ್ದರಿಂದ ವಾಹನ ಚಾಲಕರು ಈ ಮಾರ್ಗವಾಗಿ ಓಡಾಟ ನಡೆಸಲು ಕಸರತ್ತು ನಡೆಸಬೇಕಾಯಿತು.
ಪ್ರವೇಶ ಶುಲ್ಕ:-ಗೋವಾದಿಂದ ಕರ್ನಾಟಕಕ್ಕೆ ಬರುವ ವಾಹನಗಳು ಅನ್ಮೋಡ್ ಚೆಕ್ ಪೋಸ್ಟ್ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕು ಮತ್ತು ಕರ್ನಾಟಕ ಅರಣ್ಯ ಇಲಾಖೆಯು ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ರಾಷ್ಟ್ರೀಯ ವನ್ಯಜೀವಿ ಉದ್ಯಾನವನಗಳ ಮೂಲಕ ಹಾದುಹೋಗುವ ವಾಹನಗಳಿಗೆ ಪ್ರವೇಶ ಶುಲ್ಕವನ್ನು ವಿಧಿಸಲು ಪ್ರಾರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.