ಡಾ| ಜಗದೀಶ್‌ ಗುಡಾರು ಅವರಿಗೆ “2023ರ ಜೀವಮಾನ ಪ್ರಶಸ್ತಿ” ಪ್ರದಾನ


Team Udayavani, Jan 5, 2024, 1:00 AM IST

jee

ಮಂಗಳೂರು: ನಾಲ್ಕು ದಶಕಗಳಿಂದ ಪೋಲಿಯೋ ಬಾಧಿತ ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿರುವ ಡಾ| ಜಗದೀಶ್‌ ಗುಡಾರು ಅವರ ಸೇವಾ ಮನೋಭಾವನೆಯನ್ನು ಪರಿಗಣಿಸಿ ಆಂಧ್ರಪ್ರದೇಶದ ರಾಷ್ಟ್ರೀಯ ಸೇವಾ ತಿರುಪತಿ ಸಮಿತಿ ವತಿಯಿಂದ 2023ರ ಜೀವಮಾನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕೃಷಿಕ ಕುಟುಂಬದಲ್ಲಿ ಜನಿಸಿದ ಡಾ| ಗುಡಾರು ಸದ್ಯ ಆಂಧ್ರಪ್ರದೇಶದ ಗುಂಟೂರಿನಲ್ಲಿರುವ ಆಸ್ಟರ್‌ ರಮೇಶ್‌ ಆಸ್ಪತ್ರೆಗಳ ಶೈಕ್ಷಣಿಕ ನಿರ್ದೇಶಕರಾಗಿದ್ದಾರೆ. ಎಂಬಿಬಿಎಸ್‌ ಶಿಕ್ಷಣ ಮುಗಿಸಿದ ಜಗದೀಶ್‌ ಅವರು ಕೆಎಂಸಿ, ಮಣಿಪಾಲದಲ್ಲಿ ಎಂ.ಎಸ್‌. ಆರ್ಥೋ ಪದವಿ, ಯುಎಸ್‌ಎಐಎಂನಿಂದ ಎಂ.ಎಸ್‌., ಎಂಸಿಎಚ್‌ ಪದವಿ ಪಡೆದು ಟ್ರಾಮಾ ಲೆವೆಲ್‌ ನಿರ್ವಹಣೆಯಲ್ಲಿ ಕೀಲು ಮರುಜೋಡಣೆಯಲ್ಲಿ ಸಾಗರೋತ್ತರ ಫೆಲೋಶಿಪ್‌ ಪಡೆದುಕೊಂಡಿದ್ದಾರೆ.

1981ರಲ್ಲಿ ತಿರುಪತಿಯ ಬಿಐಆರ್‌ಆರ್‌ಡಿ ಟ್ರಸ್ಟ್‌ ಆಸ್ಪತ್ರೆಯಲ್ಲಿ ಆರ್ಥೋಪೆಡಿಕ್ಸ್‌ ವಿಭಾಗದ ನಿರ್ದೇಶಕರಾಗಿ ಕರ್ತವ್ಯ ಆರಂಭಿಸಿದರು. ಬಳಿಕ ಸಾವಿರಾರು ಮಂದಿಗೆ ಉಚಿತ ಮೂಳೆಚಿಕಿತ್ಸೆ ನೀಡಿದರು. ರಮೇಶ್‌ ಗ್ರೂಪ್‌ ಆಫ್‌ ಹಾಸ್ಪಿಟಲ್ಸ್‌ನಲ್ಲಿ ಅಕಾಡೆಮಿಕ್‌ ಡೀನ್‌ ಹಾಗೂ ಭ‌ಗವಾನ್‌ ಶ್ರೀ ವೆಂಕಯ್ಯ ಸ್ವಾಮಿ ಆಶ್ರಮ ವೈದ್ಯಶಾಲಾದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ.
ಡಾ| ಜಗದೀಶ್‌ 1,83,000ಕ್ಕೂ ಅಧಿಕ ರೋಗಿಗಳಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನೀಡುವ ಮೂಲಕ ಯಶಸ್ವಿ ವೈದ್ಯರಾಗಿ ಗುರುತಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿ ಸಂದಿವೆ. ಮೂಳೆ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ಕರೇಡು ಮತ್ತು ವೆಂಕಟಗಿರಿ ಗ್ರಾಮಗಳ ಮೀನುಗಾರರು, ನೇಕಾರರು ಸೇರಿದಂತೆ ಸಾರ್ವಜನಿಕರಿಗೆ ಅವರು ನಿರಂತರವಾಗಿ ಉಚಿತ ಮೂಳೆ ಚಿಕಿತ್ಸೆಯ ಸೇವೆಗಳನ್ನು ನೀಡುತ್ತಿದ್ದಾರೆ.

ಕರೇಡು ಗ್ರಾಮದಲ್ಲಿ 3,700ಕ್ಕಿಂತ ಹೆಚ್ಚು ವೆಂಕಟಗಿರಿಯಲ್ಲಿ 3,500 ಜನರು ಅವರ ವೈದ್ಯಕೀಯ ಚಿಕಿತ್ಸೆಯಿಂದ ಪ್ರಯೋಜನ ಪಡೆದಿದ್ದಾರೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪೋಲಿಯೋ ಸರ್ಜಿಕಲ್‌ ಮತ್ತು ಸ್ಕ್ರೀನಿಂಗ್‌ ಶಿಬಿರ ಏರ್ಪಡಿಸುವ ಗುರಿ ಹೊಂದಿರುವ ಅವರು 1996ರಿಂದ ಆಂಧ್ರಪ್ರದೇಶ, ತಮಿಳುನಾಡು, ಮಧ್ಯಪ್ರದೇಶ, ಪಶ್ಚಿಮ ಬಂಗಾಲ, ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮುಂತಾದ ಕಡೆಗಳಲ್ಲಿ 1,56,711 ಪೋಲಿಯೊ ಪೀಡಿತರನ್ನು ತಪಾಸಣೆ ಮಾಡಿ 44,235 ರೋಗಿಗಳಿಗೆ ಉಚಿತ ಪೊಲಿಯೋ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.