ಬಾಗಲಕೋಟೆ: ಹೆಲ್ಮೆಟ್‌ ಜಾಗೃತಿಗೆ ಬೈಕ್‌ ಹತ್ತಿ ರಸ್ತೆಗಿಳಿದ ಎಸ್ಪಿ


Team Udayavani, Jan 6, 2024, 2:20 PM IST

ಬಾಗಲಕೋಟೆ: ಹೆಲ್ಮೆಟ್‌ ಜಾಗೃತಿಗೆ ಬೈಕ್‌ ಹತ್ತಿ ರಸ್ತೆಗಿಳಿದ ಎಸ್ಪಿ

ಬಾಗಲಕೋಟೆ: ರಸ್ತೆ ಅಪಘಾತ ತಡೆ ಹಾಗೂ ಅಪಘಾತದ ವೇಳೆ ಸಾವನ್ನಪ್ಪುವುದನ್ನು ತಪ್ಪಿಸಲು ಹೆಲ್ಮೆಟ್‌ ಕಡ್ಡಾಯಗೊಳಿಸಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರಡ್ಡಿ, ಸ್ವತಃ ಹೆಲ್ಮೆಟ್‌ ಧರಿಸಿ ಬೈಕ್‌ ಹತ್ತಿ ಜಾಗೃತಿಗಿಳಿದರು.

ಶುಕ್ರವಾರ ನವನಗರದ ಜಿಲ್ಲಾ ಪೊಲೀಸ್‌ ಕಚೇರಿಯಿಂದ ಆರಂಭಗೊಂಡ ಜಾಗೃತಿ ಕಾರ್ಯದಲ್ಲಿ ಸ್ವತಃ ಎಸ್ಪಿ ಅಮರಾಥನ ರಡ್ಡಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಮಹಾಂತೇಶ ಗದ್ದಿ, ಡಿವೈಎಸ್ಪಿ ಪಂಪನಗೌಡ ಹಾಗೂ ಇಡೀ ಪೊಲೀಸರ ತಂಡ, ನಗರದಲ್ಲಿ ಬೈಕ್‌ ರ್ಯಾಲಿ ನಡೆಸಿದರು.

ಈ ವೇಳೆ ಸಂಚಾರಿ ನಿಮಯ ಪಾಲಿಸಿ, ಹೆಲ್ಮೆಟ್‌ ಧರಿಸಿ ಬಂದ ಸಾರ್ವಜನಿಕರಿಗೆ ಸ್ವತಃ ಎಸ್ಪಿ ಹಾಗೂ ಇತರ ಅಧಿಕಾರಿಗಳು ಹೂವು ನೀಡಿ ಶ್ಲಾಘಿಸಿದರು. ಅಲ್ಲದೇ ಪ್ರತಿಯೊಬ್ಬ ಬೈಕ್‌ ಸವಾರರ, ಹೆಲ್ಮೆಟ್‌ ಧರಿಸಿಯೇ ಬೈಕ್‌ ಚಾಲನೆ ಮಾಡಬೇಕು. ಜತೆಗೆ ಹಿಂಬದಿ ಸವಾರರಿಗೂ ಹೆಲ್ಮೆಟ್‌ ಕಡ್ಡಾಯಗೊಸಲಾಗಿದೆ. ಇದಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಬಳಿಕ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಎಸ್ಪಿ ಅಮರನಾಥ ಮಾತನಾಡಿ, ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸುವಾಗ ಅಪಘಾತ ಸಂಭವಿಸಿದರೆ ತಲೆಗೆ ಪೆಟ್ಟು ಬೀಳುವುದನ್ನು ತಪ್ಪಿಸಬಹುದು. ಜಿಲ್ಲೆಯಾದ್ಯಂತ ಹೆಲ್ಮೆಟ್‌ ಧರಿಸದೇ ಬೈಕ್‌ ಓಡಿಸಿದ್ದರಿಂದ ಬೈಕ್‌ ಸವಾರ, ಹಿಂದೆ ಕುಳಿತವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೂ ಕೆಲ ಪ್ರಕರಣಗಳಲ್ಲಿ ತಲೆಗೆ ಪೆಟ್ಟಾಗಿ ಜೀವವೇ ಕಳೆದುಕೊಂಡಿದ್ದಾರೆ. ಇದರಿಂದ ಅವರನ್ನೇ ಅವಲಂಬಿತವಾದ ಕುಟುಂಬ ಸಂಕಷ್ಟಕ್ಕೆ ಈಡಾಗುತ್ತದೆ. ಆದ್ದರಿಂದ ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸಬೇಕು.

