Kambala ದೇಶೀಯ ಮಟ್ಟಕ್ಕೆ ವಿಸ್ತರಿಸಲಿ: ಆರ್. ಅಶೋಕ್
Team Udayavani, Jan 7, 2024, 1:05 AM IST
ಕಾರ್ಕಳ: ತುಳುನಾಡಿನ ಕ್ರೀಡೆ ಕಂಬಳ ಸಾಹಸ ಮತ್ತು ರೋಮಾಂಚನ ಕ್ರೀಡೆ. ಕೋಣ, ಓಡಿಸುವವರ ಮೈಕಟ್ಟು ಅದ್ಭುತ. ಕಂಬಳ ರಾಜಧಾನಿಗೂ ಬಂದಿದೆ. ಕಂಬಳ ದೇಶೀಯ ಮಟ್ಟಕ್ಕೆ ವಿಸ್ತರಿಸಲಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ಮಿಯ್ಯಾರು ಕಂಬಳ ಸಮಿತಿ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದಲ್ಲಿ 20ನೇ ವರ್ಷದ ಲವ-ಕುಶ ಜೋಡುಕರೆ ಕಂಬಳ ಮಹೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಸಕ ಅಶ್ವತ್ಥನಾರಾಯಣ ಮಾತನಾಡಿ ಸ್ವಯಂ ಪ್ರೇರಿತರಾಗಿ ಭಾಗವಹಿಸುವುದೆ ಕಂಬಳ ಕ್ರೀಡೆಯ ವಿಶೇ
ಷತೆ. ಒಲಿಂಪಿಕ್ ದಾಖಲೆ ಮುರಿಯುವಷ್ಟು ಪ್ರತಿಭೆಗಳು ಕಂಬಳದಲ್ಲಿ ಕೋಣ ಓಡಿಸುತ್ತಾರೆ ಎಂದರು.
ಶಾಸಕ ವಿ. ಸುನಿಲ್ ಕುಮಾರ್ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರ ಕಂಬಳಕ್ಕೆ ಅನುದಾನ ಮುಂದುವರಿಸಬೇಕು, ಹೆಚ್ಚು ಅನುದಾನ ಒದಗಿಸಬೇಕು ಎಂದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ, ಶಾಸಕ ಭೈರತಿ ಬಸವರಾಜ್, ಶಾಸಕ ಮನಿರಾಜು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಶಾಸಕ ಕುಮಾರ ಬಂಗಾರಪ್ಪ, ಟಿ.ವಿ. ನಿರೂಪಕಿ ವೀಣಾ ಪೂಜಾರಿ, ಕಂಬಳ ಕಾರ್ಯಾಧ್ಯಕ್ಷ ಜೀವನ್ ದಾಸ್ ಅಡ್ಯಂತಾಯ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ಬೆಳಪು ದೇವಿಪ್ರಸಾದ್ ಶೆಟ್ಟಿ, ಉದಯ್ ಶೆಟ್ಟಿ ಮುನಿಯಾಲು, ಮಟ್ಟಾರ್ ರತ್ನಾಕರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.
ಸಮಿತಿ ಗೌರವ ಸಲಹೆಗಾರ ಡಾ| ಎಂ.ಎನ್ ರಾಜೇಂದ್ರಕುಮಾರ್, ಕಂಬಳ ಸಾಧಕ ಸುಂದರ ಹೆಗ್ಡೆ, ಕೆರ್ವಾಶೆ ನಾರಾಯಣ ಬಂಗೇರ, ರಾಷ್ಟ್ರಮಟ್ಟದ ಶಾಲಾ ಕ್ರೀಡಾಪಟು ಹಿತೇಶ್ ಇವರನ್ನು ಸಮ್ಮಾನಿಸಲಾಯಿತು.
ಸ್ವಾಗತ ರವೀಂದ್ರಕುಮಾರ್, ಸತೀಶ್ ಹೊಸ್ಮಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.