![Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ](https://www.udayavani.com/wp-content/uploads/2024/07/Kamlashile-415x304.jpg)
Politics: ಸದ್ಯಕ್ಕಿಲ್ಲ ನಿಗಮ, ಮಂಡಳಿ ಅಧ್ಯಕ್ಷರ ನೇಮಕ
ಕೇವಲ ಲೋಕಸಭಾ ಚುನಾವಣೆ ಕುರಿತ ಚರ್ಚೆಗೆ ಸೀಮಿತವಾದ ಕೈ ನಾಯಕರ "ದೆಹಲಿ ಭೇಟಿ"
Team Udayavani, Jan 4, 2024, 10:13 PM IST
![VIDHANA SOUDHA 1](https://www.udayavani.com/wp-content/uploads/2024/01/VIDHANA-SOUDHA-1-1-620x386.jpg)
ಬೆಂಗಳೂರು: “ಕೈ” ನಾಯಕರು ದೆಹಲಿಗೆ ಭೇಟಿ ನೀಡಿದ ಬೆನ್ನಲ್ಲೇ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದು, ಇದು ಆಕಾಂಕ್ಷಿಗಳಲ್ಲಿ ಮತ್ತೆ ನಿರಾಸೆ ಮೂಡಿಸಿದೆ.
ಆದರೆ, ಇದೇ 10ರಂದು ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ನಿಗದಿಯಾಗಿರುವ ಸಭೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದು, ಅಂದು ಚರ್ಚೆ ನಡೆದರೆ ಸಂಕ್ರಾಂತಿ ವೇಳೆಗೆ ಶಾಸಕರು, ಪಕ್ಷದ ಮುಖಂಡರಿಗೆ ಅಧಿಕಾರ ಭಾಗ್ಯ ಸಿಗಬಹುದು ಎಂಬ ಲೆಕ್ಕಾಚಾರವೂ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ದೆಹಲಿಗೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಮರುಚಾಲನೆ ದೊರೆಯಲಿದ್ದು, ಅಂತಿಮ ಪಟ್ಟಿ ಕೂಡ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ಗರಿಗೆದರಿದ್ದವು. ಆಕಾಂಕ್ಷಿಗಳು ಸಹ ದಿಲ್ಲಿಯತ್ತ ನೋಟ ಹರಿಸಿದ್ದರು. ಆದರೆ, “ದೆಹಲಿ ಭೇಟಿ” ಬರೀ ಲೋಕಸಭಾ ಚುನಾವಣೆ ಕುರಿತ ಚರ್ಚೆಗೆ ಸೀಮಿತವಾಯಿತು. ಇದು ಆಕಾಂಕ್ಷಿಗಳಲ್ಲಿ ತೀವ್ರ ಬೇಸರ ಉಂಟುಮಾಡಿದೆ.
ಪ್ರತಿ ಬಾರಿ ದೆಹಲಿಗೆ ಹೋದಾಗಲೂ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮೂಲಕ ಶಾಸಕರು, ಹಿರಿಯ ಕಾರ್ಯಕರ್ತರಿಗೆ “ಅಧಿಕಾರ ಭಾಗ್ಯ” ಸಿಗಬಹುದು ಎಂಬ ಆಸೆ ಮೊಳಕೆಯೊಡೆಯುತ್ತದೆ. ನಾಯಕರು ವಾಪಸ್ ಆಗುತ್ತಿದ್ದಂತೆ ನಿರಾಸೆಯ ಉತ್ತರ ಸಿಗುತ್ತದೆ. ಇದು ಆಕಾಂಕ್ಷಿಗಳ ಅಸಮಾಧಾನಕ್ಕೂ ಕಾರಣವಾಗುತ್ತಿದೆ. ಬೆಳಗಾವಿ ಅಧಿವೇಶನಕ್ಕೂ ಮೊದಲೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ಮತ್ತೂಂದು ಅಧಿವೇಶನ ಹತ್ತಿರ ಬರುತ್ತಿದೆ. ಆದರೆ, ಇದೇ 10ಕ್ಕೆ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ನಿಗದಿಯಾಗಿರುವ ಸಭೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಿ ಅಂದು ಚರ್ಚಿಸಿದರೆ ಸಂಕ್ರಾಂತಿ ವೇಳೆಗೆ ಶಾಸಕರು, ಪಕ್ಷದ ಮುಖಂಡರಿಗೆ ಅಧಿಕಾರ ಭಾಗ್ಯ ಸಿಗಬಹುದೇ ಎಂಬ ಕುತೂಹಲ ಉಂಟಾಗಿದೆ.
ಟಾಪ್ ನ್ಯೂಸ್
![Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ](https://www.udayavani.com/wp-content/uploads/2024/07/Kamlashile-415x304.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.