ಇಂಹತ ಜಾಗೃತಿ ಕಾರ್ಯಕ್ರಮ ಮಾಡುವ ಜತೆಗೆ ಜನರಿಗೆ ಮನವೊಲಿಸುವ ಕೆಲಸ ನಾವು ಮಾಡದಿದ್ದರೂ ವೇತನ ಬರುತ್ತದೆ. ಆದರೆ, ಜನರ ಜೀವ ಮುಖ್ಯ. ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಲೇಬೇಕು ಎಂದು ತಿಳಿಸಿದರು.

ನಿತ್ಯ ಒಂದು ಸಾವಿರ ಕೇಸ್‌: ಜಿಲ್ಲೆಯಾದ್ಯಂತ ಹೆಲ್ಮೆಟ್‌ ಧರಿಸದೇ ಬೈಕ್‌ ಓಡಿಸಿದರೆ, ನಿತ್ಯವೂ ಕನಿಷ್ಠ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಬೇಕಾಗುತ್ತದೆ. ಜನರು ಇದಕ್ಕೆ ಅವಕಾಶ ಕೊಡಬಾರದು. ಬೈಕ್‌ ಸವಾರ ಮತ್ತು ಹಿಂಬದಿ ಸವಾರ ಹೆಲ್ಮೆಟ್‌ ಹಾಕದೇ ಸಂಚರಿಸಿದರೆ 500 ರೂ. ದಂಡ ವಿಧಿಸಲಾಗುವುದು. ಸಾಮಾನ್ಯ ಜನರು ನಿತ್ಯ ದುಡಿದ ಹಣವನ್ನು ದಂಡಕ್ಕೆ ಹಾಕುವ ಬದಲು, ಹೆಲ್ಮೆಟ್‌ ಹಾಕಿಯೇ ಸಂಚರಿಸಬೇಕು ಎಂದು ತಿಳವಳಿಕೆ ನೀಡಿದರು. ಯಾರೇ ಮದ್ಯಪಾನ ಮಾಡಿ ವಾಹನ ಚಲಾಯಿಸಿದರೂ ಪ್ರಕರಣ ದಾಖಲಿಸುಲಾಗುತ್ತದೆ.

ಪೊಲೀಸರ ಕರ್ತರ್ವಕ್ಕೆ ಅಡ್ಡಿಪಡಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು. ಇಲಾಖೆಯೊಂದಿಗೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್‌ ದೇಸಾಯಿ, ಡಿವೈಎಸ್‌ಪಿ ಪಂಪನಗೌಡ, ನಗರ ಠಾಣೆ ಸಿಪಿಐ ಗುರುನಾಥ ಚವಾಣ, ನವನಗರ ಠಾಣೆ ಸಿಪಿಐ ಬಿರಾದಾರ, ಗ್ರಾಮೀಣ ಠಾಣೆ ಸಿಪಿಐ ಆರ್‌.ಎಚ್‌. ಪಾಟೀಲ, ಸಂಚಾರಿ ಠಾಣೆಯ ಪಿಎಸ್‌ಐ ಪ್ರಕಾಶ ಬಣಕಾರ ಮುಂತಾದವರು ಪಾಲ್ಗೊಂಡಿದ್ದರು.

ಹೂವು ನೀಡಿ ಸ್ವಾಗತಿಸಿದ ಆಟೋ ಚಾಲಕರು

ಹೆಲ್ಮೆಟ್‌ ಜಾಗೃತಿಗಾಗಿ ಸ್ವತಃ ಹೆಲ್ಮೆಟ್‌ ಧರಿಸಿ, ಎನ್‌ ಫೀಲ್ಡ್‌ ಬೈಕ್‌ ಹತ್ತಿ ಬಾಗಲಕೋಟೆಯ ರಸ್ತೆಗಿಳಿದ ಎಸ್ಪಿ ಅಮರನಾಥ ರಡ್ಡಿ ಅವರನ್ನು ನಗರದ ವಿವಿಧೆಡೆ ಆಟೋ ಚಾಲಕರು, ಸಾರ್ವಜನಿಕರು ಹೂಗುಚ್ಛ ನೀಡಿ ಸ್ವಾಗತಿಸಿದರು. ನವನಗರದ ಎಸ್ಪಿ ಕಚೇರಿಯಿಂದ ಹೊರಟ ಬೈಕ್‌ ರ್ಯಾಲಿ ನವನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಲ್ಲಿಂದ ವಿದ್ಯಾಗಿರಿ,
ಬಾಗಲಕೋಟೆಯ ಅಂಬೇಡ್ಕರ್‌ ವೃತ್ತ, ಹಳೆಪೋಸ್ಟ್‌, ವಲ್ಲಭಬಾಯ್‌ ಚೌಕ್‌, ಎಂಜಿ ರಸ್ತೆಯಿಂದ ಬಸವೇಶ್ವರ ವೃತ್ತ ತಲುಪಿದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.